AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಮುನ್ನೆಲೆಗೆ ಬಂತೇ ಹಿಂದೂ ಅಶ್ಲೀಲ ಪದ ಚರ್ಚೆ? ನಮ್ಮ ಭಾವನೆ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದ ಬೊಮ್ಮಾಯಿ

ಬೆಳಗಾವಿ ಜಿಲ್ಲೆಯ ಯಮಕನಮರಡಿಯಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬೊಮ್ಮಾಯಿ, ಹಿಂದೂ ಪದದ ಬಗ್ಗೆ ಸತೀಶ್ ಜಾರಕಿಹೊಳಿ ನೀಡಿದ್ದ ವಿವಾದಿತ ಹೇಳಿಕೆಯನ್ನು ಪರೋಕ್ಷವಾಗಿ ಪ್ರಸ್ತಾಪಿಸಿದ್ದಾರೆ.

ಮತ್ತೆ ಮುನ್ನೆಲೆಗೆ ಬಂತೇ ಹಿಂದೂ ಅಶ್ಲೀಲ ಪದ ಚರ್ಚೆ? ನಮ್ಮ ಭಾವನೆ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Ganapathi Sharma
|

Updated on: Apr 26, 2023 | 3:08 PM

Share

ಬೆಳಗಾವಿ: ಹಿಂದೂ ಎಂಬ ಪದ ಅಶ್ಲೀಲ, ಅದು ಪರ್ಷಿಯನ್​ಗೆ ಸಂಬಂಧಿಸಿದ್ದು ಎಂದು ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ನೀಡಿದ್ದ ಹೇಳಿಕೆ ಚುನಾವಣಾ ಪ್ರಚಾರದ ಭರಾಟೆಯ ಈ ಸಂದರ್ಭದಲ್ಲಿ ಮತ್ತೆ ಮುನ್ನೆಲೆಗೆ ಬರಲಿದೆಯೇ? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಆ ವಿಚಾರವಾಗಿ ಪರೋಕ್ಷವಾಗಿ ಪ್ರಸ್ತಾಪಿಸಿ ಸತೀಶ್ ಜಾರಕಿಹೊಳಿ ವಿರುದ್ಧ ಟೀಕಾ ಪ್ರಹಾರ ನಡೆಸಿರುವುದು ಈ ಪ್ರಶ್ನೆ ಹುಟ್ಟುಹಾಕಿದೆ. ಬೆಳಗಾವಿ ಜಿಲ್ಲೆಯ ಯಮಕನಮರಡಿಯಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬೊಮ್ಮಾಯಿ, ಹಿಂದೂ ಪದದ ಬಗ್ಗೆ ಸತೀಶ್ ಜಾರಕಿಹೊಳಿ ನೀಡಿದ್ದ ವಿವಾದಿತ ಹೇಳಿಕೆಯನ್ನು ಪರೋಕ್ಷವಾಗಿ ಪ್ರಸ್ತಾಪಿಸಿದ್ದಾರೆ.

ಸತೀಶ್ ಜಾರಕಿಹೊಳಿ ನಮ್ಮ ಭಾವನೆ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ನಾವು ಮಾಡಿದ ಅಭಿವೃದ್ಧಿ ಮತ್ತು ಸೇವೆ ಮೇಲೆ ಮತ ಪಡೆಯಬೇಕಿದೆ. ಜನರ ಭಾವನೆ ಜೊತೆ ಚೆಲ್ಲಾಟ ಸರಿಯಲ್ಲ. ಎಲ್ಲರಿಗೂ ಅವರವರ ಸಂಸ್ಕೃತಿ, ಪರಂಪರೆ ಬಗ್ಗೆ ಸ್ವಾಭಿಮಾನ ಇರುತ್ತದೆ. ಅದಕ್ಕೆ ಧಕ್ಕೆ ತರುವಂತಹ ಕೆಲಸವನ್ನು ಯಾರೂ ಕೂಡ ಮಾಡಬಾರದು. ಈ ಬಾರಿ ಯಮಕನಮರಡಿ ಕ್ಷೇತ್ರದಲ್ಲಿ ಪರಿವರ್ತನೆ ಕ್ರಾಂತಿ ಆಗಲಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಜತೆಗೆ, ಬಿಜೆಪಿ ಅಭ್ಯರ್ಥಿ ಬಸವರಾಜ ಹುಂದ್ರಿ ಅವರನ್ನು 25 ಸಾವಿರ ಮತಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: TV9 Kannada CVoter survey: ಅತಂತ್ರ ವಿಧಾನಸಭೆಯತ್ತ ರಾಜ್ಯ; ಟಿವಿ9, ಸಿವೋಟರ್ ಸಮೀಕ್ಷೆ

‘ಹಿಂದೂ’ ಎಂಬುದು ಭಾರತೀಯ ಪದವಲ್ಲ, ಅದು ಪರ್ಷಿಯನ್​ಗೆ ಸೇರಿದ್ದು. ಅದಕ್ಕೆ ಅಶ್ಲೀಲ ಅರ್ಥವಿದೆ ಎಂದು ಸತೀಶ್ ಜಾರಕಿಹೊಳಿ 2022ರ ನವೆಂಬರ್​​ನಲ್ಲಿ ಹೇಳಿದ್ದರು. ಇದು ವಿವಾದಕ್ಕೆ ಗ್ರಾಸವಾಗಿದ್ದಲ್ಲದೆ, ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಷರತ್ತಿನೊಂದಿಗೆ ಬಿಜೆಪಿಗೆ ಬಂದಿಲ್ಲವೆಂದ ಕುಮಟಳ್ಳಿ

ಈ ಮಧ್ಯೆ, ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ಶಾಸಕ ಮಹೇಶ್ ಕುಮಟಳ್ಳಿ, 2019ರಲ್ಲಿ ಬಿಜೆಪಿಗೆ ಸೇರಿದಾಗ ಯಾವುದೇ ಷರತ್ತು ವಿಧಿಸಿಲ್ಲ. ನನಗೆ ಸಚಿವ ಸ್ಥಾನ ಸಿಗದಿದ್ದಾಗಲೂ ಬೇಸರವಾಗಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಕೊಡಬೇಕೆಂದು ಯಡಿಯೂರಪ್ಪ ಬಳಿ ಕೇಳಿದೆ. ಅವರು ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದರು. ಅತೀ ಹೆಚ್ಚು ಅನುದಾನ ತಂದು ಅಥಣಿ ಕ್ಷೇತ್ರ ಅಭಿವೃದ್ಧಿ ಮಾಡಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ