AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಕೆಲಸದ ಮೇಲೆ ನಿಮಗೆ ನಂಬಿಕೆ ಇದ್ದಿದ್ದರೆ, ಸಿಎಂ ಬೊಮ್ಮಾಯಿಗೆ ಸಲೀಂ ಅಹ್ಮದ್​ ಸಾಲು ಸಾಲು ಪ್ರಶ್ನೆ

ನಿಮ್ಮ ಕೆಲಸದ ಮೇಲೆ ನಿಮಗೆ ನಂಬಿಕೆ ಇದ್ದಿದ್ದರೆ, ನಿಮ್ಮ ಚುನಾವಣಾ ಪ್ರಚಾರಕ್ಕೆ ಚಿತ್ರ ನಟ ಸುದೀಪ್ ಯಾಕೆ ಬೇಕಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್​ ಸಿಎಂ ಬಸವರಾಜ ಬೊಮ್ಮಾಯಿಗೆ ಸಾಲು ಸಾಲು ಪ್ರಶ್ನೆ ಮಾಡಿದ್ದಾರೆ.

ನಿಮ್ಮ ಕೆಲಸದ ಮೇಲೆ ನಿಮಗೆ ನಂಬಿಕೆ ಇದ್ದಿದ್ದರೆ, ಸಿಎಂ ಬೊಮ್ಮಾಯಿಗೆ ಸಲೀಂ ಅಹ್ಮದ್​ ಸಾಲು ಸಾಲು ಪ್ರಶ್ನೆ
ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್
ಗಂಗಾಧರ​ ಬ. ಸಾಬೋಜಿ
|

Updated on:Apr 09, 2023 | 5:45 PM

Share

ಹಾವೇರಿ: ನಿಮ್ಮ ಕೆಲಸದ ಮೇಲೆ ನಿಮಗೆ ನಂಬಿಕೆ ಇದ್ದಿದ್ದರೆ, ನಿಮ್ಮ ಚುನಾವಣಾ ಪ್ರಚಾರಕ್ಕೆ ಚಿತ್ರ ನಟ ಸುದೀಪ್ ಯಾಕೆ ಬೇಕಿತ್ತು. ನಿಮ್ಮ ಕೆಲಸದ ಮೇಲೆ ನಿಮಗೆ ನಂಬಿಕೆ ಇದ್ದಿದ್ದರೆ, 23 ಸಾವಿರ ರೌಡಿಗಳನ್ನು ಕರೆದುಕೊಂಡು ಚುನಾವಣೆ ಯಾಕೆ ಮಾಡುತ್ತಿದ್ದೀರಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ (salim ahmed)​ ಸಿಎಂ ಬಸವರಾಜ ಬೊಮ್ಮಾಯಿಗೆ ಸಾಲು ಸಾಲು ಪ್ರಶ್ನೆ ಮಾಡಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಬೊಮ್ಮಾಯಿಯವರು ನಮ್ಮ ಪಕ್ಷದ ನಾಯಕರನ್ನು ಕರೆದುಕೊಂಡ ಹೋಗಿ ಯಾರು ಬರುತ್ತಾರೆ ಬರಲಿ ಅಂತಾ ಚಾಲೆಂಜ್ ಮಾಡುತ್ತಾರೆ. ಯಾಕೆ ನಿಮ್ಮ ಕೆಲಸದ ಮೇಲೆ ನಿಮಗೆ ನಂಬಿಕೆ ಇಲ್ವಾ? ನಮ್ಮ ಕಾರ್ಯಕರ್ತರನ್ನು ಸೆಳೆದು ಚಾಲೆಂಜ್ ಹಾಕ್ತಿರಾ? ನೀವು ಸಿಎಂ ಆಗಿದ್ದಾಗ ನಡೆದ ಹಾನಗಲ್ಲ ಉಪಚುನಾವಣೆಯಲ್ಲಿ ಗೆದಿದ್ದು ನಾವೇ. ನಿಮ್ಮ‌ ಕ್ಷೇತ್ರದ ಬಂಕಾಪುರ ಸ್ಥಳಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿತು. ನೀವು ಕರ್ನಾಟಕದಲ್ಲಿ ಕೇವಲ 60 ಸೀಟುಗಳಲ್ಲಿ‌ ಮಾತ್ರ ಗೆಲ್ಲುತ್ತೀರಿ ಎಂದು ವಾಗ್ದಾಳಿ ಮಾಡಿದರು.

ಏಪ್ರಿಲ್ 16 ರಂದು ಕೋಲಾರದಲ್ಲಿ ಬೃಹತ್ ಸಮಾವೇಶ

ಕೋಲಾರದಲ್ಲಿ ಏಪ್ರಿಲ್ 16 ರಂದು ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಯವರು ಆಗಮಿಸಲಿದ್ದಾರೆ. ಬಿಜೆಪಿಯವರು ರಾಹುಲ್ ಗಾಂಧಿ ಅವರಿಂದ ಹೆದರಿದ್ದಾರೆ. ಪಾದಯಾತ್ರೆಯಲ್ಲಿ ರಾಹುಲ್​ಗೆ ಸಿಕ್ಕ ಬೆಂಬಲ ಬಿಜೆಪಿ ಭಯ ಹುಟ್ಟಿಸಿದೆ. ರಾಹುಲ್ ಗಾಂಧಿಯವರನ್ನು ತಡೆಯಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ನಾಯಕರಿಗೆ ಉತ್ತರ ನೀಡಲು ನಾವು ದೊಡ್ಡ ಕಾರ್ಯಕ್ರಮ ಹಮ್ಮಿಕೊಂಡಿದ್ದೆವೆ ಎಂದು ತಿಳಿಸಿದರು.

ಇದನ್ನೂ ಓದಿ: ರೆಡ್ಡಿಯಿಂದ ಬೆಳೆದವರೇ ಇಂದು ಅವರನ್ನ ದೂರಮಾಡಿದ್ದಾರೆ, ಸೋಮಶೇಖರ, ಶ್ರೀರಾಮುಲು ವಿರುದ್ಧ ಲಕ್ಷ್ಮೀ ಪರೋಕ್ಷ ವಾಗ್ದಾಳಿ

ಏಪ್ರಿಲ್​ 10 ರಂದು ಮೂರನೆ ಪಟ್ಟಿ ಬಿಡುಗಡೆ

ಏಪ್ರಿಲ್​ 10 ರಂದು ಮೂರನೆ ಪಟ್ಟಿ ಬಿಡುಗಡೆ ಮಾಡುತ್ತೇವೆ. ಬಿಜೆಪಿಯವರು ಇದುವರೆಗೂ ಒಂದೇ ಒಂದು ಪಟ್ಟಿ ಬಿಡುಗಡೆ ಮಾಡುವುದಕ್ಕೆ ಆಗಲಿಲ್ಲ. ಬಿಜೆಪಿಯ ಮುಖಂಡರೆ ಅವರ ಪಕ್ಷದ ಬಗ್ಗೆ ಅಸಹ್ಯ ಪಡುತ್ತಿದ್ದಾರೆ. ನಾವು ಅಭ್ಯರ್ಥಿ ಘೋಷಣೆ ಮಾಡಿದ ಕೆಲವು ಕ್ಷೇತ್ರದಲ್ಲಿ ಸಣ್ಣ ಪುಟ್ಟ ಸಮಸ್ಯೆ ಆಗುತ್ತಿವೆ. ಅಸಮಾಧಾನ ಆಗಿರುವವರ ಜೊತೆ ಮಾತನಾಡಿ ಸಮಾಧಾನ ಮಾಡುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್​ ಸೇರ್ಪಡೆಯಾಗಿದ್ದು ತಪ್ಪಾಯ್ತು, ಪಕ್ಷಕ್ಕೆ ರಾಜೀನಾಮೆ ನೀಡುವುದು ಅಷ್ಟೇ ಬಾಕಿ ಎಂದ ದತ್ತಾ

ಕಾಂಗ್ರೆಸ್​ಗೆ ತಲೆನೋವಾದ ಶಿಗ್ಗಾವಿ 

ಕುಸ್ತಿ ಅಖಾಡಕ್ಕೆ ಯಾರು ಬರ್ತೀರೋ ಬರ್ರಿ ನೋಡೋಣ ಎಂದು ಸಿಎಂ ಓಪನ್ ಚಾಲೆಂಜ್ ಮಾಡಿದ ಹಿನ್ನಲೆ ಶಿಗ್ಗಾವಿ ಕ್ಷೇತ್ರವನ್ನು ಕಾಂಗ್ರೆಸ್ ಹೈಕಮಾಂಡ್ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದಾರೆ. ಮೊದಲು ಶಿಗ್ಗಾವಿ ಟಿಕೆಟ್​​ ಗೊಂದಲ ಬಗೆಹರಿಸಲು ಕಾಂಗ್ರೆಸ್ ಹೈಕಮಾಂಡ್ ಪೇಚಾಡುತ್ತಿದೆ. ಸಲೀಂ ಅಹ್ಮದ್​ರನ್ನು ಕರೆಸಿ ಶಿಗ್ಗಾವಿ ಟಿಕೆಟ್​ ಫೈಟ್ ಬಗೆಹರಿಸಲು ಕಾಂಗ್ರೆಸ್​ ಮುಂದಾಗಿದೆ. ಹಾವೇರಿ ಖಾಸಗಿ ಹೋಟೆಲ್​ನಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್​​ ಆಕಾಂಕ್ಷಿಗಳನ್ನು ಕರೆಸಿ ಸಲೀಂ ಅಹ್ಮದ್​ ಸಭೆ ನಡೆಸುತ್ತಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:45 pm, Sun, 9 April 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ