AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics: ಕಾಂಗ್ರೆಸ್​ಗೆ ಗೆಲುವು, ಸಿಎಂ ಕುರ್ಚಿಗಾಗಿ ಪಕ್ಷದಲ್ಲಿ ಬಣ ರಾಜಕೀಯ ಶುರು

ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದಿದ್ದು, ಕಾಂಗ್ರೆಸ್​ ಪಕ್ಷಕ್ಕೆ ಭರ್ಜರಿ ಬಹುಮತ ದೊರೆತಿದೆ. ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆಯುತ್ತಿದಂತೆ ಒಳ ಒಳಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಸಚಿವ ಸ್ಥಾನಕ್ಕೆ ಲಾಭಿ ಶುರುವಾಗಿದೆ.

Karnataka Politics: ಕಾಂಗ್ರೆಸ್​ಗೆ ಗೆಲುವು, ಸಿಎಂ ಕುರ್ಚಿಗಾಗಿ ಪಕ್ಷದಲ್ಲಿ ಬಣ ರಾಜಕೀಯ ಶುರು
ಸಿದ್ದರಾಮಯ್ಯ, ಡಿಕೆ ಶಿವಕುಮಾರ್​
ವಿವೇಕ ಬಿರಾದಾರ
|

Updated on: May 14, 2023 | 2:21 PM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಮುಗಿದಿದ್ದು, ಕಾಂಗ್ರೆಸ್ (Congress)​ ಪಕ್ಷಕ್ಕೆ ಭರ್ಜರಿ ಬಹುಮತ ದೊರೆತಿದೆ. ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆಯುತ್ತಿದಂತೆ ಒಳ ಒಳಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಸಚಿವ ಸ್ಥಾನಕ್ಕೆ ಲಾಭಿ ಶುರುವಾಗಿದೆ. ಮುಖ್ಯಮಂತ್ರಿ ಗಾದಿಗಾಗಿ ಮೊದ ಮೊದಲಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakuamr)​​ ಮತ್ತು ಸಿದ್ದರಾಮಯ್ಯ (Siddaramaiah) ಅವರ ಹೆಸರು ಮುನ್ನೆಲೆಗೆ ಬರುತ್ತಿದ್ದವು. ಆದರೆ ಈಗ ಪಕ್ಷಕ್ಕೆ ನಿರೀಕ್ಷೆಗೂ ಮೀರಿ ಬಹುಮತ ಸಿಕ್ಕ ನಂತರ ಹೆಸರುಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ಒಬ್ಬರು ಸಿಎಂ 3 ಜನ ಡಿಸಿಎಂ ಎಂಬ ಮಾತು ಕಾಂಗ್ರೆಸ್ ಪಾಳಯದಲ್ಲಿ ಹರಿದಾಡುತ್ತಿದೆ.​ ಈ ಹಿನ್ನೆಲೆ ಕಾಂಗ್ರೆಸ್​ ನಾಯಕರು ಇಂದು (ಮೇ.14) ಸಾಯಂಕಾಲ ಶಾಸಕಾಂಗ ಸಭೆ ಕರೆದಿದ್ದು, ಸಭೆ ಬಳಿಕ ಭಾಗಶಃ ತೀರ್ಮಾನವಾಗುವ ಸಾಧ್ಯತೆ ಇದೆ. ಇದಕ್ಕೂ ಮುನ್ನ ಸಮುದಾಯದ ನಾಯಕರು ಸಭೆ ನಡೆಸಿದ್ದಾರೆ.

ಇಂದು ಬೆಳಿಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಬಣದ ಶಾಸಕರೊಂದಿಗೆ ಪ್ರತ್ಯೇಕ ಮೀಟಿಂಗ್ ನಡೆಸಿದ್ದರು. ಕನ್ನಿಂಗ್ ಹ್ಯಾಂ ರಸ್ತೆಯಲ್ಲಿ ಪ್ರತ್ಯೇಕ ಮೀಟಿಂಗ್ ನಡೆಸಿದ್ದು, ಶಾಸಕ ಭೈರತಿ ಸುರೇಶ್, ಎಂಬಿ ಪಾಟೀಲ್, ಝಮೀರ್ ಅಹಮದ್ ಖಾನ್ ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಉತ್ತರ ಕರ್ನಾಟಕ ಭಾಗದ ಶಾಸಕರ ವಿಶ್ವಾಸಗಳಿಸುವ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ನಾನು ಸಿಎಂ ಆಗಲು ಸಿದ್ದರಾಮಯ್ಯ ಸಹಕರಿಸಬೇಕು: ಡಿಕೆ ಶಿವಕುಮಾರ್​ ಪರೋಕ್ಷ ಹೇಳಿಕೆ

ಇನ್ನು ತಿಳಿದಿರುವುಂತೆ ಸಿಎಂ ಕುರ್ಚಿಯಲ್ಲಿ ಕೂಡಲು ಡಿ.ಕೆ.ಶಿವಕುಮಾರ್ ಅವರು ಕೂಡ ಹವಣಿಸುತ್ತಿದ್ದಾರೆ. ಒಕ್ಕಲಿಗನನ್ನು ಸಿಎಂ ಮಾಡಲು ಒಕ್ಕಲಿಗ ನಾಯಕರು ಮತ್ತು ಶ್ರೀಗಳು ಒಂದಾಗಿದ್ದಾರೆ. ಡಿ.ಕೆ.ಶಿವಕುಮಾರ್​ ಪರವಾಗಿ ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಮಧ್ಯಾಹ್ನ 3 ಗಂಟೆಗೆ ಒಕ್ಕಲಿಗರ ಶ್ರೀಗಳು ಸಭೆ ನಡೆಸುವ ಸಾಧ್ಯತೆ ಇದೆ.

ಸಿಎಂ ಕುರ್ಚಿ ಮೇಲೆ ದಲಿತ ಸಮುದಾಯದ ನಾಯಕರು ಕೂಡ ಕಣ್ಣಿಟ್ಟಿದ್ದಾರೆ. ಈ ಕುರ್ಚಿ ಮೇಲೆ ಡಾ. ಜಿ ಪರಮೇಶ್ವರ ಅವರನ್ನು ಕೂಡಿಸಲು ಪರಮೇಶ್ವರ್​ ಮನೆಯಲ್ಲಿ ದಲಿತ ನಾಯಕರ ಸಭೆ ನಡೆದಿದೆ. 2013ರಲ್ಲಿ ದಲಿತರಿಗೆ ಸಿಎಂ ಆಗುವ ಅವಕಾಶ ಕೈತಪ್ಪಿತ್ತು. ಈ ಹಿನ್ನೆಲೆ ದಲಿತ ಸಿಎಂ ಆಗಬೇಕೆಂದು ವೇಣುಗೋಪಾಲ್, ಬಿ.ಎಲ್.ಶಂಕರ್, ಎಲ್.ಹನುಮಂತಯ್ಯ, ಎಸ್.ಎನ್.ನಾರಾಯಣಸ್ವಾಮಿ ಸೇರಿದಂತೆ ಹಲವರು ಸಭೆ ನಡೆಸಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು