AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Poll 2023: ವಿಧಾನಸಭೆ ಚುನಾವಣೆಗೆ ಜೆಡಿಎಸ್​ ಮೊದಲ ಪಟ್ಟಿ ಪ್ರಕಟ: ಇಲ್ಲಿದೆ ವಿವರ

JDS Candidates List: ಕರ್ನಾಟಕ ವಿಧಾನ ಸಭಾ ಚುನಾವಣೆಗೆ JDS ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಮ್ಮುಖದಲ್ಲಿ 92 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು (ಡಿಸೆಂಬರ್ 19) ಪ್ರಕಟಿಸಿದರು.

Karnataka Assembly Poll 2023: ವಿಧಾನಸಭೆ ಚುನಾವಣೆಗೆ ಜೆಡಿಎಸ್​ ಮೊದಲ ಪಟ್ಟಿ ಪ್ರಕಟ: ಇಲ್ಲಿದೆ ವಿವರ
JDS
TV9 Web
| Edited By: |

Updated on:Dec 19, 2022 | 3:05 PM

Share

ಬೆಂಗಳೂರು: 2023ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಜೆಡಿಎಸ್​ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ (JDS Candidates List)  ಪ್ರಕಟಿಸಿದೆ. JDS ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಮ್ಮುಖದಲ್ಲಿ 93 ಅಭ್ಯರ್ಥಿಗಳ ಮೊಲದ ಪಟ್ಟಿಯನ್ನು ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಇಂದು (ಡಿಸೆಂಬರ್ 19) ಬೆಂಗಳೂರಿನಲ್ಲಿ ಪ್ರಕಟಿಸಿದರು.

ಇದನ್ನೂ ಓದಿ: ನಿಖಿಲ್‌ಗಾಗಿ ಕ್ಷೇತ್ರ ತ್ಯಾಗ ಮಾಡಿದ ಅನಿತಾ ಕುಮಾರಸ್ವಾಮಿ, ತಾಯಿಯಿಂದಲೇ ಮಗನಿಗೆ ಪಟ್ಟಾಭಿಷೇಕ

ರಾಷ್ಟ್ರೀಯ ಪಕ್ಷಗಳಿಗಿಂತ ಮೊದಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿರುವ ಜೆಡಿಎಸ್​, ಗೊಂದಲ ,ಅಸಮಾಧಾನಿತ ಕ್ಷೇತ್ರಗಳಿಗೆ ಟಿಕೆಟ್​ ಘೋಷಣೆ ಮಾಡದೇ ಕಾಯ್ದಿರಿಸಿದೆ. ಇನ್ನು ಜಿಟಿ ದೇವೇಗೌಡಗೆ ಚಾಮುಂಡೇಶ್ವರಿ ಹಾಗು ಅವರ ಮಗ ಹರೀಶ್ ಗೌಡಗೂ ಹುಣಸೂರು ಕ್ಷೇತ್ರದಿಂದ ಜೆಡಿಎಸ್​ ಟಿಕೆಟ್ ನೀಡಿದೆ.​ ಇನ್ನು ಮಂಡ್ಯ ಜಿಲ್ಲೆಯ ಹಾಲಿ ಎಲ್ಲಾ ಜೆಡಿಎಸ್​ ಶಾಸಕರಿಗೂ ಟಿಕೆಟ್​ ನೀಡಲಾಗಿದೆ. ಇನ್ನು ಮುಖ್ಯವಾಗಿ ರಾಮನಗರ ಟಿಕೆಟ್​ ನಿಖಿಲ್​ ಕುಮಾರಸ್ವಾಮಿಗೆ ಕೊಟ್ಟಿದೆ. ಚನ್ನಪಟ್ಟಣದಿಂದ ಹೆಚ್​ಡಿ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ.

ಆದ್ರೆ, ಮೊದಲ ಲಿಸ್ಟ್​ನಲ್ಲಿ ಸಹೋದರ ಹೆಚ್​ಡಿ ರೇವಣ್ಣ ಅವರ ಹೆಸರು ಇಲ್ಲದಿರುವುದು ಅಚ್ಚರಿ ಮೂಡಿಸಿದೆ. ಅಲ್ಲದೇ ಹಾಸನ ಜೆಡಿಎಸ್​ನಲ್ಲಿ ಕೆಲ ಗೊಂದಲಗಳು ಏರ್ಪಟ್ಟಿದ್ದರಿಂದ ​ಜಿಲ್ಲೆಯ ಟಿಕೆಟ್​ ಮೊದಲ ಪಟ್ಟಿಯಲ್ಲಿ ಪ್ರಕಟಿಸಿಲ್ಲ.  ಹೆಚ್​ಡಿ ರೇವಣ್ಣ ಸ್ಪರ್ಧೆಯ ಜೊತೆಗೆ ಅವರ ಪತ್ನಿ ಭವಾನಿ ರೇವಣ್ಣ ಅವರನ್ನೂ ಸಹ ಅಖಾಡಕ್ಕಿಳಿಸಲು ಚಿಂತನೆಗಳು ನಡೆದಿವೆ. ಆದ್ರೆ, ಇದಕ್ಕೆ ಕುಮಾರಸ್ವಾಮಿ ಒಪ್ಪುತ್ತಿಲ್ಲ ಎನ್ನಲಾಗಿದೆ. ಇದರಿಂದ ಹಾಸನ ಜಿಲ್ಲೆಯ ಟಿಕೆಟ್​ ಮೊದಲ ಪಟ್ಟಿಯಲ್ಲಿ ಘೋಷಣೆ ಮಾಡಿಲ್ಲ.

ಜೆಡಿಎಸ್ ಕಾರ್ಯಚಟುವಟಿಕೆಗಳಿಂದ ದೂರ ಉಳಿದುಕೊಂಡು ಪಕ್ಷ ತೊರೆಯುವ ಚಿಂತನೆ ನಡೆಸಿರುವ ನಾಯಕರ ಕ್ಷೇತ್ರಗಳ ಟಿಕೆಟ್​ ಘೋಷಣೆಯಾಗಿಲ್ಲ. ಅರಸಿಕೆರೆ ಶಿವಲಿಂಗೇಗೌಡ, ಕಡೂರು ವೈಎಸ್‌ವಿ ದತ್ತಾ, ಅರಕಲಗೂಡು ಎಟಿ ರಾಮಸ್ವಾಮಿ ಅವರಿಗೆ ಫಸ್ಟ್ ಲಿಸ್ಟ್​ನಲ್ಲಿ ಟಿಕೆಟ್ ನೀಡಿಲ್ಲ.

Published On - 2:29 pm, Mon, 19 December 22

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್