AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರ ಬಂದ ಮೇಲೆ ವರಸೆ ಬದಲು ಮಾಡ್ತಾ ಕಾಂಗ್ರೆಸ್ ? ಗ್ಯಾರಂಟಿಗಳಿಗೆ ಕಂಡೀಷನ್ಸ್​​ ಅಪ್ಲೈ : ಜಿ ಪರಮೇಶ್ವರ

ಮೊದಲ ಕ್ಯಾಬಿನೆಟ್​ನಲ್ಲಿ 5 ಗ್ಯಾರಂಟಿಗಳನ್ನು ಈಡೇರಿಸುವ ಭರವಸೆ ಕೊಟ್ಟಿದ್ದೇವೆ. ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಮೊದಲ ಕ್ಯಾಬಿನೆಟ್​ನಲ್ಲಿ ಜಾರಿ ಮಾಡುತ್ತೇವೆ. ಗ್ಯಾರಂಟಿಗಳನ್ನು ಪ್ರಾಕ್ಟಿಕಲ್ ಆಗಿ ವರ್ಕ್ ಮಾಡಿ ಜಾರಿ ಮಾಡುತ್ತೇವೆ. ಆಯಾ ಇಲಾಖೆ ಸಚಿವರು ಕೂತು ಇದರ ಬಗ್ಗೆ ವರ್ಕ್ ಮಾಡಿ ಜಾರಿ ಮಾಡುತ್ತಾರೆ. ಕಾಂಗ್ರೆಸ್​​ನ ಗ್ಯಾರಂಟಿಗಳಿಗೆ ಕಂಡಿಷನ್ಸ್ ಇರುತ್ತವೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಅಧಿಕಾರ ಬಂದ ಮೇಲೆ ವರಸೆ ಬದಲು ಮಾಡ್ತಾ ಕಾಂಗ್ರೆಸ್ ? ಗ್ಯಾರಂಟಿಗಳಿಗೆ ಕಂಡೀಷನ್ಸ್​​ ಅಪ್ಲೈ : ಜಿ ಪರಮೇಶ್ವರ
ಜಿ ಪರಮೇಶ್ವರ
ವಿವೇಕ ಬಿರಾದಾರ
|

Updated on:May 16, 2023 | 11:48 AM

Share

ಬೆಂಗಳೂರು: ಮೊದಲ ಕ್ಯಾಬಿನೆಟ್​ನಲ್ಲಿ (Cabinet) 5 ಗ್ಯಾರಂಟಿಗಳನ್ನು (5 Guarantee) ಈಡೇರಿಸುವ ಭರವಸೆ ಕೊಟ್ಟಿದ್ದೇವೆ. ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಮೊದಲ ಕ್ಯಾಬಿನೆಟ್​ನಲ್ಲಿ ಜಾರಿ ಮಾಡುತ್ತೇವೆ. ಗ್ಯಾರಂಟಿಗಳನ್ನು ಪ್ರಾಕ್ಟಿಕಲ್ ಆಗಿ ವರ್ಕ್ ಮಾಡಿ ಜಾರಿ ಮಾಡುತ್ತೇವೆ. ಆಯಾ ಇಲಾಖೆ ಸಚಿವರು ಕೂತು ಇದರ ಬಗ್ಗೆ ವರ್ಕ್ ಮಾಡಿ ಜಾರಿ ಮಾಡುತ್ತಾರೆ. ಕಾಂಗ್ರೆಸ್​​ನ (Congress) ಗ್ಯಾರಂಟಿಗಳಿಗೆ ಕಂಡಿಷನ್ಸ್ ಇರುತ್ತವೆ. ಹಾಗೆ ಸುಮ್ಮನೆ ಕೊಟ್ಟರೆ ಎಲ್ಲರೂ ತೆಗೆದುಕೊಳ್ಳುತ್ತಾರೆ. ಹೀಗಾಗಿ ಗ್ಯಾರಂಟಿಗಳಿಗೆ ಮಾನದಂಡ ಇರುತ್ತೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ (G Parameshwara) ಹೇಳಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಗ್ಯಾರಂಟಿಗಳಿಗೆ ಕಂಡೀಷನ್ಸ್​​ ಅಪ್ಲೈ ಎಂದು ಹೇಳಿದ್ದಾರೆ. 2013 ರಲ್ಲಿ ಪರಮೇಶ್ವರಗೆ ಅನ್ಯಾಯ ಆಯ್ತು. ಈ ಬಾರಿ ಅದನ್ನ ಹೈಕಮಾಂಡ್ ಸರಿ ಮಾಡುತ್ತಾ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು ನಾನು ಪಕ್ಷದ ವರಿಷ್ಠರನ್ನು ನಂಬಿದ್ದೇನೆ. ನಾನು ಕೂಡ 50 ಶಾಸಕರ ಗುಂಪು ಕಟ್ಟಿಕೊಂಡು ಹೋಗಬಹುದು. ಆದರೆ ನಾನು ಹಾಗೆ ಮಾಡುವುದಿಲ್ಲ. ನನಗೆ ಪ್ರಿನ್ಸಿಪಲ್ ಇದೆ. ನನಗೆ ಶಿಸ್ತು ಮುಖ್ಯ. ಹೈಕಮಾಂಡ್ ಜವಾಬ್ದಾರಿ ಕೊಟ್ಟರೆ ಖಂಡಿತ ಮಾಡುತ್ತೇನೆ. ಅವಕಾಶ ಕೊಟ್ಟರೆ ಮಾಡೊಲ್ಲ ಅಂತ ಹೇಳೊಲ್ಲ. ಹೈಕಮಾಂಡ್​ಗೆ ನನ್ನ ಬಗ್ಗೆ, ನನ್ನ ಕೆಲಸದ ಬಗ್ಗೆ ಎಲ್ಲವೂ ಗೊತ್ತಿದೆ. ಲಾಬಿ ಮಾಡಬಾರದು ಅಂತ ಸುಮ್ಮನೆ ಇದ್ದೇನೆ. ಸುಮ್ಮನೆ ಇದ್ದೇನೆ ಅಂದರೆ ಅಸಮರ್ಥ ಅಂತ ಅಲ್ಲ. ನಾನು ಸಮರ್ಥನೆ ಎನ್ನುವ ಮೂಲಕ ಪರೋಕ್ಷವಾಗಿ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟರು.

ಇನ್ನು ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು ಸುಸೂತ್ರವಾಗಿ ಮುಖ್ಯಮಂತ್ರಿ ಆಯ್ಕೆ ಆಗಲಿದೆ. ನಮ್ಮ ವರಿಷ್ಠರು ಈಗಾಗಲೇ ಶಾಸಕರ ಅಭಿಪ್ರಾಯ ಪಡೆದಿದ್ದಾರೆ. ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ, ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಚರ್ಚೆ ಮಾಡಿ ನಿರ್ಧರಿಸುತ್ತಾರೆ ಎಂದರು.

ಇದನ್ನೂ ಓದಿ: ಜಗಳೂರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೋಲಿಗೆ ಕಾರಣವಾಯ್ತು ನೋಟಾ, ಹೇಗಂತೀರಾ? ಇಲ್ಲಿದೆ ನೋಡಿ

ಅಧಿಕಾರಕ್ಕೆ ಬಂದ ಮೇಲೆ ಅಧ್ಯಕ್ಷರಿಗೆ ಮುಖ್ಯಮಂತ್ರಿ ಸ್ಥಾನ‌ ಕೊಡುವುದು ಪದ್ಧತಿ. ಸಿದ್ದರಾಮಯ್ಯ ಅವರು ಸಿಎಲ್​ಪಿ ನಾಯಕರಾಗಿ ಕೆಲಸ ಮಾಡಿದ್ದಾರೆ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗೆ ಹೋಗಿದ್ದೇವು. ಸಿಎಂ ಯಾರು ಅಂತಾ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದ್ದಾರೆ.

ಶಾಸಕರ ಜೊತೆ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಮಾಡಿದ ವಿಚಾರವಾಗಿ ಮಾತನಾಡಿದ ಅವರು ಕೆಲವು ಶಾಸಕರು ಅವರ ನಾಯಕರ ಜೊತೆ ಹೋಗಿರುತ್ತಾರೆ. ನಾವು ಕೂಡ ಶಾಸಕರನ್ನು ಕರೆದುಕೊಂಡು ಹೋಗಬಹುದು‌. ಆದರೆ ನಾವು ಹೋಗಲ್ಲ. ಕೆಲವರು ಹೋಗಿದ್ದಾರೆ ಅಷ್ಟೆ. ಅದಕ್ಕೆ ಶಕ್ತಿ ಪ್ರದರ್ಶನ ಅನ್ನೋದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:47 am, Tue, 16 May 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ