AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್​ ಆರೋಪ, 70 ಇಲಿಗಳನ್ನು ತಿಂದ ಬೆಕ್ಕು ಹಜ್​ಗೆ ಹೋದಂತೆ: ಜೆಪಿ ನಡ್ಡಾ ವ್ಯಂಗ್ಯ

ಭ್ರಷ್ಟಾಚಾರ ಅಂದರೆ ಅದು ಕಾಂಗ್ರೆಸ್​. ಕಾಂಗ್ರೆಸ್​ನವರು ಭ್ರಷ್ಟಾಚಾರ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಒಂಥರಾ 70 ಇಲಿಗಳನ್ನು ತಿಂದ ಬೆಕ್ಕು ಹಜ್​ಗೆ ಹೋದಂತೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವ್ಯಂಗ್ಯವಾಡಿದ್ದಾರೆ.

ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್​ ಆರೋಪ, 70 ಇಲಿಗಳನ್ನು ತಿಂದ ಬೆಕ್ಕು ಹಜ್​ಗೆ ಹೋದಂತೆ: ಜೆಪಿ ನಡ್ಡಾ ವ್ಯಂಗ್ಯ
ಜೆ ಪಿ ನಡ್ಡಾ
ಗಂಗಾಧರ​ ಬ. ಸಾಬೋಜಿ
|

Updated on: May 05, 2023 | 9:40 PM

Share

ಕಲಬುರಗಿ: ಭ್ರಷ್ಟಾಚಾರ ಅಂದರೆ ಅದು ಕಾಂಗ್ರೆಸ್​. ಕಾಂಗ್ರೆಸ್​ನವರು ಭ್ರಷ್ಟಾಚಾರ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಒಂಥರಾ 70 ಇಲಿಗಳನ್ನು ತಿಂದ ಬೆಕ್ಕು ಹಜ್​ಗೆ ಹೋದಂತೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ವ್ಯಂಗ್ಯವಾಡಿದ್ದಾರೆ. ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ರಾಜಕುಮಾರ ಪಾಟೀಲ್ ತೇಲ್ಕೂರ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನವರು ದೇವಸ್ಥಾನಕ್ಕೆ ಹೋಗುತ್ತಿರಲಿಲ್ಲ. ಆದರೆ ಇದೀಗ ಗಂದ, ಕುಂಕುಮ ಹಚ್ಚಿಕೊಂಡು ಓಡಾಡುತ್ತಿದ್ದಾರೆ. ಕಾಂಗ್ರೆಸ್ ಧರ್ಮವನ್ನು ರಾಜಕೀಯದಲ್ಲಿ ತರುತ್ತಿದೆ. ಸಮಾಜವನ್ನು ವಿಭಜನೆ ಮಾಡಿ‌ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದರು.

ಕಾಂಗ್ರೆಸ್​ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ ನಡೆದಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಶಿಕ್ಷಕರ ನೇಮಕಾತಿ, ಅರ್ಕಾವತಿ ಮತ್ತು ಅನೇಕ ಹಗರಣಗಳು ನಡೆದಿವೆ. ಭ್ರಷ್ಟಾಚಾರ ಮಾಡಿದವರೇ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್, ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಬೇಲ್ ಮೇಲೆ ಇದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಜೆಡಿಎಸ್​ಗೆ ಮತ ಹಾಕಿದರೆ ಕಾಂಗ್ರೆಸ್​ಗೆ ಹಾಕಿದಂತೆ, ಕಾಂಗ್ರೆಸ್ ವೋಟ್ ಹಾಕಿದರೆ ಪಿಎಫ್​​ಐಗೆ ನೀಡಿದಂತೆ: ಜೆಪಿ ನಡ್ಡಾ

ಬಿಜೆಪಿ ಡಬಲ್ ಇಂಜಿನ್ ಸರ್ಕಾರದ ಇಂಜಿನ್ ಪವರಪುಲ್ ಆಗಿದೆ. ಈ ಚುನಾವಣೆ ಕರ್ನಾಟಕ ಭವಿಷ್ಯ, ಜನರ ಭವಿಷ್ಯದ ಚುನಾವಣೆ. ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ದೇಶದ ಅಭಿವೃದ್ಧಿ ವೇಗ ಹೆಚ್ಚಾಗಿದೆ ಎಂದು ಹೇಳಿದರು.

ಸಿದ್ದರಾಮಯ್ಯ ನೀವು ಕ್ಷಮೆ ಕೇಳಲೇ ಬೇಕು: ಜೆಪಿ ನಡ್ಡಾ

ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ನಡೆದ ರೋಡ್​ ಶೋ ವೇಳೆ ಮಾತನಾಡಿದ ಜೆಪಿ ನಡ್ಡಾ, ಸಿದ್ದರಾಮಯ್ಯ ನೀವು ಕ್ಷಮೆ ಕೇಳಲೇ ಬೇಕು. ಏಕೆಂದರೆ ಪಿಎಫ್​ಐನ 175 ಕೇಸ್ ವಾಪಸ್ ಪಡೆದಿದ್ದೀರಿ. ನೂರಾರು ಜನರನ್ನ ಜೈಲಿನಿಂದ ಬಿಟ್ಟಿದ್ದೀರಿ. ನೀವೇನು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತೀರಿ? ಎಂದು ಪ್ರಶ್ನಿಸಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದ ಸಾಲುಸಾಲು ಹಗರಣಗಳ ಹೆಸರನ್ನು ಹೇಳಿದರು. ಅಲ್ಲದೆ, ಮೇಲಿನಿಂದ ಕೆಳಗೆ‌ ಭ್ರಷ್ಟಾಚಾರ ಇರುವ ನೀವು, ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ನಿಮಗೆ ಶೋಭೆಯಲ್ಲ ಎಂದರು.

ಇದನ್ನೂ ಓದಿ: ಯಲಹಂಕ ಜೆಡಿಎಸ್ ಅಭ್ಯರ್ಥಿ ಮುನೇಗೌಡ ವಿರುದ್ದ ವಂಚನೆ ಆರೋಪ: ಆಡಿಯೋ ವೈರಲ್

ಡಿಕೆ ಶಿವಕುಮಾರ್ ನೀವು ಹೇಳಿ, ನಿಮ್ಮ ಮೇಲೆ‌ ಸಿಬಿಐ ಕೇಸ್ ಇದೆಯೋ ಇಲ್ಲವೋ? ನೀವು ಬೇಲ್‌ ಮೇಲೆ ಹೊರಗಿದ್ದೀರೋ ಇಲ್ವೋ? ಕಾಂಗ್ರೆಸ್ ಪಾರ್ಟಿ ಕಥೆಯೇ ಅದು, ಜೇರ್ ಮೇಲೆ ಇಲ್ಲ, ಬೇಲ್ ಮೇಲೆ ಇರುವುದು. ಸಿದ್ದರಾಮಯ್ಯ ಸಮಯದಲ್ಲಿ ಅರ್ಕಾವತಿ ಸಂಬಂಧ 8 ಸಾವಿರ ರೈತರಿಗೆ ಅನ್ಯಾಯ ಮಾಡಲಾಗಿದೆ. ಹೀಗಾಗಿ ಬಿಜೆಪಿ ಗೆಲ್ಲಿಸಿ ಎಂದು ಕರೆ ನೀಡಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ