AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್​ ಆರೋಪ, 70 ಇಲಿಗಳನ್ನು ತಿಂದ ಬೆಕ್ಕು ಹಜ್​ಗೆ ಹೋದಂತೆ: ಜೆಪಿ ನಡ್ಡಾ ವ್ಯಂಗ್ಯ

ಭ್ರಷ್ಟಾಚಾರ ಅಂದರೆ ಅದು ಕಾಂಗ್ರೆಸ್​. ಕಾಂಗ್ರೆಸ್​ನವರು ಭ್ರಷ್ಟಾಚಾರ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಒಂಥರಾ 70 ಇಲಿಗಳನ್ನು ತಿಂದ ಬೆಕ್ಕು ಹಜ್​ಗೆ ಹೋದಂತೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವ್ಯಂಗ್ಯವಾಡಿದ್ದಾರೆ.

ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್​ ಆರೋಪ, 70 ಇಲಿಗಳನ್ನು ತಿಂದ ಬೆಕ್ಕು ಹಜ್​ಗೆ ಹೋದಂತೆ: ಜೆಪಿ ನಡ್ಡಾ ವ್ಯಂಗ್ಯ
ಜೆ ಪಿ ನಡ್ಡಾ
ಗಂಗಾಧರ​ ಬ. ಸಾಬೋಜಿ
|

Updated on: May 05, 2023 | 9:40 PM

Share

ಕಲಬುರಗಿ: ಭ್ರಷ್ಟಾಚಾರ ಅಂದರೆ ಅದು ಕಾಂಗ್ರೆಸ್​. ಕಾಂಗ್ರೆಸ್​ನವರು ಭ್ರಷ್ಟಾಚಾರ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಒಂಥರಾ 70 ಇಲಿಗಳನ್ನು ತಿಂದ ಬೆಕ್ಕು ಹಜ್​ಗೆ ಹೋದಂತೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ವ್ಯಂಗ್ಯವಾಡಿದ್ದಾರೆ. ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ರಾಜಕುಮಾರ ಪಾಟೀಲ್ ತೇಲ್ಕೂರ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನವರು ದೇವಸ್ಥಾನಕ್ಕೆ ಹೋಗುತ್ತಿರಲಿಲ್ಲ. ಆದರೆ ಇದೀಗ ಗಂದ, ಕುಂಕುಮ ಹಚ್ಚಿಕೊಂಡು ಓಡಾಡುತ್ತಿದ್ದಾರೆ. ಕಾಂಗ್ರೆಸ್ ಧರ್ಮವನ್ನು ರಾಜಕೀಯದಲ್ಲಿ ತರುತ್ತಿದೆ. ಸಮಾಜವನ್ನು ವಿಭಜನೆ ಮಾಡಿ‌ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದರು.

ಕಾಂಗ್ರೆಸ್​ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ ನಡೆದಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಶಿಕ್ಷಕರ ನೇಮಕಾತಿ, ಅರ್ಕಾವತಿ ಮತ್ತು ಅನೇಕ ಹಗರಣಗಳು ನಡೆದಿವೆ. ಭ್ರಷ್ಟಾಚಾರ ಮಾಡಿದವರೇ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್, ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಬೇಲ್ ಮೇಲೆ ಇದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಜೆಡಿಎಸ್​ಗೆ ಮತ ಹಾಕಿದರೆ ಕಾಂಗ್ರೆಸ್​ಗೆ ಹಾಕಿದಂತೆ, ಕಾಂಗ್ರೆಸ್ ವೋಟ್ ಹಾಕಿದರೆ ಪಿಎಫ್​​ಐಗೆ ನೀಡಿದಂತೆ: ಜೆಪಿ ನಡ್ಡಾ

ಬಿಜೆಪಿ ಡಬಲ್ ಇಂಜಿನ್ ಸರ್ಕಾರದ ಇಂಜಿನ್ ಪವರಪುಲ್ ಆಗಿದೆ. ಈ ಚುನಾವಣೆ ಕರ್ನಾಟಕ ಭವಿಷ್ಯ, ಜನರ ಭವಿಷ್ಯದ ಚುನಾವಣೆ. ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ದೇಶದ ಅಭಿವೃದ್ಧಿ ವೇಗ ಹೆಚ್ಚಾಗಿದೆ ಎಂದು ಹೇಳಿದರು.

ಸಿದ್ದರಾಮಯ್ಯ ನೀವು ಕ್ಷಮೆ ಕೇಳಲೇ ಬೇಕು: ಜೆಪಿ ನಡ್ಡಾ

ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ನಡೆದ ರೋಡ್​ ಶೋ ವೇಳೆ ಮಾತನಾಡಿದ ಜೆಪಿ ನಡ್ಡಾ, ಸಿದ್ದರಾಮಯ್ಯ ನೀವು ಕ್ಷಮೆ ಕೇಳಲೇ ಬೇಕು. ಏಕೆಂದರೆ ಪಿಎಫ್​ಐನ 175 ಕೇಸ್ ವಾಪಸ್ ಪಡೆದಿದ್ದೀರಿ. ನೂರಾರು ಜನರನ್ನ ಜೈಲಿನಿಂದ ಬಿಟ್ಟಿದ್ದೀರಿ. ನೀವೇನು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತೀರಿ? ಎಂದು ಪ್ರಶ್ನಿಸಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದ ಸಾಲುಸಾಲು ಹಗರಣಗಳ ಹೆಸರನ್ನು ಹೇಳಿದರು. ಅಲ್ಲದೆ, ಮೇಲಿನಿಂದ ಕೆಳಗೆ‌ ಭ್ರಷ್ಟಾಚಾರ ಇರುವ ನೀವು, ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ನಿಮಗೆ ಶೋಭೆಯಲ್ಲ ಎಂದರು.

ಇದನ್ನೂ ಓದಿ: ಯಲಹಂಕ ಜೆಡಿಎಸ್ ಅಭ್ಯರ್ಥಿ ಮುನೇಗೌಡ ವಿರುದ್ದ ವಂಚನೆ ಆರೋಪ: ಆಡಿಯೋ ವೈರಲ್

ಡಿಕೆ ಶಿವಕುಮಾರ್ ನೀವು ಹೇಳಿ, ನಿಮ್ಮ ಮೇಲೆ‌ ಸಿಬಿಐ ಕೇಸ್ ಇದೆಯೋ ಇಲ್ಲವೋ? ನೀವು ಬೇಲ್‌ ಮೇಲೆ ಹೊರಗಿದ್ದೀರೋ ಇಲ್ವೋ? ಕಾಂಗ್ರೆಸ್ ಪಾರ್ಟಿ ಕಥೆಯೇ ಅದು, ಜೇರ್ ಮೇಲೆ ಇಲ್ಲ, ಬೇಲ್ ಮೇಲೆ ಇರುವುದು. ಸಿದ್ದರಾಮಯ್ಯ ಸಮಯದಲ್ಲಿ ಅರ್ಕಾವತಿ ಸಂಬಂಧ 8 ಸಾವಿರ ರೈತರಿಗೆ ಅನ್ಯಾಯ ಮಾಡಲಾಗಿದೆ. ಹೀಗಾಗಿ ಬಿಜೆಪಿ ಗೆಲ್ಲಿಸಿ ಎಂದು ಕರೆ ನೀಡಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ