AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಕೊಟ್ಟ ಭರವಸೆ ಈಡೇರಿಸದ ಕಾಂಗ್ರೆಸ್ ಕರ್ನಾಟಕದಲ್ಲಿ ಈಡೇರಿಸುತ್ತಾ?: ಪ್ರಲ್ಹಾದ್ ಜೋಶಿ ಪ್ರಶ್ನೆ

ಕಾಂಗ್ರೆಸ್​ನ ಉಚಿತ ಘೋಷಣೆಗಳನ್ನು ಟೀಕಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜಸ್ಥಾನದಲ್ಲಿ ಉಚಿತ ಘೋಷಣೆಗಳನ್ನು ಈವರೆಗೆ ಯಾಕೆ ಈಡೇರಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.

ರಾಜಸ್ಥಾನದಲ್ಲಿ ಕೊಟ್ಟ ಭರವಸೆ ಈಡೇರಿಸದ ಕಾಂಗ್ರೆಸ್ ಕರ್ನಾಟಕದಲ್ಲಿ ಈಡೇರಿಸುತ್ತಾ?: ಪ್ರಲ್ಹಾದ್ ಜೋಶಿ ಪ್ರಶ್ನೆ
ಪ್ರಲ್ಹಾದ್ ಜೊತೆ ಸೇರಿ ನಾಮಪತ್ರ ಸಲ್ಲಿಸಿದ ದೇವದುರ್ಗದ ಬಿಜೆಪಿ ಅಭ್ಯರ್ಥಿ ಕೆ ಶಿವನಗೌಡ ನಾಯಕ್‌
Rakesh Nayak Manchi
|

Updated on: Apr 17, 2023 | 2:59 PM

Share

ರಾಯಚೂರು: ಕಾಂಗ್ರೆಸ್ ನಾಯಕರು ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆ 200 ಯೂನಿಟ್ ವಿದ್ಯುತ್ ಉಚಿತವಾಗಿ (Free Electricity) ನೀಡುವುದಾಗಿ ಘೋಷಿಸಿದೆ. ಇಂತಹ ಭರವಸೆ ರಾಜಸ್ಥಾನದಲ್ಲೂ ಕಾಂಗ್ರೆಸ್ ಘೋಷಣೆ ಮಾಡಿತ್ತು. ಆದರೆ ಈವರೆಗೆ ಯಾಕೆ ಈಡೇರಿಸಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಪ್ರಶ್ನಿಸಿದ್ದಾರೆ. ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ನಡೆದ ರೋಡ್ ಶೋದಲ್ಲಿ ಪಾಲ್ಗೊಂಡ ನಂತರ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಐದು ವರ್ಷಗಳ ಕಾಲ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಹಲವು ಬಾರಿ ಬೆಜೆಟ್ ಕೂಡ ಮಂಡಿಸಿದ್ದೀರಿ. ಆಗ ಯಾಕೆ ಉಚಿತ ವಿದ್ಯುತ್ ನೀಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇಂಥ ಬಿಸಿಲಿನಲ್ಲಿ ನಿಮ್ಮ ಆಸಕ್ತಿ ನೋಡಿದರೆ ಇದು ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಅಂತ ಅನ್ನಿಸುತ್ತಿಲ್ಲ. ಇದು ವಿಜಯೋತ್ಸವದ ಕಾರ್ಯಕ್ರಮ ಎನ್ನಿಸುತ್ತಿದೆ ಎಂದು ಹೇಳಿದ ಪ್ರಲ್ಹಾದ್ ಜೋಶಿ, ಸುಳ್ಳು ಹೇಳುವವರು ಕಾಂಗ್ರೆಸ್ ನಾಯಕರು. ಹಿಂದೆ ಎಲ್ಲಿ ಬೇಕಾದರೂ ಬಂದು ಬಾಂಬ್ ಹಾಕುವ ಕೆಲಸ ಮಾಡಲಾಗುತ್ತಿತ್ತು. ಬೆಂಗಳೂರಿನಲ್ಲಿ ಬಾಂಬ್ ಹಾಕುವ ಕೆಲಸ ಮಾಡಿದ್ದರು. ಆದರೆ ಈಗ ಅದ್ಯಾವುದು ಇಲ್ಲ. ಪಾಕಿಸ್ತಾನದಲ್ಲಿ ನಮ್ಮ ಸೈನಿಕರು ಯುದ್ಧ ಸಾರಿದರೆ ರಾಹುಲ್ ಬಾಬಾ ಪಾಕಿಸ್ತಾನದ ಮೇಲೆ ದಾಳಿ ಮಾಡಿದ್ದರ ಪ್ರೂಫ್ ಕೇಳುತ್ತಾರೆ. ಆದರೆ ನಮ್ಮ ಸೈನಿಕರನ್ನ ನಾವು ನಂಬುತ್ತೇವೆ ಎಂದರು.

ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡ ಕೇಂದ್ರದ ಬಿಜೆಪಿ ಅಭ್ಯರ್ಥಿ ಗೆಲ್ಲಿಸಬೇಕು: ಬಿಜೆಪಿ ಮುಖಂಡರಿಗೆ ಪ್ರಲ್ಹಾದ್ ಜೋಶಿ ಮನವಿ

ತರಾತುರಿಯಲ್ಲಿ ಧಾರವಾಡಕ್ಕೆ ತೆರಳಿದಿ ಪ್ರಲ್ಹಾದ್ ಜೋಶಿ

ರಾಯಚೂರಿನ ದೇವದುರ್ಗದ ಬಿಜೆಪಿ ಅಭ್ಯರ್ಥಿ ಕೆ ಶಿವನಗೌಡ ನಾಯಕ್‌ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದರು. ಬೃಹತ್ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಕೆ ಮಾಡಲಾಯಿತು. ಇದೇ ವೇಳೆ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಲ್ಹಾದ್ ಜೋಶಿ, ಕಾರ್ಯಕ್ರಮದ ಬಳಿಕ ತರಾತುರಿಯಲ್ಲಿ ಧಾರವಾಡಕ್ಕೆ ತೆರಳಿಸಿದರು. ದೇವದುರ್ಗದಿಂದ ಧಾರವಾಡದ ನವಲಗುಂದಕ್ಕೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಮಾಡಿದರು.

ನಾಮಪತ್ರ ಸಲ್ಲಿಸಿದ ದೇವದುರ್ಗ ಕಾಂಗ್ರೆಸ್​ ಅಭ್ಯರ್ಥಿ ಶ್ರೀದೇವಿ ನಾಯಕ

ಒಂದೆಡೆ ಎಸ್​ಟಿ ಮೀಸಲು ದೇವದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಶಿವನಗೌಡ ನಾಯಕ್‌ ನಾಮಪತ್ರ ಸಲ್ಲಿಕೆ ಮಾಡಿದರೆ, ಇನ್ನೊಂದೆಡೆ ಇದೇ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀದೇವಿ ನಾಯಕ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ದೇವದುರ್ಗ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?