AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Elections 2023: ಕೊನೆ ಕ್ಷಣದಲ್ಲಿ ಮತ್ತೊಂದು ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಬದಲಾವಣೆ

ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ ಇರುವಾಗಲೇ ಕೊನೆ ಕ್ಷಣದಲ್ಲಿ ಕಾಂಗ್ರೆಸ್, ​ ಮುಳಬಾಗಿಲು ಕ್ಷೇತ್ರದ ಅಭ್ಯರ್ಥಿಯನ್ನು ಬದಲಾವಣೆ ಮಾಡಿದೆ.

Karnataka Assembly Elections 2023: ಕೊನೆ ಕ್ಷಣದಲ್ಲಿ ಮತ್ತೊಂದು ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಬದಲಾವಣೆ
ಕಾಂಗ್ರೆಸ್​ ಪಕ್ಷದ ಧ್ವಜ
ರಮೇಶ್ ಬಿ. ಜವಳಗೇರಾ
|

Updated on:Apr 20, 2023 | 12:04 PM

Share

ಮುಖ್ಯಾಂಶಗಳು

  • ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ
  • ಕೋಲಾರ ಜಿಲ್ಲೆಯ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬದಲಾವಣೆ
  • ನಿನ್ನೆಯಷ್ಟೇ ಮುದ್ದುಗಂಗಾಧರ್ ಅವರನ್ನು ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಣೆ ಮಾಡಿತ್ತು

ಕೋಲಾರ: ಕರ್ನಾಟಕ ವಿಧಾನಸಭೆ ಚುನಾವಣೆಗೆ Karnataka Assembly Elections 2023) ನಾಮಪತ್ರ ಸಲ್ಲಿಸಲು ಇಂದು(ಏಪ್ರಿಲ್​ 20) ಕೊನೆ ದಿನವಾಗಿದ್ದು, ಈ ಕೊನೆ ಕ್ಷಣದಲ್ಲಿ ಕಾಂಗ್ರೆಸ್(Congress)​​ ಕೋಲಾರ ಜಿಲ್ಲೆಯ ಮುಳಬಾಗಿಲ ಅಭ್ಯರ್ಥಿಯನ್ನು ಬದಲಿಸಿದೆ.  ಡಾ.ಬಿಸಿ ಮುದ್ದು ಗಂಗಾಧರ್ ಬದಲಿಗೆ ಆದಿನಾರಾಯಣ ಎನ್ನುವರಿಗೆ ಟಿಕೆಟ್​ ನೀಡಿದೆ. ತೀವ್ರ ಕಗ್ಗಂಟಾಗಿ ಉಳಿದಿದ್ದ ಮುಳಬಾಗಿಲು ಕ್ಷೇತ್ರಕ್ಕೆ ಅಳೆದು ತೂಗಿ ನಿನ್ನೆ ರಾತ್ರಿ ಅಷ್ಟೇ  5ನೇ ಪಟ್ಟಿಯಲ್ಲಿ ಅಭ್ಯರ್ಥಿಯನ್ನು ಘೋಷಣೆ ಮಾಡಿತ್ತು. ಈ ಪಟ್ಟಿಯಲ್ಲಿ ಮುಳಬಾಗಿಲು ವಿಧಾನಸಭೆ ಕ್ಷೇತ್ರಕ್ಕೆ ಡಾ.ಬಿ.ಸಿ.ಮುದ್ದು ಗಂಗಾಧರ್ ಅವರನ್ನು ಫೈನಲ್​ ಮಾಡಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿತ್ತು. ಆದ್ರೆ, ಸ್ಥಳೀಯವಾಗಿ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಇದೀಗ ಕಾಂಗ್ರೆಸ್​ ಮುಳಬಾಗಿಲು ಅಭ್ಯರ್ಥಿಯನ್ನು ಬದಲಿಸಿದ್ದು, ಮುದ್ದು ಗಂಗಾಧರ್ ಬದಲಿಗೆ ಆದಿನಾರಾಯಣ ಎನ್ನುವರಿಗೆ  ಮಣೆ ಹಾಕಿದೆ.

ಇದನ್ನೂ ಓದಿ: ಕಾಂಗ್ರೆಸ್​​ ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ: ಅಂತಿಮ ಪಟ್ಟಿಯಲ್ಲಿ ಯಾರಿಗೆಲ್ಲ ಸಿಕ್ತು ಟಿಕೆಟ್? ಇಲ್ಲಿದೆ ವಿವರ

ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೊತ್ತನೂರು ಮಂಜುನಾಥ್​ ಅವರು ಮುಳಬಾಗಿಲು ಕ್ಷೇತ್ರಕ್ಕೆ  ತಮ್ಮ ಬೆಂಬಲಿಗರಿಗೆ ಟಿಕೆಟ್​ ನೀಡುವಂತೆ ಮನವಿ ಮಾಡಿದ್ದರು. ಆದಿನಾರಾಯಣ ಅವರಿಗೆ ಟಿಕೆಟ್​ ನೀಡುವಂತೆ ಮನವಿ ಮಾಡಿದ್ದರು. ಆದ್ರೆ, ಹೈಕಮಾಂಡ್​ ಡಾ.ಬಿ.ಸಿ.ಮುದ್ದು ಗಂಗಾಧರ್ ಅವರಿಗೆ ಮಣೆ ಹಾಕಿತ್ತು. ಇದರಿಂದ ಕೊತ್ತನೂರು ಮಂಜುನಾಥ್ ಸೇರಿದಂತೆ ಸ್ಥಳೀಯ ನಾಯಕರು ತೀವ್ರ ಅಸಮಾಧಾನಗೊಂಡಿದ್ದರು.  ಇದರಿಂದ ಎಚ್ಚೆತ್ತ ಕಾಂಗ್ರೆಸ್​ ಕೊನ್ ಕ್ಷಣದಲ್ಲಿ ಮುದ್ದು ಗಂಗಾಧರ್ ಅವರನ್ನು ಬದಲಿಸಿ ಆದಿನಾರಾಯಣ ಅವರನ್ನು ಅಂತಿಮ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ.

ನಿನ್ನೆ ಅಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪರ್ಧೆ ಮಾಡುವ ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಕಾಂಗ್ರೆಸ್ ಬದಲಾವಣೆ ಮಾಡಿತ್ತು. ಈ ಹಿಂದೆ ಅಲ್ಲಿ ಮೊಹಮ್ಮದ್​ ಯೂಸುಫ್ ಸವಣೂರು ಅವರಿಗೆ ಶಿಗ್ಗಾಂವಿ ಕ್ಷೇತ್ರದ ಟಿಕೆಟ್ ಘೋಷಿಸಿತ್ತು. ಆದ್ರೆ, ನಿನ್ನೆ ಯಾಸೀರ್ ಅಹ್ಮದ್ ​ಖಾನ್​ ಪಠಾಣ್​ಗೆ ಟಿಕೆಟ್ ಘೋಷಣೆ ಮಾಡಿದೆ. ಇದೀಗ ಕೋಲಾರ ಜಿಲ್ಲೆಯ ಮುಳಬಾಗಿಲ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:57 am, Thu, 20 April 23

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ