AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನಲ್ಲಿ ಯಾವ ಸಮುದಾಯದ ಎಷ್ಟು ಶಾಸಕರಿದ್ದಾರೆ ಗೊತ್ತೆ?

ಕರ್ನಾಟಕ ವಿಧಾನಸಭೆ ಚುನಾವಣೆಯ ಬಹುನಿರೀಕ್ಷಿತ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ರಾಜ್ಯದ ಮತದಾರರು ಕಾಂಗ್ರೆಸ್​ ಕೈಹಿಡಿದಿದ್ದಾರೆ. ಯಾವ ಯಾವ ಸಮುದಾಯದವರು ಕಾಂಗ್ರೆಸ್​ನಲ್ಲಿ ಸ್ಥಾನ ಪಡೆದಿದ್ದಾರೆ ಗೊತಾ?

ಕಾಂಗ್ರೆಸ್​ನಲ್ಲಿ ಯಾವ ಸಮುದಾಯದ ಎಷ್ಟು ಶಾಸಕರಿದ್ದಾರೆ ಗೊತ್ತೆ?
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: May 13, 2023 | 10:54 PM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ (Karnataka Assembly Elections 2023) ಬಹುನಿರೀಕ್ಷಿತ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ರಾಜ್ಯದ ಮತದಾರರು ಕಾಂಗ್ರೆಸ್​ ಕೈಹಿಡಿದಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್​ನ ಹಿರಿಯ ನಾಯಕರು ಇಂದು ಸಂಜೆ ಸಿಹಿ ತಿನ್ನುವ ಮೂಲಕ ಸಂಭ್ರಮಿಸಿದರು. ಕಾಂಗ್ರೆಸ್​​ ಭರ್ಜರಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣೆ ಹಿಡಿಯಲು ಸಜ್ಜಾಗಿದೆ. ಭರ್ಜರಿ ಗೆಲುವಿನ ನಂತರ ಕಾಂಗ್ರೆಸ್ ನಾಯಕರು ಭಾನುವಾರ ಸಂಜೆ 5:30 ಕ್ಕೆ ಶಾಸಕಾಂಗ ಪಕ್ಷದ ಸಭೆ ಕೂಡ ಕರೆದಿದ್ದಾರೆ. ಕಾಂಗ್ರೆಸ್​ ಈ ಭಾರಿ ಒಟ್ಟು 42 ಹೊಸಮುಖಗಳಿಗೆ ಮಣೆ ಹಾಕಿತ್ತು. ಆ ಪೈಕಿ 35 ಹೊಸ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಇನ್ನು ಕಾಂಗ್ರೆಸ್​​ ಯಾವ ಯಾವ ಸಮುದಾಯದವರಿಗೆ ಎಷ್ಟು ಶಾಸಕರಿದ್ದಾರೆ ತಿಳಿಯಿರಿ.

ಸಮುದಾಯ            ಸಂಖ್ಯೆ

ಬ್ರಾಹ್ಮಣ:                     3

ಲಿಂಗಾಯತ:              39

ಒಕ್ಕಲಿಗ:                     21

ರೆಡ್ಡಿ:                            4

ಬಂಟ್:                         1

ಕೊಡವ:                       1

ಮುಸ್ಲಿಂ:                       9

ಕ್ರಿಶ್ಚಿಯನ್:                  1

ಜೈನ್:                           1

ಎಸ್ಸಿ ಲೆಫ್ಟ್                   6

ಎಸ್ಸಿ-ರೈಟ್:               11

ಎಸ್ಸಿ-ಬೋವಿ:            3

ಎಸ್ಸಿ-ಲಮಾಣಿ:          1

ಕೊರ್ಚಾ:                    1

ಎಸ್ಟಿ:                         15

ಬಿಸಿ-ಕುರುಬ:             8

ಬಿಸಿ-ಬಲಿಜ:               1

ಬಿಸಿ ಬೆಸ್ತ:                   1

ಬಿಸಿ ಬಿಲ್ಲವ:              2

ಬಿಸಿ ಈಡಿಗ:               3

ಬಿಸಿ ಮರಾಠಾ:         2

ಬಿಸಿ-ರಾಜಪುತ್​:        1

ಬಿಸಿ-ಉಪ್ಪಾರ:         1

ಇದನ್ನೂ ಓದಿ: Rahul Gandhi: ರಾಹುಲ್ ಗಾಂಧಿ ಪಾದಯಾತ್ರೆ ಸಾಗಿದ ಬಹುತೇಕ ಕಡೆ ಕಾಂಗ್ರೆಸ್ ಗೆದ್ದಿದೆ: ರಣದೀಪ್ ಸುರ್ಜೆವಾಲ

ಕರ್ನಾಟಕ ವಿಧಾನಸಭಾ ಚುನಾವಣೆಗೆ 2023 ಮೇ 10ರಂದು ಮತದಾನವಾಗಿತ್ತು. ಇಂದು ಮೇ 13ರಂದು ಫಲಿತಾಂಶ ಪ್ರಕಟವಾಗಿದ್ದು 224 ಕ್ಷೇತ್ರಗಳಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಗೆದ್ದಿದೆ. ಬಹುಮತಕ್ಕೆ ಬೇಕಾದ 113 ಸ್ಥಾನಗಳ ಗಡಿಯನ್ನು ಕಾಂಗ್ರೆಸ್ ಸುಲಭವಾಗಿ ದಾಟಿ ಹೋಗಿದ್ದು 5 ವರ್ಷ ಕಾಲ ಸುಭದ್ರ ಸರ್ಕಾರ ಸ್ಥಾಪಿಸುವ ಖಚಿತತೆ ಸಿಕ್ಕಿದೆ.

ಆಡಳಿತಾರೂಢ ಬಿಜೆಪಿ 64 ಸ್ಥಾನಗಳಿಗೆ ತೃಪ್ತಿಪಡಬೇಕಿದೆ. 30ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದ ಜೆಡಿಎಸ್ ಪಕ್ಷ 20 ಸ್ಥಾನಗಳಿಗೆ ತೃಪ್ತಿ ಪಡುವಂತಾಗಿದೆ. ಸ್ವಂತ ಪಕ್ಷ ಕಟ್ಟಿದ್ದ ಜನಾರ್ಧನ ರೆಡ್ಡಿಗೆ ನಿರಾಸೆಯಾಗಿದೆ.

ವಿಧಾನಸಭಾ ಚುನಾವಣೆಯ ಇನ್ನಷ್ಟು ಸುದ್ದಿಗಳು

ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ