ಕಾಂಗ್ರೆಸ್​ನಲ್ಲಿ ಯಾವ ಸಮುದಾಯದ ಎಷ್ಟು ಶಾಸಕರಿದ್ದಾರೆ ಗೊತ್ತೆ?

ಕರ್ನಾಟಕ ವಿಧಾನಸಭೆ ಚುನಾವಣೆಯ ಬಹುನಿರೀಕ್ಷಿತ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ರಾಜ್ಯದ ಮತದಾರರು ಕಾಂಗ್ರೆಸ್​ ಕೈಹಿಡಿದಿದ್ದಾರೆ. ಯಾವ ಯಾವ ಸಮುದಾಯದವರು ಕಾಂಗ್ರೆಸ್​ನಲ್ಲಿ ಸ್ಥಾನ ಪಡೆದಿದ್ದಾರೆ ಗೊತಾ?

ಕಾಂಗ್ರೆಸ್​ನಲ್ಲಿ ಯಾವ ಸಮುದಾಯದ ಎಷ್ಟು ಶಾಸಕರಿದ್ದಾರೆ ಗೊತ್ತೆ?
ಪ್ರಾತಿನಿಧಿಕ ಚಿತ್ರ

Updated on: May 13, 2023 | 10:54 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ (Karnataka Assembly Elections 2023) ಬಹುನಿರೀಕ್ಷಿತ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ರಾಜ್ಯದ ಮತದಾರರು ಕಾಂಗ್ರೆಸ್​ ಕೈಹಿಡಿದಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್​ನ ಹಿರಿಯ ನಾಯಕರು ಇಂದು ಸಂಜೆ ಸಿಹಿ ತಿನ್ನುವ ಮೂಲಕ ಸಂಭ್ರಮಿಸಿದರು. ಕಾಂಗ್ರೆಸ್​​ ಭರ್ಜರಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣೆ ಹಿಡಿಯಲು ಸಜ್ಜಾಗಿದೆ. ಭರ್ಜರಿ ಗೆಲುವಿನ ನಂತರ ಕಾಂಗ್ರೆಸ್ ನಾಯಕರು ಭಾನುವಾರ ಸಂಜೆ 5:30 ಕ್ಕೆ ಶಾಸಕಾಂಗ ಪಕ್ಷದ ಸಭೆ ಕೂಡ ಕರೆದಿದ್ದಾರೆ. ಕಾಂಗ್ರೆಸ್​ ಈ ಭಾರಿ ಒಟ್ಟು 42 ಹೊಸಮುಖಗಳಿಗೆ ಮಣೆ ಹಾಕಿತ್ತು. ಆ ಪೈಕಿ 35 ಹೊಸ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಇನ್ನು ಕಾಂಗ್ರೆಸ್​​ ಯಾವ ಯಾವ ಸಮುದಾಯದವರಿಗೆ ಎಷ್ಟು ಶಾಸಕರಿದ್ದಾರೆ ತಿಳಿಯಿರಿ.

ಸಮುದಾಯ            ಸಂಖ್ಯೆ

ಬ್ರಾಹ್ಮಣ:                     3

ಲಿಂಗಾಯತ:              39

ಒಕ್ಕಲಿಗ:                     21

ರೆಡ್ಡಿ:                            4

ಬಂಟ್:                         1

ಕೊಡವ:                       1

ಮುಸ್ಲಿಂ:                       9

ಕ್ರಿಶ್ಚಿಯನ್:                  1

ಜೈನ್:                           1

ಎಸ್ಸಿ ಲೆಫ್ಟ್                   6

ಎಸ್ಸಿ-ರೈಟ್:               11

ಎಸ್ಸಿ-ಬೋವಿ:            3

ಎಸ್ಸಿ-ಲಮಾಣಿ:          1

ಕೊರ್ಚಾ:                    1

ಎಸ್ಟಿ:                         15

ಬಿಸಿ-ಕುರುಬ:             8

ಬಿಸಿ-ಬಲಿಜ:               1

ಬಿಸಿ ಬೆಸ್ತ:                   1

ಬಿಸಿ ಬಿಲ್ಲವ:              2

ಬಿಸಿ ಈಡಿಗ:               3

ಬಿಸಿ ಮರಾಠಾ:         2

ಬಿಸಿ-ರಾಜಪುತ್​:        1

ಬಿಸಿ-ಉಪ್ಪಾರ:         1

ಇದನ್ನೂ ಓದಿ: Rahul Gandhi: ರಾಹುಲ್ ಗಾಂಧಿ ಪಾದಯಾತ್ರೆ ಸಾಗಿದ ಬಹುತೇಕ ಕಡೆ ಕಾಂಗ್ರೆಸ್ ಗೆದ್ದಿದೆ: ರಣದೀಪ್ ಸುರ್ಜೆವಾಲ

ಕರ್ನಾಟಕ ವಿಧಾನಸಭಾ ಚುನಾವಣೆಗೆ 2023 ಮೇ 10ರಂದು ಮತದಾನವಾಗಿತ್ತು. ಇಂದು ಮೇ 13ರಂದು ಫಲಿತಾಂಶ ಪ್ರಕಟವಾಗಿದ್ದು 224 ಕ್ಷೇತ್ರಗಳಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಗೆದ್ದಿದೆ. ಬಹುಮತಕ್ಕೆ ಬೇಕಾದ 113 ಸ್ಥಾನಗಳ ಗಡಿಯನ್ನು ಕಾಂಗ್ರೆಸ್ ಸುಲಭವಾಗಿ ದಾಟಿ ಹೋಗಿದ್ದು 5 ವರ್ಷ ಕಾಲ ಸುಭದ್ರ ಸರ್ಕಾರ ಸ್ಥಾಪಿಸುವ ಖಚಿತತೆ ಸಿಕ್ಕಿದೆ.

ಆಡಳಿತಾರೂಢ ಬಿಜೆಪಿ 64 ಸ್ಥಾನಗಳಿಗೆ ತೃಪ್ತಿಪಡಬೇಕಿದೆ. 30ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದ ಜೆಡಿಎಸ್ ಪಕ್ಷ 20 ಸ್ಥಾನಗಳಿಗೆ ತೃಪ್ತಿ ಪಡುವಂತಾಗಿದೆ. ಸ್ವಂತ ಪಕ್ಷ ಕಟ್ಟಿದ್ದ ಜನಾರ್ಧನ ರೆಡ್ಡಿಗೆ ನಿರಾಸೆಯಾಗಿದೆ.

ವಿಧಾನಸಭಾ ಚುನಾವಣೆಯ ಇನ್ನಷ್ಟು ಸುದ್ದಿಗಳು

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us