AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ಗೆ ಬಹುಮತ; ಭಟ್ಕಳದಲ್ಲಿ ಕೇಸರಿ ಧ್ವಜದ ಪಕ್ಕ ಇಸ್ಲಾಂ ಬಾವುಟ ಹಾರಿಸಿದ ಮುಸ್ಲಿಂ ಯುವಕರು

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಬಹುಮತ ಸಿಕ್ಕಿದ್ದು, ಭಟ್ಕಳದಲ್ಲೂ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವಾಗಿದೆ. ಹೀಗಾಗಿ ಮುಸ್ಲಿಂ ಯುವಕರು ಇಸ್ಲಾಂ ಧ್ವಜವನ್ನು ಹಿಡಿದು ಸಂಭ್ರಮಿಸಿದ್ದಲ್ಲದೆ, ಕೇಸರಿ ಧ್ವಜದ ಪಕ್ಕ ಅದನ್ನು ಅಳವಡಿಸಿದ್ದಾರೆ.

ಕಾಂಗ್ರೆಸ್​ಗೆ ಬಹುಮತ; ಭಟ್ಕಳದಲ್ಲಿ ಕೇಸರಿ ಧ್ವಜದ ಪಕ್ಕ ಇಸ್ಲಾಂ ಬಾವುಟ ಹಾರಿಸಿದ ಮುಸ್ಲಿಂ ಯುವಕರು
ಭಟ್ಕಳದಲ್ಲಿ ಕಾಂಗ್ರೆಸ್ ಗೆಲುವನ್ನು ಇಸ್ಲಾಂ ಧ್ವಜ ಹಾರಿಸಿ ಸಂಭ್ರಮಾಚರಣೆ
Rakesh Nayak Manchi
Rakesh Nayak Manchi|

Updated on:May 13, 2023 | 6:23 PM

Share

ಕಾರವಾರ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election Results 2023) ಕಾಂಗ್ರೆಸ್​ಗೆ ಬಹುಮತ ಸಿಕ್ಕಿದ್ದು, ಭಟ್ಕಳದಲ್ಲೂ (Bhatkal) ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವಾಗಿದೆ. ಹೀಗಾಗಿ ಮುಸ್ಲಿಂ ಯುವಕರು ಇಸ್ಲಾಂ ಧ್ವಜವನ್ನು (Islam Flag) ಹಿಡಿದು ಸಂಭ್ರಮಿಸಿದ್ದಲ್ಲದೆ, ಕೇಸರಿ ಧ್ವಜದ ಪಕ್ಕ ಅದನ್ನು ಅಳವಡಿಸಿದ್ದಾರೆ. ಭಟ್ಕಳ ಸಂಶುದ್ದಿನ್ ಸರ್ಕಲ್ ಮೇಲೆ ನಿಂತು ಕೇಸರಿ ಭಾವುಟ ಪಕ್ಕದಲ್ಲಿ ಇಸ್ಲಾಂ ಪ್ಲ್ಯಾಗ್ ಹಿಡಿದು ಸಂಭ್ರಮಾಚರಣೆ ನಡೆಸಲಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದ್ದು, ಆಕ್ರೋಶವೂ ವ್ಯಕ್ತವಾಗುತ್ತಿದೆ.

ಭಟ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳು ವೈದ್ಯ ಅವರು ಬಿಜೆಪಿಯ ಸುನೀಲ್ ನಾಯ್ಕ ವಿರುದ್ಧ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಮಂಕಾಳು ವೈದ್ಯ ಗೆಲುವನ್ನ ಸಂಭ್ರಮಿಸುವ ವೇಳೆ ಭಟ್ಕಳ ಪಟ್ಟಣದಲ್ಲಿರುವ ಸಂಶುದ್ದೀನ್ ವೃತ್ತದ ಮೇಲೇರಿದ ಮುಸ್ಲಿಂ ಯುವಕರು ಕೇಸರಿ ಧ್ವಜದ ಪಕ್ಕ ನಿಂತು ಇಸ್ಲಾಂ ಧ್ವಜ ಪ್ರದರ್ಶನ ಮಾಡಿದ್ದಾರೆ.

ಇದನ್ನೂ ಓದಿ: Karnataka Election Results: ಕರ್ನಾಟಕದ ಗೆಲುವಿಗಾಗಿ ಕಾಂಗ್ರೆಸ್​​ಗೆ ಅಭಿನಂದನೆ; ಪ್ರಧಾನಿ ಮೋದಿ

ಇದರ ಜೊತೆಗೆ ಮಂಕಾಳು ವೈದ್ಯ ಭಾವಚಿತ್ರವಿರುವ ಧ್ವಜ, ಅಂಬೇಡ್ಕರ್‌ರ ಧ್ವಜದೊಂದಿಗೆ ಮುಸ್ಲಿಂ ಧ್ವಜ ಪ್ರದರ್ಶನ ಮಾಡಿ ವೃತ್ತದಲ್ಲಿ ಹಾಕಲಾಗಿದ್ದ ಕೇಸರಿ ಧ್ವಜದ ಪಕ್ಷದಲ್ಲೇ ಮುಸ್ಲಿಂ ಧ್ವಜ ಹಾಕಿದ್ದಾರೆ. ಸದ್ಯ ಇದರ ವಿಡಿಯೋ ಭಾರೀ ವೈರಲ್ ಆಗುತ್ತಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಹಿಂದೂಗಳ ಹೆಣ ಎತ್ತಲೂ ಯಾರು ಇರಬಾರದು; ಮುಸ್ಲಿಂ ಯುವಕನಿಂದ ಅಘಾತಕಾರಿ ಕಾಮೆಂಟ್

ಕಾಂಗ್ರೆಸ್​ಗೆ ಬಹುಮತ ಬಂದಿದ್ದೇ ತಡ, ಇದರ ಸಂತೋಷಕ್ಕೆ ಭಟ್ಕಳದಲ್ಲಿ ಇಸ್ಲಾಂ ಧ್ವಜ ಹಾರಿಸಲಾಯಿತು. ಮಾತ್ರವಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಸಮಾಜಘಾತುಕ ಸಂದೇಶಗಳನ್ನು ರವಾನಿಸಲಾಗುತ್ತಿದೆ. “ಹಿಂದೂಗಳ ಹೆಣ ಎತ್ತಲೂ ಯಾರೂ ಇರಬಾರದು. ಕರ್ನಾಟಕದಲ್ಲಿ ಇನ್ನು ಮುಂದೆ ಮುಸ್ಲಿಂ ಹವಾ, ಅಲ್ಲಾಹು ಅಕ್ಬರ್” ಮುಸ್ಲಿಂ ಯುವಕನೊಬ್ಬ ಮಾಡಿದ ಕಾಮೆಂಟ್​ನ ಸ್ಕ್ರೀನ್​ಶಾಟ್ ವಾಟ್ಸ್​​ಆ್ಯಪ್​ಗಳಲ್ಲಿ ಹರಿದಾಡುತ್ತಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:18 pm, Sat, 13 May 23

Follow Us
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ