AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಆಯ್ಕೆ ನಿರ್ಧಾರ ಕೈಗೊಳ್ಳುವ ಮುನ್ನವೇ ಹೇಳಿಕೆ ನೀಡಿದವರ ಮೇಲೆ ಕಾಂಗ್ರೆಸ್ ಗರಂ; ಎಚ್ಚರಿಕೆ

ಮುಖ್ಯಮಂತ್ರಿ ಅಭ್ಯರ್ಥಿ ವಿಚಾರವಾಗಿ ಎಐಸಿಸಿ ಘೋಷಣೆಗೂ ಮೊದಲೇ ಹೇಳಿಕೆ ನೀಡಿದ್ದವರ ಮೇಲೆ ಕಾಂಗ್ರೆಸ್​ ಹೈಕಮಾಂಡ್ ಗರಂ ಆಗಿದೆ. ಅಧಿಕೃತ ನಿರ್ಧಾರಕ್ಕೂ ಮೊದಲೇ ಹೇಳಿಕೆ ನೀಡಿದವರಿಗೆ ನೋಟಿಸ್ ನೀಡಲಾಗುವುದು ಎಂದು ಕಾಂಗ್ರೆಸ್​ನ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಆಯ್ಕೆ ನಿರ್ಧಾರ ಕೈಗೊಳ್ಳುವ ಮುನ್ನವೇ ಹೇಳಿಕೆ ನೀಡಿದವರ ಮೇಲೆ ಕಾಂಗ್ರೆಸ್ ಗರಂ; ಎಚ್ಚರಿಕೆ
ಸಾಂದರ್ಭಿಕ ಚಿತ್ರ
Ganapathi Sharma
|

Updated on: May 17, 2023 | 6:32 PM

Share

ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ವಿಚಾರ ಕಾಂಗ್ರೆಸ್ (Congress) ಹೈಕಮಾಂಡ್​ಗೆ ಜಟಿಲ ಸಮಸ್ಯೆಯಾಗಿ ಪರಿಣಮಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ. ಈ ಮಧ್ಯೆ, ಮುಖ್ಯಮಂತ್ರಿ ಅಭ್ಯರ್ಥಿ ವಿಚಾರವಾಗಿ ಎಐಸಿಸಿ ಘೋಷಣೆಗೂ ಮೊದಲೇ ಹೇಳಿಕೆ ನೀಡಿದ್ದವರ ಮೇಲೆ ಕಾಂಗ್ರೆಸ್​ ಹೈಕಮಾಂಡ್ ಗರಂ ಆಗಿದೆ. ಅಧಿಕೃತ ನಿರ್ಧಾರಕ್ಕೂ ಮೊದಲೇ ಹೇಳಿಕೆ ನೀಡಿದವರಿಗೆ ನೋಟಿಸ್ ನೀಡಲಾಗುವುದು ಎಂದು ಕಾಂಗ್ರೆಸ್​ನ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಹೇಳಿದ್ದ ಕೆಲವು ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಖಡಕ್ ಎಚ್ಚರಿಕೆ ನೀಡಿದೆ. ಜತೆಗೆ, ಈ ರೀತಿಯ ಹೇಳಿಕೆಗಳನ್ನು ನೀಡಿದಲ್ಲಿ ನೋಟಿಸ್ ನೀಡುವ ಎಚ್ಚರಿಕೆ ನೀಡಲಾಗಿದೆ.

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಹಾಗೂ ಅಶೋಕ್​ ಪಟ್ಟಣ್​ಗೆ ನೋಟಿಸ್ ನೀಡುವಂತೆ ಸುರ್ಜೇವಾಲ ಸೂಚನೆ ನೀಡಿದ್ದಾರೆ. ಸಿದ್ದರಾಮಯ್ಯ ಸಿಎಂ ಎಂದು ಘೋಷಣೆಯಾಗಿದೆ ಎಂದು ಡಾ.ಪುಷ್ಪಾ ಹೇಳಿದ್ದರು.

ಈ ಮಧ್ಯೆ, ಸಿದ್ದರಾಮಯ್ಯ ಸಿಎಂ ಆಗುವುದು ಬಹುತೇಕ ಖಚಿತವಾಗಿದೆ. ಪ್ರಮಾಣವಚನಕ್ಕೆ ಸಿದ್ಧತೆಗಳೂ ನಡೆಯುತ್ತಿವೆ ಎಂದು ಕೆಲವು ಮಾಧ್ಯಮಗಳು ವರದಿಯನ್ನೂ ಮಾಡಿದ್ದವು. ಇದಕ್ಕೆ ಡಿಕೆ ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದರು. ಖರ್ಗೆ ಬಳಿ ವಿಚಾರ ಪ್ರಸ್ತಾಪಿಸಿದ್ದ ಅವರು, ಅಧಿಕೃತ ಘೋಷಣೆಗೂ ಮುನ್ನವೇ ಮಾಧ್ಯಮಗಳಿಗೆ ಹೇಳಿಕೆ ನೀಡುವವರು ಯಾರು ಎಂದು ತರಾಟೆಗೆ ತೆಗೆದುಕೊಂಡಿದ್ದರು.

ಇದನ್ನೂ ಓದಿ: ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ತೀರ್ಮಾನ ಅಂತಿಮವಾಗಿಲ್ಲ; ರಣದೀಪ್ ಸುರ್ಜೇವಾಲ

ಇದರ ಬೆನ್ನಲ್ಲೇ ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡಿದ್ದ ಸುರ್ಜೇವಾಲ, ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಂತಿಮ ತೀರ್ಮಾನ ಆಗಿಲ್ಲ. ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇಬ್ಬರೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ಎಐಸಿಸಿ ಅಧ್ಯಕ್ಷ ಖರ್ಗೆ ತೀರ್ಮಾನ ಮಾಡುತ್ತಾರೆ ಎಂದು ಹೇಳಿದ್ದರು.

ಈ ಮಧ್ಯೆ, ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಸಿದ್ಧತೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ