AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗದೀಶ್​ ಶೆಟ್ಟರ್​ ಸೋಲಿಸಲು ಹುಬ್ಬಳ್ಳಿಗೆ ನಾಗಪುರ ತಂಡ ಆಗಮನ: ಬಿಜೆಪಿಗೆ ಟಾಂಗ್ ಕೊಟ್ಟ​ ಮಾಜಿ ಸಿಎಂ

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಯವರು ಕೂಡಲ ಸಂಗಮಕ್ಕೆ ಹೋಗುವ ಹಿನ್ನಲೆ ಹುಬ್ಬಳ್ಳಿ ಏರಪೋರ್ಟ್​ಗೆ ಬಂದಿದ್ದರು. ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಲಿಂಗಾಯತ ಸಮುದಾಯ ವಿಚಾರದ ಬಗ್ಗೆಯೂ ಚರ್ಚೆ ಆಗಿದೆ. ನಾಳೆ ಹಾನಗಲ್ ಪ್ರಚಾರಕ್ಕೆ ಆಹ್ವಾನಿಸಿದ್ದಾರೆ, ನಾನು ಹೋಗುತ್ತೇನೆ ಎಂದು ಜಗದೀಶ್​ ಶೆಟ್ಟರ್​ ಹೇಳಿದ್ದಾರೆ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 23, 2023 | 1:57 PM

Share

ಮುಖ್ಯಾಂಶಗಳು

  • ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ನಾಯಕ ಜಗದೀಶ್​​ ಶೆಟ್ಟರ್ ಅವರನ್ನು ಸೋಲಿಸಲು ಬಿಜೆಪಿ ರಣತಂತ್ರಗಳನ್ನು ಎಣೆಯುತ್ತಿದೆ.
  • ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಅವರ ಮೇಲೆ ಕಣ್ಣಿಡಲು ನಾಗಪುರದಿಂದ ತಂಡ ಆಗಮಿಸಿದೆ ಎನ್ನಲಾಗುತ್ತಿದೆ.
  • ಈ ವಿಚಾರವಾಗಿ ಮಾತನಾಡಿದ ಜಗದೀಶ್​ ಶೆಟ್ಟರ್​ ಅವರು ಹೊರಗಿನವರು ಸಕ್ಸಸ್​ಫುಲ್​ ಆಗಿ ಚುನಾವಣೆ ಮಾಡಲು ಆಗಲ್ಲ. ಹೊರಗಿನವರು ಬಂದು ಸ್ಟಡಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ (Congress) ನಾಯಕ ಜಗದೀಶ್​​ ಶೆಟ್ಟರ್ (Jagadish Shettar)​ ಅವರನ್ನು ಸೋಲಿಸಲು ಬಿಜೆಪಿ (BJP) ರಣತಂತ್ರಗಳನ್ನು ಎಣೆಯುತ್ತಿದೆ. ಅಲ್ಲದೇ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಅವರ ಮೇಲೆ ಕಣ್ಣಿಡಲು ನಾಗಪುರದಿಂದ ತಂಡ ಆಗಮಿಸಿದೆ ಎನ್ನಲಾಗುತ್ತಿದೆ. ಈ ವಿಚಾರವಾಗಿ ಮಾತನಾಡಿದ ಜಗದೀಶ್​ ಶೆಟ್ಟರ್​ ಅವರು ಹೊರಗಿನವರು ಸಕ್ಸಸ್​ಫುಲ್​ ಆಗಿ ಚುನಾವಣೆ ಮಾಡಲು ಆಗಲ್ಲ. ಹೊರಗಿನವರು ಬಂದು ಸ್ಟಡಿ ಮಾಡಲು ಸಾಧ್ಯವಿಲ್ಲ. ನಾಗಪುರದಿಂದ ವಿಶೇಷ ತಂಡ ಬಂದಿದೆಯೋ ಇಲ್ಲವೋ ಗೊತ್ತಿಲ್ಲ. ನಾಗಪುರದಲ್ಲಿ ಬಿಜೆಪಿಯವರು ಪದವೀಧರ ಚುನಾವಣೆಯಲ್ಲಿ ಯಾಕೆ ಸೋತರು? ಎಂದು ಬಿಜೆಪಿ ನಾಯಕರಿಗೆ ಪ್ರಶ್ನಿಸಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಯವರನ್ನು ಸ್ವಾಗತಿಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಯವರು ಕೂಡಲ ಸಂಗಮಕ್ಕೆ ಹೋಗುವ ಹಿನ್ನಲೆ ಹುಬ್ಬಳ್ಳಿ ಏರಪೋರ್ಟ್​ಗೆ ಬಂದಿದ್ದರು. ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಲಿಂಗಾಯತ ಸಮುದಾಯ ವಿಚಾರದ ಬಗ್ಗೆಯೂ ಚರ್ಚೆ ಆಗಿದೆ. ನಾಳೆ ಹಾನಗಲ್ ಪ್ರಚಾರಕ್ಕೆ ಆಹ್ವಾನಿಸಿದ್ದಾರೆ, ನಾನು ಹೋಗುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: ಧಾರವಾಡ ಜಿಲ್ಲೆಯಲ್ಲಿ ಮತ್ತೋರ್ವ ಪ್ರಭಾವಿ ಬಿಜೆಪಿ ನಾಯಕನನ್ನು ಸೆಳೆದ ಕಾಂಗ್ರೆಸ್, ವಿನಯ್ ಕುಲಕರ್ಣಿಗೆ ಕೊಂಚ ರಿಲೀಫ್

ನಾನು ನನ್ನ ರಾಜಕಾರಣದಲ್ಲಿ ನೆಗೆಟಿಪ್ ಕ್ಯಾಂಪೇನ್ ಎದುರಿಸಿದ್ದೇನೆ. ಸಾಮಾಜಿಕ ಜಾಲತಾಣದಲ್ಲಿ ಬರೆದರೇ ಏನ ಆಗಲ್ಲ. ಅಲ್ತಾಫ್ ಕಿತ್ತೂರ ಬಂಡಾಯವೆದ್ದಿರುವ ವಿಚಾರವಾಗಿ ಮಾತನಾಡಿದ ಅವರು ಅವರ ಜೊತೆ ನಾನು ಮಾತನಾಡುತ್ತೇನೆ, ವರಿಷ್ಠರು ಮಾತನಾಡುತ್ತಾರೆ. ಜನರ ಆಶೀರ್ವಾದ ನನ್ನ ಮೇಲೆ ಇದೆ‌ ಎಂದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:55 pm, Sun, 23 April 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ