AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗದೀಶ್​ ಶೆಟ್ಟರ್​ ಸೋಲಿಸಲು ಹುಬ್ಬಳ್ಳಿಗೆ ನಾಗಪುರ ತಂಡ ಆಗಮನ: ಬಿಜೆಪಿಗೆ ಟಾಂಗ್ ಕೊಟ್ಟ​ ಮಾಜಿ ಸಿಎಂ

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಯವರು ಕೂಡಲ ಸಂಗಮಕ್ಕೆ ಹೋಗುವ ಹಿನ್ನಲೆ ಹುಬ್ಬಳ್ಳಿ ಏರಪೋರ್ಟ್​ಗೆ ಬಂದಿದ್ದರು. ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಲಿಂಗಾಯತ ಸಮುದಾಯ ವಿಚಾರದ ಬಗ್ಗೆಯೂ ಚರ್ಚೆ ಆಗಿದೆ. ನಾಳೆ ಹಾನಗಲ್ ಪ್ರಚಾರಕ್ಕೆ ಆಹ್ವಾನಿಸಿದ್ದಾರೆ, ನಾನು ಹೋಗುತ್ತೇನೆ ಎಂದು ಜಗದೀಶ್​ ಶೆಟ್ಟರ್​ ಹೇಳಿದ್ದಾರೆ.

ವಿವೇಕ ಬಿರಾದಾರ
|

Updated on:Apr 23, 2023 | 1:57 PM

Share

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ (Congress) ನಾಯಕ ಜಗದೀಶ್​​ ಶೆಟ್ಟರ್ (Jagadish Shettar)​ ಅವರನ್ನು ಸೋಲಿಸಲು ಬಿಜೆಪಿ (BJP) ರಣತಂತ್ರಗಳನ್ನು ಎಣೆಯುತ್ತಿದೆ. ಅಲ್ಲದೇ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಅವರ ಮೇಲೆ ಕಣ್ಣಿಡಲು ನಾಗಪುರದಿಂದ ತಂಡ ಆಗಮಿಸಿದೆ ಎನ್ನಲಾಗುತ್ತಿದೆ. ಈ ವಿಚಾರವಾಗಿ ಮಾತನಾಡಿದ ಜಗದೀಶ್​ ಶೆಟ್ಟರ್​ ಅವರು ಹೊರಗಿನವರು ಸಕ್ಸಸ್​ಫುಲ್​ ಆಗಿ ಚುನಾವಣೆ ಮಾಡಲು ಆಗಲ್ಲ. ಹೊರಗಿನವರು ಬಂದು ಸ್ಟಡಿ ಮಾಡಲು ಸಾಧ್ಯವಿಲ್ಲ. ನಾಗಪುರದಿಂದ ವಿಶೇಷ ತಂಡ ಬಂದಿದೆಯೋ ಇಲ್ಲವೋ ಗೊತ್ತಿಲ್ಲ. ನಾಗಪುರದಲ್ಲಿ ಬಿಜೆಪಿಯವರು ಪದವೀಧರ ಚುನಾವಣೆಯಲ್ಲಿ ಯಾಕೆ ಸೋತರು? ಎಂದು ಬಿಜೆಪಿ ನಾಯಕರಿಗೆ ಪ್ರಶ್ನಿಸಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಯವರನ್ನು ಸ್ವಾಗತಿಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಯವರು ಕೂಡಲ ಸಂಗಮಕ್ಕೆ ಹೋಗುವ ಹಿನ್ನಲೆ ಹುಬ್ಬಳ್ಳಿ ಏರಪೋರ್ಟ್​ಗೆ ಬಂದಿದ್ದರು. ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಲಿಂಗಾಯತ ಸಮುದಾಯ ವಿಚಾರದ ಬಗ್ಗೆಯೂ ಚರ್ಚೆ ಆಗಿದೆ. ನಾಳೆ ಹಾನಗಲ್ ಪ್ರಚಾರಕ್ಕೆ ಆಹ್ವಾನಿಸಿದ್ದಾರೆ, ನಾನು ಹೋಗುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: ಧಾರವಾಡ ಜಿಲ್ಲೆಯಲ್ಲಿ ಮತ್ತೋರ್ವ ಪ್ರಭಾವಿ ಬಿಜೆಪಿ ನಾಯಕನನ್ನು ಸೆಳೆದ ಕಾಂಗ್ರೆಸ್, ವಿನಯ್ ಕುಲಕರ್ಣಿಗೆ ಕೊಂಚ ರಿಲೀಫ್

ನಾನು ನನ್ನ ರಾಜಕಾರಣದಲ್ಲಿ ನೆಗೆಟಿಪ್ ಕ್ಯಾಂಪೇನ್ ಎದುರಿಸಿದ್ದೇನೆ. ಸಾಮಾಜಿಕ ಜಾಲತಾಣದಲ್ಲಿ ಬರೆದರೇ ಏನ ಆಗಲ್ಲ. ಅಲ್ತಾಫ್ ಕಿತ್ತೂರ ಬಂಡಾಯವೆದ್ದಿರುವ ವಿಚಾರವಾಗಿ ಮಾತನಾಡಿದ ಅವರು ಅವರ ಜೊತೆ ನಾನು ಮಾತನಾಡುತ್ತೇನೆ, ವರಿಷ್ಠರು ಮಾತನಾಡುತ್ತಾರೆ. ಜನರ ಆಶೀರ್ವಾದ ನನ್ನ ಮೇಲೆ ಇದೆ‌ ಎಂದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:55 pm, Sun, 23 April 23

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ