Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮುಖಂಡರು ಹೀಗೇ ಆಡಿದರೆ 80 ಸೀಟೂ ಬರೋಲ್ಲ ಎಂದ ಕೆಜಿಎಫ್ ಬಾಬು; ಕೆಪಿಸಿಸಿ ಕಚೇರಿಯಲ್ಲಿ ಮುಖಂಡರ ವಾಗ್ವಾದ

KGF Babu: ಕೆಪಿಸಿಸಿ ಕಚೇರಿಯಲ್ಲಿ ಇರುವವರು ಸರಿಯಿಲ್ಲ. ಇಲ್ಲಿ ಬಂದವರಿಗೆ ಮರ್ಯಾದೆ ಕೊಡಲ್ಲವೆಂದು ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಷರಾ ಬರೆಯುವ ರೀತಿ ಬಾಬು ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡರು ಹೀಗೇ ಆಡಿದರೆ 80 ಸೀಟೂ ಬರೋಲ್ಲ ಎಂದ ಕೆಜಿಎಫ್ ಬಾಬು; ಕೆಪಿಸಿಸಿ ಕಚೇರಿಯಲ್ಲಿ ಮುಖಂಡರ ವಾಗ್ವಾದ
ಕಾಂಗ್ರೆಸ್ ಮುಖಂಡರು ಹೀಗೇ ಆಡಿದರೆ 80 ಸೀಟೂ ಬರೋಲ್ಲ ಎಂದ ಕೆಜಿಎಫ್ ಬಾಬು; ಮುಖಂಡರ ವಾಗ್ವಾದ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jan 06, 2023 | 2:27 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಎದುರಿಗೇ ಇದೆ. ನಾನಾ ಪಕ್ಷಗಳು, ಅಭ್ಯರ್ಥಿಗಳು, ಬೆಂಬಲಿಗರು ನೇರಾ ನೇರಾ, ಎದುರಾ ಎದುರಾ ಚುನಾವಣಾ ಆಟಗಳಾಡಲು ಅದಾಗಲೇ ಕಣಕ್ಕೆ ಇಳಿದಿದ್ದಾರೆ. ಅದರಲ್ಲೂ, ಒಂದು ರೀತಿ ಕಾಂಗ್ರೆಸ್​​ ಪಕ್ಷದಿಂದ (Congress) ಬಂಡಾಯ ಎದ್ದಿರುವ ರೀತಿಯಲ್ಲಿ ಕೆಜಿಎಫ್​ ಬಾಬು (KGF Babu) ಬೆಂಗಳೂರು ಹೃದಯ ಭಾಗದ ಚಿಕ್ಕಪೇಟೆ ಕ್ಷೇತ್ರದಲ್ಲಿ ಚುನಾವಣೆ ಘೋಷಣೆಗೂ ಮುನ್ನ ಕುಳಿತುಬಿಟ್ಟಿದ್ದಾರೆ. ಗೆಲುವು ಸಾಧಿಸುವವರಿಗೂ ಕ್ಷೇತ್ರ ಬಿಟ್ಟು ಕದಲುವುದಿಲ್ಲ ಅಂತಿದ್ದಾರೆ. ಹಗಲೂ ರಾತ್ರಿ ಜನಸೇವೆಯೇ ಜನಾರ್ದನ ಸೇವೆ ಎಂದು ಮತದಾರರ ಸೇವೆಯಲ್ಲಿ ತೊಡಗಿದ್ದಾರೆ.

ಈ ಮಧ್ಯೆ ಸ್ಥಳೀಯವಾಗಿ ಕಾಂಗ್ರೆಸ್​ ಮುಖಂಡರು ತಮಗೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಕೆಜಿಎಫ್ ಬಾಬು ಅನೇಕ ಬಾರಿ ಅಲವತ್ತುಕೊಂಡಿದ್ದಾರೆ. ಅದರ ಮುಂದುವರಿದ ಭಾಗವಾಗಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಯೂ (KPCC) ಕಾಂಗ್ರೆಸ್ ನಾಯಕರು ಮತ್ತು ಬಾಬು ಮಧ್ಯೆ ಪರಸ್ಪರ ವಾಗ್ವಾದವಾದ ಪ್ರಸಂಗ ನಡೆದಿದೆ.

ಕಾಂಗ್ರೆಸ್​ ಕಚೇರಿಗೆ ಬಂದಿದ್ದ ಕೆಜಿಎಫ್ ಬಾಬು ಬಹಿರಂಗವಾಗಿಯೇ… ಕಾಂಗ್ರೆಸ್ ನವರು ಓವರ್ ಕಾನ್ಫಿಡೆನ್ಸ್ ನಲ್ಲಿ ಇದ್ದಾರೆ. ಹೀಗಾದ್ರೆ ಕಾಂಗ್ರೆಸ್ 80 ಸೀಟು ಸಹ ಬರಲ್ಲ ಎಂದು ಗುಟುರು ಹಾಕಿದ್ದಾರೆ. ಕೆಪಿಸಿಸಿ ಅಧ್ಯಕ್ಷರು ಪತ್ನಿ, ಮಕ್ಕಳನ್ನು ಬಿಟ್ಟು ಕೆಲಸ ಮಾಡ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರೂ ಸಹ ಹಗಲಿರುಳು ಕೆಲಸ ಮಾಡ್ತಿದ್ದಾರೆ. ಆದರೆ ಕೆಪಿಸಿಸಿ ಕಚೇರಿಯಲ್ಲಿ ಇರುವವರು ಸರಿಯಿಲ್ಲ. ಇಲ್ಲಿ ಬಂದವರಿಗೆ ಮರ್ಯಾದೆ ಕೊಡಲ್ಲವೆಂದು ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಷರಾ ಬರೆಯುವ ರೀತಿ ಬಾಬು ಹೇಳಿದ್ದಾರೆ.

ಇದನ್ನು ಕೇಳಿಸಿಕೊಂಡು ಸ್ಥಳದಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ​ಕೆಜಿಎಫ್ ಬಾಬು ವಿರುದ್ಧ ರೊಚ್ಚಿಗೆದ್ದಿದ್ದಾರೆ. ಕೆಜಿಎಫ್ ಬಾಬು ಮಾತಿಗೆ ಕೆರಳಿಕೆಂಡವಾದ ಕಾಂಗ್ರೆಸ್​ ನಾಯಕರು ಬಾಬುಗೆ ಆವಾಜ್ ಹಾಕಿದ್ದಾರೆ. ಬಾಬು ಹೀಗೆಲ್ಲ ಇಲ್ಲಿ ನಿಂತು ಮಾತಾಡಬೇಡ ಎಂದು ಕಾರ್ಯಕರ್ತರು ಗರಂ ಆಗಿದ್ದಾರೆ. ಆಗ ಕಾರ್ಯಕರ್ತರಿಗೇ ಕೆಜಿಎಫ್ ಬಾಬು ಆವಾಜ್ ಹಾಕಲು ಹೋಗಿದ್ದಾರೆ. ಆ ವೇಳೆ, ಕೈ ಮುಖಂಡರು ಕಾರ್ಯಕರ್ತರು ಬಾಬುಗೆ ಚಳಿ ಬಿಡಿಸಿ ಕೆಪಿಸಿಸಿ ಕಚೇರಿಯಿಂದ ಹೊರ ಕಳುಹಿಸಿದ ಪ್ರಸಂಗವೂ ನಡೆದಿದೆ.

ಕರ್ನಾಟಕ ಅಸೆಂಬ್ಲಿ ಚುನಾವಣೆ 2023 ಕುರಿತಾದ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು