AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಎಂಜಿನಿಯರಿಂಗ್, ಎಂಬಿಬಿಎಸ್ ಓದಿದವರಿಗೆ ಉದ್ಯೋಗ ಸಿಗುತ್ತಿಲ್ಲ; ರಾಹುಲ್ ಗಾಂಧಿ

ಎಂಜಿನಿಯರಿಂಗ್, ಎಂಬಿಬಿಎಸ್ ಓದಿದವರಿಗೆ ಉದ್ಯೋಗ ಸಿಗುತ್ತಿಲ್ಲ. ಉನ್ನತ ವ್ಯಾಸಂಗ ಮಾಡಿದವರು ಇನ್ನೂ ಕೂಲಿ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗದಗ: ಎಂಜಿನಿಯರಿಂಗ್, ಎಂಬಿಬಿಎಸ್ ಓದಿದವರಿಗೆ ಉದ್ಯೋಗ ಸಿಗುತ್ತಿಲ್ಲ; ರಾಹುಲ್ ಗಾಂಧಿ
ರಾಹುಲ್ ಗಾಂಧಿ
ಗಣಪತಿ ಶರ್ಮಾ
|

Updated on: Apr 24, 2023 | 7:32 PM

Share

ಮುಖ್ಯಾಂಶಗಳು

  • ಗದಗ, ಹಾವೇರಿಯಲ್ಲಿ ರಾಹುಲ್ ಗಾಂಧಿ ಮತ ಬೇಟೆ
  • ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ
  • ಕಾಂಗ್ರೆಸ್​​ಗೆ 150 ಸ್ಥಾನ ಗೆಲ್ಲಿಸಿಕೊಡುವಂತೆ ಕಾರ್ಯಕರ್ತರಲ್ಲಿ ಮನವಿ

ಗದಗ/ ಹಾವೇರಿ: ಎಂಜಿನಿಯರಿಂಗ್, ಎಂಬಿಬಿಎಸ್ ಓದಿದವರಿಗೆ ಉದ್ಯೋಗ ಸಿಗುತ್ತಿಲ್ಲ. ಉನ್ನತ ವ್ಯಾಸಂಗ ಮಾಡಿದವರು ಇನ್ನೂ ಕೂಲಿ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗದಗ‌ದ ಕೈಗಾರಿಕಾ ಪ್ರದೇಶದ ತಿರಂಗಾ ಪಾರ್ಕ್​ನಲ್ಲಿ ಯುವಕರ ಜತೆ ಸಂವಾದ ನಡೆಸಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಹೆಚ್​.ಕೆ.ಪಾಟೀಲ್ ಪರ ಮತ ಯಾಚಿಸಿದರು. ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಮೇಡ್ ಇನ್​ ಚೀನಾ ಆಗ್ತಿದೆ, ಮೇಡ್​ ಇನ್ ಇಂಡಿಯಾ ಏಕೆ ಆಗ್ತಿಲ್ಲ? ಶರ್ಟ್​, ಚಪ್ಪಲಿ, ಕ್ಯಾಮರಾ ಎಲ್ಲವೂ ಮೇಡ್​ ಇನ್ ಚೀನಾ ಆಗಿದೆ. ವಿಮಾನ ನಿಲ್ದಾಣ​, ಬಿಎಸ್​ಎನ್​ಎಲ್​ ಎಲ್ಲವೂ ಖಾಸಗೀಕರಣ ಆಗುತ್ತಿದೆ ಎಂದು ಟೀಕಿಸಿದರು.

ನಂತರ ಹಾವೇರಿಗೆ ತೆರಳಿ, ಅಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ 150 ಸೀಟುಗಳನ್ನು ಗೆಲ್ಲಲಿದೆ. ನೀವು 150 ಸೀಟು ಗೆಲ್ಲಿಸಿಕೊಡಬೇಕು. ಒಂದು ವೇಳೆ ಗೆಲ್ಲಿಸಿ ಕೊಡದಿದ್ದರೆ ಶಾಸಕರನ್ನು ಖರೀದಿ ಮಾಡಲು ಹಣ ಖರ್ಚು ಮಾಡುತ್ತಾರೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಇದನ್ನೂ ಓದಿ: ಶಿಡ್ಲಘಟ್ಟ; ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ರದ್ದು ಮಾಡಲಿದೆ, ಬಿಜೆಪಿಗೆ ಮತ ನೀಡಿ ಎಂದ ನಡ್ಡಾ

ಭ್ರಷ್ಟಾಚಾರದಲ್ಲಿ ಬಿಜೆಪಿಯವರು ಡಿಸ್ಕೌಂಟ್ ಕೊಡುತ್ತಾರೆ. ಯಾವುದೆ ಕೆಲಸಕ್ಕಾದರೂ ಶೇ 40 ಕಮೀಷನ್ ಕೊಡಬೇಕು. ಮೈಸೂರು ಸಾಂಡಲ್ ಕಾರ್ಖಾನೆಯ ಮಾಲೀಕನ ಮಗ 8 ಕೋಟಿ ವ್ಯವಹಾರದಲ್ಲಿ ಸಿಕ್ಕಿಬಿದ್ದಿದ್ದಾನೆ. ಉದ್ಯೋಗದಲ್ಲೂ ಭ್ರಷ್ಟಾಚಾರ ನಡೆದಿದೆ. ಇವರಿಗೆ 40 ಎಂಬ ಸಂಖ್ಯೆ ಬಹಳ ಇಷ್ಟ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ 40 ಸೀಟುಗಳು ಮಾತ್ರ ಬರಲಿವೆ ಎಂದು ರಾಹುಲ್ ವ್ಯಂಗ್ಯವಾಡಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್