AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗದೀಶ್​ ಶೆಟ್ಟರ್​ ಮನೆಗೆ ಸುರ್ಜೇವಾಲಾ ಭೇಟಿ: ಲಿಂಗಾಯತರ ಮತ ಸೆಳೆಯಲು ಸೂಚನೆ

ರಾಜ್ಯ ಕಾಂಗ್ರೆಸ್​ ಚುನಾವಣಾ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೆವಾಲಾ ಇಂದು (ಏ.21) ಹುಬ್ಬಳ್ಳಿಯ ಜಗದೀಶ್​ ಶೆಟ್ಟರ್​ ಅವರ ಮೆನೆಗೆ ಭೇಟಿ ನೀಡಿದರು. ಈ ವೇಳೆ ಜಗದೀಶ್​​ ಶೆಟ್ಟರ್​​ ಅವರಿಗೆ ಅನೇಕ ಸಲಹೆಗಳನ್ನು ನೀಡಿದ್ದಾರೆ.

ಜಗದೀಶ್​ ಶೆಟ್ಟರ್​ ಮನೆಗೆ ಸುರ್ಜೇವಾಲಾ ಭೇಟಿ: ಲಿಂಗಾಯತರ ಮತ ಸೆಳೆಯಲು ಸೂಚನೆ
ಜಗದೀಶ್​ ಶೆಟ್ಟರ್​, ರಣದೀಪ್​ ಸಿಂಗ್​ ಸುರ್ಜೆವಾಲಾ
ವಿವೇಕ ಬಿರಾದಾರ
|

Updated on: Apr 21, 2023 | 1:16 PM

Share

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರದ (Hubli-Dharwad Central Constituency) ಟಿಕೆಟ್​ ಸಿಗದ ಹಿನ್ನೆಲೆ ಅಸಮಾಧಾನಗೊಂಡು ಸ್ವಾಭಿಮಾನದ ಪ್ರಶ್ನೆಯೆಂದು ಬಿಜೆಪಿ (BJP) ಬಿಟ್ಟು ಕಾಂಗ್ರೆಸ್ (Congress)​ ಸೇರಿರುವ ಮಾಜಿ ಸಚಿವ ಜಗದೀಶ್​ ಶೆಟ್ಟರ್ (Jagadish Shettar)​​ ಅವರಿಗೆ ಕೈ ನಾಯಕರು ಲಿಂಗಾಯತ ಟಾಸ್ಕ್​ ನೀಡಿದ್ದಾರೆ. ಹೌದು ಜಗದೀಶ್​ ಶೆಟ್ಟರ್​ ಅವರು ಅತಿದೊಡ್ಡ ಲಿಂಗಾಯತ​ ಸಮುದಾಯದ ಪ್ರಬಲ ನಾಯಕರಲ್ಲೊಬ್ಬರು. ಇದು ಬಿಜೆಪಿಗೆ ವರವಾಗಿತ್ತು. ಆದರೆ ಈಗ ಶೆಟ್ಟರ್​ ಕಾಂಗ್ರೆಸ್​ ಸೇರ್ಪಡೆಯಿಂದ ಅಲ್ಪ ಪ್ರಮಾಣದಲ್ಲಿ ಲಿಂಗಾಯತ ಮತಗಳು ಬಿಜೆಪಿಯಿಂದ ಕಾಂಗ್ರೆಸ್​ ಕಡೆ ವಾಲಿವೆ. ಇದು ಬಿಜೆಪಿಗೆ ನಷ್ಟ ಉಂಟು ಮಾಡಲಿದೆ. ಇನ್ನು ಶೆಟ್ಟರ್​ ಅವರನ್ನು ಮುಂದಿಟ್ಟುಕ್ಕೊಂಡು ಕಾಂಗ್ರೆಸ್​ ಬಿಜೆಪಿ ಲಿಂಗಾಯತ ವಿರೋಧಿ ಎಂದು ಬಣ್ಣಿಸಲು ಹೊರಟಿದೆ. ಈ ಹಿನ್ನೆಲೆಯಲ್ಲಿಯೇ ಕಾಂಗ್ರೆಸ್​ ಸ್ಟಾರ್​ ಪ್ರಚಾರಕರ ಪಟ್ಟಿಯಲ್ಲಿ ಜಗದೀಶ್​ ಶೆಟ್ಟರ್ ಅವರಿಗೆ ಸ್ಥಾನ ಸಿಕ್ಕಿದೆ ಎನ್ನಲಾಗುತ್ತಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್​ ಚುನಾವಣಾ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೆವಾಲಾ ಇಂದು (ಏ.21) ಹುಬ್ಬಳ್ಳಿಯ ಜಗದೀಶ್​ ಶೆಟ್ಟರ್​ ಅವರ ಮೆನೆಗೆ ಭೇಟಿ ನೀಡಿದರು. ಈ ವೇಳೆ ಅನೇಕ ಸಲಹೆಗಳನ್ನು ನೀಡಿದರು ಎಂದು ಮಾಹಿತಿ ದೊರೆತಿದೆ.

ಲಿಂಗಾಯತ ಮತಗಳನ್ನು ಸೆಳೆಯಲು ತಂತ್ರ ರೂಪಿಸಿ. ಲಿಂಗಾಯತ ನಾಯಕರಿಗೆ ಬಿಜೆಪಿ ಮೋಸ ಮಾಡಿದೆ ಅನ್ನೋದನ್ನ ಬಿಂಬಿಸಿ. ಕೇವಲ ನಿಮ್ಮ ಕ್ಷೇತ್ರವಲ್ಲ ಸುತ್ತ ಮುತ್ತಲಿನ ಕ್ಷೇತ್ರದಲ್ಲೂ ನೀವು ತಂತ್ರ ಹೆಣೆಯಬೇಕು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್​ ಗೆಲ್ಲಲೇಬೇಕು. ಕಳೆದ ಮೂವತ್ತು ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿರೋ ಸೆಂಟ್ರಲ್ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್​ ಬಾವುಟ ಹಾರಿಸಬೇಕೆಂದು ಜಗದೀಶ್​ ಶೆಟ್ಟರ್ ಅವರಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಸೋಮಣ್ಣ ಪರ ಮತಯಾಚನೆಗೆ ಹೋಗಿದ್ದ ಪ್ರತಾಪ್​ಸಿಂಹಗೆ ಸ್ಥಳೀಯರಿಂದ ತರಾಟೆ

ಹುಬ್ಬಳ್ಳಿ ಕಾಂಗ್ರೆಸ್​ನಲ್ಲಿ ಟಿಕೆಟ್ ಆಕಾಂಕ್ಷಿಗಳಾದ ಲಕ್ಷ್ಮೀ ಹೆಬ್ಬಾಳಕರ್ ಅಳಿಯ ರಜತ್ ಮತ್ತು ಅನಿಲ್ ಕುಮಾರ್ ನಡುವೆ ಬಣ ಬಡಿದಾಟ ಇತ್ತು. ಈ ವೈಮನಸ್ಸನ್ನು ಜಗದೀಶ್​ ಶೆಟ್ಟರ್​​ ಮನೆಯಲ್ಲಿಯೇ ರಣದೀಪ್​ ಸಿಂಗ್​ ಸುರ್ಜೇವಾಲಾ ಶಮನ ಮಾಡಿದ್ದಾರೆ. ಜೊತೆಗೆ ಇಬ್ಬರಿಗೂ ಜಗದೀಶ್​ ಶೆಟ್ಟರ್ ಪರ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ