ಜಗದೀಶ್​ ಶೆಟ್ಟರ್​ ಮನೆಗೆ ಸುರ್ಜೇವಾಲಾ ಭೇಟಿ: ಲಿಂಗಾಯತರ ಮತ ಸೆಳೆಯಲು ಸೂಚನೆ

ರಾಜ್ಯ ಕಾಂಗ್ರೆಸ್​ ಚುನಾವಣಾ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೆವಾಲಾ ಇಂದು (ಏ.21) ಹುಬ್ಬಳ್ಳಿಯ ಜಗದೀಶ್​ ಶೆಟ್ಟರ್​ ಅವರ ಮೆನೆಗೆ ಭೇಟಿ ನೀಡಿದರು. ಈ ವೇಳೆ ಜಗದೀಶ್​​ ಶೆಟ್ಟರ್​​ ಅವರಿಗೆ ಅನೇಕ ಸಲಹೆಗಳನ್ನು ನೀಡಿದ್ದಾರೆ.

ಜಗದೀಶ್​ ಶೆಟ್ಟರ್​ ಮನೆಗೆ ಸುರ್ಜೇವಾಲಾ ಭೇಟಿ: ಲಿಂಗಾಯತರ ಮತ ಸೆಳೆಯಲು ಸೂಚನೆ
ಜಗದೀಶ್​ ಶೆಟ್ಟರ್​, ರಣದೀಪ್​ ಸಿಂಗ್​ ಸುರ್ಜೆವಾಲಾ
Follow us
|

Updated on: Apr 21, 2023 | 1:16 PM

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರದ (Hubli-Dharwad Central Constituency) ಟಿಕೆಟ್​ ಸಿಗದ ಹಿನ್ನೆಲೆ ಅಸಮಾಧಾನಗೊಂಡು ಸ್ವಾಭಿಮಾನದ ಪ್ರಶ್ನೆಯೆಂದು ಬಿಜೆಪಿ (BJP) ಬಿಟ್ಟು ಕಾಂಗ್ರೆಸ್ (Congress)​ ಸೇರಿರುವ ಮಾಜಿ ಸಚಿವ ಜಗದೀಶ್​ ಶೆಟ್ಟರ್ (Jagadish Shettar)​​ ಅವರಿಗೆ ಕೈ ನಾಯಕರು ಲಿಂಗಾಯತ ಟಾಸ್ಕ್​ ನೀಡಿದ್ದಾರೆ. ಹೌದು ಜಗದೀಶ್​ ಶೆಟ್ಟರ್​ ಅವರು ಅತಿದೊಡ್ಡ ಲಿಂಗಾಯತ​ ಸಮುದಾಯದ ಪ್ರಬಲ ನಾಯಕರಲ್ಲೊಬ್ಬರು. ಇದು ಬಿಜೆಪಿಗೆ ವರವಾಗಿತ್ತು. ಆದರೆ ಈಗ ಶೆಟ್ಟರ್​ ಕಾಂಗ್ರೆಸ್​ ಸೇರ್ಪಡೆಯಿಂದ ಅಲ್ಪ ಪ್ರಮಾಣದಲ್ಲಿ ಲಿಂಗಾಯತ ಮತಗಳು ಬಿಜೆಪಿಯಿಂದ ಕಾಂಗ್ರೆಸ್​ ಕಡೆ ವಾಲಿವೆ. ಇದು ಬಿಜೆಪಿಗೆ ನಷ್ಟ ಉಂಟು ಮಾಡಲಿದೆ. ಇನ್ನು ಶೆಟ್ಟರ್​ ಅವರನ್ನು ಮುಂದಿಟ್ಟುಕ್ಕೊಂಡು ಕಾಂಗ್ರೆಸ್​ ಬಿಜೆಪಿ ಲಿಂಗಾಯತ ವಿರೋಧಿ ಎಂದು ಬಣ್ಣಿಸಲು ಹೊರಟಿದೆ. ಈ ಹಿನ್ನೆಲೆಯಲ್ಲಿಯೇ ಕಾಂಗ್ರೆಸ್​ ಸ್ಟಾರ್​ ಪ್ರಚಾರಕರ ಪಟ್ಟಿಯಲ್ಲಿ ಜಗದೀಶ್​ ಶೆಟ್ಟರ್ ಅವರಿಗೆ ಸ್ಥಾನ ಸಿಕ್ಕಿದೆ ಎನ್ನಲಾಗುತ್ತಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್​ ಚುನಾವಣಾ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೆವಾಲಾ ಇಂದು (ಏ.21) ಹುಬ್ಬಳ್ಳಿಯ ಜಗದೀಶ್​ ಶೆಟ್ಟರ್​ ಅವರ ಮೆನೆಗೆ ಭೇಟಿ ನೀಡಿದರು. ಈ ವೇಳೆ ಅನೇಕ ಸಲಹೆಗಳನ್ನು ನೀಡಿದರು ಎಂದು ಮಾಹಿತಿ ದೊರೆತಿದೆ.

ಲಿಂಗಾಯತ ಮತಗಳನ್ನು ಸೆಳೆಯಲು ತಂತ್ರ ರೂಪಿಸಿ. ಲಿಂಗಾಯತ ನಾಯಕರಿಗೆ ಬಿಜೆಪಿ ಮೋಸ ಮಾಡಿದೆ ಅನ್ನೋದನ್ನ ಬಿಂಬಿಸಿ. ಕೇವಲ ನಿಮ್ಮ ಕ್ಷೇತ್ರವಲ್ಲ ಸುತ್ತ ಮುತ್ತಲಿನ ಕ್ಷೇತ್ರದಲ್ಲೂ ನೀವು ತಂತ್ರ ಹೆಣೆಯಬೇಕು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್​ ಗೆಲ್ಲಲೇಬೇಕು. ಕಳೆದ ಮೂವತ್ತು ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿರೋ ಸೆಂಟ್ರಲ್ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್​ ಬಾವುಟ ಹಾರಿಸಬೇಕೆಂದು ಜಗದೀಶ್​ ಶೆಟ್ಟರ್ ಅವರಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಸೋಮಣ್ಣ ಪರ ಮತಯಾಚನೆಗೆ ಹೋಗಿದ್ದ ಪ್ರತಾಪ್​ಸಿಂಹಗೆ ಸ್ಥಳೀಯರಿಂದ ತರಾಟೆ

ಹುಬ್ಬಳ್ಳಿ ಕಾಂಗ್ರೆಸ್​ನಲ್ಲಿ ಟಿಕೆಟ್ ಆಕಾಂಕ್ಷಿಗಳಾದ ಲಕ್ಷ್ಮೀ ಹೆಬ್ಬಾಳಕರ್ ಅಳಿಯ ರಜತ್ ಮತ್ತು ಅನಿಲ್ ಕುಮಾರ್ ನಡುವೆ ಬಣ ಬಡಿದಾಟ ಇತ್ತು. ಈ ವೈಮನಸ್ಸನ್ನು ಜಗದೀಶ್​ ಶೆಟ್ಟರ್​​ ಮನೆಯಲ್ಲಿಯೇ ರಣದೀಪ್​ ಸಿಂಗ್​ ಸುರ್ಜೇವಾಲಾ ಶಮನ ಮಾಡಿದ್ದಾರೆ. ಜೊತೆಗೆ ಇಬ್ಬರಿಗೂ ಜಗದೀಶ್​ ಶೆಟ್ಟರ್ ಪರ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ