AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗದೀಶ್​ ಶೆಟ್ಟರ್​ ಮನೆಗೆ ಸುರ್ಜೇವಾಲಾ ಭೇಟಿ: ಲಿಂಗಾಯತರ ಮತ ಸೆಳೆಯಲು ಸೂಚನೆ

ರಾಜ್ಯ ಕಾಂಗ್ರೆಸ್​ ಚುನಾವಣಾ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೆವಾಲಾ ಇಂದು (ಏ.21) ಹುಬ್ಬಳ್ಳಿಯ ಜಗದೀಶ್​ ಶೆಟ್ಟರ್​ ಅವರ ಮೆನೆಗೆ ಭೇಟಿ ನೀಡಿದರು. ಈ ವೇಳೆ ಜಗದೀಶ್​​ ಶೆಟ್ಟರ್​​ ಅವರಿಗೆ ಅನೇಕ ಸಲಹೆಗಳನ್ನು ನೀಡಿದ್ದಾರೆ.

ಜಗದೀಶ್​ ಶೆಟ್ಟರ್​ ಮನೆಗೆ ಸುರ್ಜೇವಾಲಾ ಭೇಟಿ: ಲಿಂಗಾಯತರ ಮತ ಸೆಳೆಯಲು ಸೂಚನೆ
ಜಗದೀಶ್​ ಶೆಟ್ಟರ್​, ರಣದೀಪ್​ ಸಿಂಗ್​ ಸುರ್ಜೆವಾಲಾ
ವಿವೇಕ ಬಿರಾದಾರ
|

Updated on: Apr 21, 2023 | 1:16 PM

Share

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರದ (Hubli-Dharwad Central Constituency) ಟಿಕೆಟ್​ ಸಿಗದ ಹಿನ್ನೆಲೆ ಅಸಮಾಧಾನಗೊಂಡು ಸ್ವಾಭಿಮಾನದ ಪ್ರಶ್ನೆಯೆಂದು ಬಿಜೆಪಿ (BJP) ಬಿಟ್ಟು ಕಾಂಗ್ರೆಸ್ (Congress)​ ಸೇರಿರುವ ಮಾಜಿ ಸಚಿವ ಜಗದೀಶ್​ ಶೆಟ್ಟರ್ (Jagadish Shettar)​​ ಅವರಿಗೆ ಕೈ ನಾಯಕರು ಲಿಂಗಾಯತ ಟಾಸ್ಕ್​ ನೀಡಿದ್ದಾರೆ. ಹೌದು ಜಗದೀಶ್​ ಶೆಟ್ಟರ್​ ಅವರು ಅತಿದೊಡ್ಡ ಲಿಂಗಾಯತ​ ಸಮುದಾಯದ ಪ್ರಬಲ ನಾಯಕರಲ್ಲೊಬ್ಬರು. ಇದು ಬಿಜೆಪಿಗೆ ವರವಾಗಿತ್ತು. ಆದರೆ ಈಗ ಶೆಟ್ಟರ್​ ಕಾಂಗ್ರೆಸ್​ ಸೇರ್ಪಡೆಯಿಂದ ಅಲ್ಪ ಪ್ರಮಾಣದಲ್ಲಿ ಲಿಂಗಾಯತ ಮತಗಳು ಬಿಜೆಪಿಯಿಂದ ಕಾಂಗ್ರೆಸ್​ ಕಡೆ ವಾಲಿವೆ. ಇದು ಬಿಜೆಪಿಗೆ ನಷ್ಟ ಉಂಟು ಮಾಡಲಿದೆ. ಇನ್ನು ಶೆಟ್ಟರ್​ ಅವರನ್ನು ಮುಂದಿಟ್ಟುಕ್ಕೊಂಡು ಕಾಂಗ್ರೆಸ್​ ಬಿಜೆಪಿ ಲಿಂಗಾಯತ ವಿರೋಧಿ ಎಂದು ಬಣ್ಣಿಸಲು ಹೊರಟಿದೆ. ಈ ಹಿನ್ನೆಲೆಯಲ್ಲಿಯೇ ಕಾಂಗ್ರೆಸ್​ ಸ್ಟಾರ್​ ಪ್ರಚಾರಕರ ಪಟ್ಟಿಯಲ್ಲಿ ಜಗದೀಶ್​ ಶೆಟ್ಟರ್ ಅವರಿಗೆ ಸ್ಥಾನ ಸಿಕ್ಕಿದೆ ಎನ್ನಲಾಗುತ್ತಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್​ ಚುನಾವಣಾ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೆವಾಲಾ ಇಂದು (ಏ.21) ಹುಬ್ಬಳ್ಳಿಯ ಜಗದೀಶ್​ ಶೆಟ್ಟರ್​ ಅವರ ಮೆನೆಗೆ ಭೇಟಿ ನೀಡಿದರು. ಈ ವೇಳೆ ಅನೇಕ ಸಲಹೆಗಳನ್ನು ನೀಡಿದರು ಎಂದು ಮಾಹಿತಿ ದೊರೆತಿದೆ.

ಲಿಂಗಾಯತ ಮತಗಳನ್ನು ಸೆಳೆಯಲು ತಂತ್ರ ರೂಪಿಸಿ. ಲಿಂಗಾಯತ ನಾಯಕರಿಗೆ ಬಿಜೆಪಿ ಮೋಸ ಮಾಡಿದೆ ಅನ್ನೋದನ್ನ ಬಿಂಬಿಸಿ. ಕೇವಲ ನಿಮ್ಮ ಕ್ಷೇತ್ರವಲ್ಲ ಸುತ್ತ ಮುತ್ತಲಿನ ಕ್ಷೇತ್ರದಲ್ಲೂ ನೀವು ತಂತ್ರ ಹೆಣೆಯಬೇಕು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್​ ಗೆಲ್ಲಲೇಬೇಕು. ಕಳೆದ ಮೂವತ್ತು ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿರೋ ಸೆಂಟ್ರಲ್ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್​ ಬಾವುಟ ಹಾರಿಸಬೇಕೆಂದು ಜಗದೀಶ್​ ಶೆಟ್ಟರ್ ಅವರಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಸೋಮಣ್ಣ ಪರ ಮತಯಾಚನೆಗೆ ಹೋಗಿದ್ದ ಪ್ರತಾಪ್​ಸಿಂಹಗೆ ಸ್ಥಳೀಯರಿಂದ ತರಾಟೆ

ಹುಬ್ಬಳ್ಳಿ ಕಾಂಗ್ರೆಸ್​ನಲ್ಲಿ ಟಿಕೆಟ್ ಆಕಾಂಕ್ಷಿಗಳಾದ ಲಕ್ಷ್ಮೀ ಹೆಬ್ಬಾಳಕರ್ ಅಳಿಯ ರಜತ್ ಮತ್ತು ಅನಿಲ್ ಕುಮಾರ್ ನಡುವೆ ಬಣ ಬಡಿದಾಟ ಇತ್ತು. ಈ ವೈಮನಸ್ಸನ್ನು ಜಗದೀಶ್​ ಶೆಟ್ಟರ್​​ ಮನೆಯಲ್ಲಿಯೇ ರಣದೀಪ್​ ಸಿಂಗ್​ ಸುರ್ಜೇವಾಲಾ ಶಮನ ಮಾಡಿದ್ದಾರೆ. ಜೊತೆಗೆ ಇಬ್ಬರಿಗೂ ಜಗದೀಶ್​ ಶೆಟ್ಟರ್ ಪರ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!