AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ದೇವರ ಭವಿಷ್ಯವಾಣಿಯನ್ನು ಧಿಕ್ಕರಿಸಿದ ಸಿದ್ದರಾಮಾಯ್ಯ, 2 ಕ್ಷೇತ್ರದಲ್ಲಿ ನಿಲ್ಲುವಂತೆ ದೇವಿ ಭವಿಷ್ಯಕ್ಕೆ ಸಿದ್ದು ಹೇಳಿದ್ದಿಷ್ಟು

ಮುಂದಿನ ಚುನಾವಣೆಯಲ್ಲಿ ತಮ್ಮ ಕ್ಷೇತ್ರದ ಬಗ್ಗೆ ಮಂಡ್ಯದ ಚಿಕ್ಕಮ್ಮ ದೇವಿ ನುಡಿದ ಭವಿಷ್ಯವಾಣಿಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಧಿಕ್ಕರಿಸಿದ್ದಾರೆ.

ಮನೆ ದೇವರ ಭವಿಷ್ಯವಾಣಿಯನ್ನು ಧಿಕ್ಕರಿಸಿದ ಸಿದ್ದರಾಮಾಯ್ಯ, 2 ಕ್ಷೇತ್ರದಲ್ಲಿ ನಿಲ್ಲುವಂತೆ ದೇವಿ ಭವಿಷ್ಯಕ್ಕೆ ಸಿದ್ದು ಹೇಳಿದ್ದಿಷ್ಟು
ವಿಪಕ್ಷನಾಯಕ ಸಿದ್ದರಾಮಯ್ಯ
TV9 Web
| Edited By: |

Updated on:Jan 13, 2023 | 8:04 PM

Share

ಹಾಸನ: ಮಂಡ್ಯದ (Mandya)ಚೊಟ್ಟನಹಳ್ಳಿಯಲ್ಲಿರುವ ಚಿಕ್ಕಮ್ಮ ದೇವಿ ದೇವಸ್ಥಾನಕ್ಕೆ ಸಿದ್ದರಾಮಯ್ಯ(Siddaramaiah)  ಪುತ್ರ ಯತೀಂದ್ರ ಭೇಟಿ ನೀಡಿದ್ದ ವೇಳೆ, ಅಲ್ಲಿನ ಪೂಜಾರಿ ನಿಂಗಣ್ಣ ಎಂಬುವವರ ಮೈಮೇಲೆ ದೇವಿ ಬಂದಿದ್ದು, ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ನಿಂತರೆ ಒಳಿತು ಎನ್ನುವ ಭವಿಷ್ಯ ನುಡಿದಿದ್ದಾರೆ. ಈ ಮಂಡ್ಯದ ಮಳವಳ್ಳಿಯ ಚಿಕ್ಕಮ್ಮ ದೇವಿ ನುಡಿದ ಭವಿಷ್ಯ ಕಾಂಗ್ರೆಸ್​ ಮನೆಯಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಆದ್ರೆ, ಸಿದ್ದರಾಮಯ್ಯ ಅವರು ಮಂಡ್ಯದ ಚಿಕ್ಕಮ್ಮ ದೇವಿ ನುಡಿದ ಭವಿಷ್ಯವಾಣಿಯನ್ನು ಧಿಕ್ಕರಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಒಂದು ಕ್ಷೇತ್ರದಿಂದ ಸ್ಪರ್ಧಿಸಿದರೆ ಸೋಲು ಕಟ್ಟಿಟ್ಟ ಬುತ್ತಿ: ಆದಿನಾಡು ಚಿಕ್ಕಮ್ಮ ದೇವಿ ಸಂದೇಶ

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮುದಗನೂರು ಗ್ರಾಮದಲ್ಲಿ ಇಂದು(ಜನವರಿ 13) ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲಿ ಎಂದು ದೈವವಾಣಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಇದು ದೈವವಾಣಿ ಹಾಗೂ ಯತೀಂದ್ರ ಅಭಿಪ್ರಾಯ. ನನ್ನ ಅಭಿಪ್ರಾಯವಲ್ಲ. ನಾನು ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆಂದು ಸ್ಪಷ್ಟಪಡಿಸಿದರು.

ಇನ್ನು ಚಿಕ್ಕಮ್ಮ ದೇವರ ಭವಿಷ್ಯದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಪುತ್ರ ಯತೀಂದ್ರ, ನಾವು ಇದನ್ನೆಲ್ಲಾ ಹೆಚ್ಚು ತಲೆಕೆಡಿಸಿಕೊಳ್ಳೋಕೆ ಹೋಗಲ್ಲ. ದೇವರ ಭವಿಷ್ಯಕ್ಕೂ ರಾಜಕೀಯ ತೀರ್ಮಾನಕ್ಕೂ ತಾಳೆ ಹಾಕುವುದು ಬೇಡ ಎಂದು ಹೇಳಿದ್ದಾರೆ.

2023 ರ ವಿಧಾನಸಭೆ ಯುದ್ಧದಲ್ಲಿ ಸಿದ್ದು ಯಾವ ಕ್ಷೇತ್ರದಲ್ಲಿ ನಿಲ್ಲುತ್ತಾರೆ ಎನ್ನುವುದು ಇನ್ನೂ ಅಸ್ಪಷ್ಟ. ಯಾಕಂದ್ರೆ ಬಾದಾಮಿ ಬಿಟ್ಟು, ಪುತ್ರನಿಗೆ ವರುಣಾ ಕೊಟ್ಟು, ಸಿದ್ದರಾಮಯ್ಯ ಕೋಲಾರದತ್ತ ಕೈ ಬೀಸಿದ್ದಾರೆ. ಕೋಲಾರದಿಂದಲೇ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. ಆದ್ರೆ ಕೊನೆಗೆ ಹೈಕಮಾಂಡ್​ ತೀರ್ಮಾನವೇ ಅಂತಿಮ ಎಂದು ಅಡ್ಡಗೋಡೆ ಮೇಲೆ ದೀಪವನ್ನೂ ಇಟ್ಟಿದ್ದಾರೆ. ಹೀಗಿರುವಾಗ ಸಿದ್ದು ಕ್ಷೇತ್ರದ ಬಗ್ಗೆ, ಮಂಡ್ಯದ ಚಿಕ್ಕಮ್ಮ ದೇವಿ ನುಡಿದ ಭವಿಷ್ಯವಾಣಿ, ಬೆಂಬಲಿಗರಿಗೆ ‘ಡಬಲ್’​ ಟೆನ್ಷನ್​ ತಂದಿಟ್ಟಿದೆ.  ಹೀಗಿರುವಾಗ ಸಿದ್ದು ಕ್ಷೇತ್ರದ ಬಗ್ಗೆ, ಮಂಡ್ಯದ ಚಿಕ್ಕಮ್ಮ ದೇವಿ ನುಡಿದ ಭವಿಷ್ಯವಾಣಿ, ಬೆಂಬಲಿಗರಿಗೆ ‘ಡಬಲ್’​ ಟೆನ್ಷನ್​ ತಂದಿಟ್ಟಿದೆ.

ಒಟ್ಟಾರೆ ಕೋಲಾರದಲ್ಲಿ ರಣಕಹಳೆ ಮೊಳಗಿಸೋಕೆ ಸನ್ನದ್ಧವಾಗಿದ್ದ ಸಿದ್ದುಗೆ ದೇವಿಯೇ ಎಚ್ಚರಿಕೆ ಹೆಜ್ಜೆ ಇಡುವಂತೆ ಸಂದೇಶ ಕೊಟ್ಟಿದೆ.. ಇದು ಒಂದು ಕಡೆ ಇರಲಿ ಇತ್ತ ಸಿದ್ದು ಬೆಂಬಲಿಗರು ಕೂಡ ಸಿದ್ದು ವರುಣಾಗೆ ಬರಲಿ ಎಂದು ಹೋದಲ್ಲಿ ಬಂದಲ್ಲಿ ಹೇಳುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಅದ್ಯಾವ ನಿರ್ಧಾರ ತೆಗೆದುಕೊಳ್ತಾರೆ ಅನ್ನೋದೇ ಮಿಲಿಯನ್ ಡಾಲರ್​ ಪ್ರಶ್ನೆ.

Published On - 7:42 pm, Fri, 13 January 23

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ