AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolar: ಕೋಲಾರದಿಂದಲೇ ಸಿದ್ದರಾಮಯ್ಯ ಸ್ಪರ್ಧೆ -ಚುನಾವಣಾ ಸಭೆಗಳ ನಡೆಸಲು ಕಚೇರಿ ಸಿಕ್ತು, ಮನೆ ಹುಡುಕಾಟ ಬಹುತೇಕ ಅಂತಿಮ

Siddaramaiah: ಸಿದ್ದರಾಮಯ್ಯ ಅವರನ್ನ ಜಿಲ್ಲೆಯ ವಿರೋಧಿಗಳು ಟೀಕಿಸಿದ ಬೆನ್ನಲೇ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾಂಗ್ರೆಸ್ (Congress)​ ಪಕ್ಷದ ಸ್ಥಳೀಯ ಮುಖಂಡರು ನಗರದ ಬೈಪಾಸ್ ರಸ್ತೆಯಲ್ಲಿಯೇ ಮನೆ, ಕಚೇರಿಗಾಗಿ ಶೋಧ ನಡೆಸಿದ್ದಾರೆ.

Kolar: ಕೋಲಾರದಿಂದಲೇ ಸಿದ್ದರಾಮಯ್ಯ ಸ್ಪರ್ಧೆ -ಚುನಾವಣಾ ಸಭೆಗಳ ನಡೆಸಲು ಕಚೇರಿ ಸಿಕ್ತು, ಮನೆ ಹುಡುಕಾಟ ಬಹುತೇಕ ಅಂತಿಮ
ಕೋಲಾರದಿಂದಲೇ ಸಿದ್ದರಾಮಯ್ಯ ಸ್ಪರ್ಧೆ: ಚುನಾವಣಾ ಸಭೆಗಳ ನಡೆಸಲು ಕಚೇರಿ ಸಿಕ್ತು, ಮನೆ ಹುಡುಕಾಟ ಬಹುತೇಕ ಅಂತಿಮ
TV9 Web
| Edited By: ಸಾಧು ಶ್ರೀನಾಥ್​|

Updated on: Jan 23, 2023 | 2:44 PM

Share

ಈ ನಡುವೆ ಕೋಲಾರ ಕ್ಷೇತ್ರದಿಂದ (Kolar ) ಗೆದ್ದು ಶಾಸಕರಾದರೆ ಜನರ ಕೈಗೆ ಸಿದ್ದರಾಮಯ್ಯ ( Siddaramaiah) ಸಿಗುವುದಿಲ್ಲ ಎಂದು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಅಪಪ್ರಚಾರ ಮಾಡುತ್ತಿದ್ದರು. ಸಿದ್ದರಾಮಯ್ಯ ರಾಜ್ಯ ನಾಯಕರು ಅವರನ್ನ ಭೇಟಿಯಾಗಬೇಕಾದ್ರೆ ನಾಯಕರು, ಮುಖಂಡರು ಮಾತ್ರ ಆಗಿರಬೇಕು ಎಂದು ಪದೇ ಪದೇ ಹೇಳಲಾಗುತ್ತಿತ್ತು. ಈ ರೀತಿ ಸಿದ್ದರಾಮಯ್ಯ ಅವರನ್ನ ಜಿಲ್ಲೆಯ ವಿರೋಧಿಗಳು ಟೀಕಿಸಿದ ಬೆನ್ನಲೇ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾಂಗ್ರೆಸ್ (Congress)​ ಪಕ್ಷದ ಸ್ಥಳೀಯ ಮುಖಂಡರು ನಗರದ ಬೈಪಾಸ್ ರಸ್ತೆಯಲ್ಲಿಯೇ ಮನೆ (House), ಕಚೇರಿಗಾಗಿ (Office) ಶೋಧ ನಡೆಸಿದ್ದಾರೆ.

ಸಿದ್ದುಗಾಗಿ ಮನೆ ಹುಡುಕಾಟ..!

ಸಿದ್ದರಾಮಯ್ಯ 2023ರ ಚುನಾವಣೆಯಲ್ಲಿ ತಾನು ಕೋಲಾರದಿಂದಲೇ ಅಭ್ಯರ್ಥಿಯಾಗುತ್ತೇನೆಂದು ಘೋಷಣೆ ಮಾಡಿದ ನಂತರ ನಾನು ಚಡ್ಡಿ ಹಾಕಿರುವ ಸಾಮಾನ್ಯ ಜನರ ಕೈಗೆ ಸಿಗುತ್ತೇನೆ ಎಂದಿದ್ದರು. ಅದಕ್ಕೆ ಪೂರಕ ಎಂಬಂತೆ ಸದ್ಯ ಕೋಲಾರದಲ್ಲಿ ಸಿದ್ದರಾಮಯ್ಯ ಅವರಿಗಾಗಿ ಮನೆ ಹಾಗೂ ಕಚೇರಿ ಹುಡುಕಾಟ ನಡೆಯುತ್ತಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದಲೇ ತಾನು ಕಣಕ್ಕೆ ಇಳಿಯುವುದಾಗಿ ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲೇ ಅವರು ಕೋಲಾರದಲ್ಲಿ ಬಂದರೆ ಉಳಿದುಕೊಳ್ಳಲು ಜನರನ್ನು ಭೇಟಿ ಮಾಡಲು ಕೋಲಾರ ಕಾಂಗ್ರೆಸ್ ನಾಯಕರು ಬಾಡಿಗೆ ಮನೆ, ಕಚೇರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದೆ ಜನವರಿ ತಿಂಗಳ 9 ರಂದು ಕೋಲಾರಕ್ಕೆ ಆಗಮಿಸಿ ಹೈ ಕಮಾಂಡ್ ಒಪ್ಪಿದರೆ ಕೋಲಾರದಿಂದಲೇ ಸ್ಪರ್ಧೆ ಮಾಡುವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಈ ನಡುವೆ ಕೋಲಾರ ಕ್ಷೇತ್ರದಿಂದ ಗೆದ್ದು ಶಾಸಕರಾದರೆ ಜನರ ಕೈಗೆ ಸಿದ್ದರಾಮಯ್ಯ ಸಿಗುವುದಿಲ್ಲ ಎಂದು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಅಪಪ್ರಚಾರ ಮಾಡುತ್ತಿದ್ದರು. ಸಿದ್ದರಾಮಯ್ಯ ರಾಜ್ಯ ನಾಯಕರು ಅವರನ್ನ ಭೇಟಿಯಾಗಬೇಕಾದ್ರೆ ನಾಯಕರು, ಮುಖಂಡರು ಮಾತ್ರ ಆಗಿರಬೇಕು ಎಂದು ಪದೇ ಪದೇ ಹೇಳಲಾಗುತ್ತಿತ್ತು.

ಈ ರೀತಿ ಸಿದ್ದರಾಮಯ್ಯ ಅವರನ್ನ ಜಿಲ್ಲೆಯ ವಿರೋಧಿಗಳು ಟೀಕಿಸಿದ ಬೆನ್ನಲೇ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಪಕ್ಷದ ಸ್ಥಳೀಯ ಮುಖಂಡರು ನಗರದ ಬೈಪಾಸ್ ರಸ್ತೆಯಲ್ಲಿಯೇ ಮನೆ, ಕಚೇರಿಗಾಗಿ ಶೋಧ ನಡೆಸಿದ್ದಾರೆ. ಇನ್ನು ವಾರಕ್ಕೊಮ್ಮೆ ಕೋಲಾರಕ್ಕೆ ಬರುವೆ, ಚಡ್ಡಿ ಹಾಕಿರುವ ಜನ ಸಾಮಾನ್ಯರು ನನ್ನನ್ನು ನೇರವಾಗಿ ಸಂಪರ್ಕ ಮಾಡಬಹುದು ಎಂದು ಸಿದ್ದರಾಮಯ್ಯ ಕೂಡಾ ಹೇಳಿದ್ದರು. ಅದೇ ಕಾರಣಕ್ಕಾಗಿಯೇ ಮನೆ ಹುಡುಕಾಟ ಮಾಡಲಾಗುತ್ತಿದೆ ಎನ್ನುತ್ತಾರೆ ವಿಧಾನಪರಿಷತ್​ ಸದಸ್ಯ ಅನಿಲ್​ ಕುಮಾರ್​.

ಕೋಲಾರ ಸದ್ಯ ರಾಜ್ಯ ರಾಜಕಾರಣದ ಹೈ ವೋಲ್ಟೇಜ್ ಕ್ಷೇತ್ರವಾಗಿ ಪರಿಣಮಿಸಿದ್ದು, ಒಂದು ವೇಳೆ ಕೋಲಾರಕ್ಕೆ ಸಿದ್ದರಾಮಯ್ಯ ಬರುವುದಾದ್ರೆ ಇರೋದಕ್ಕೆ ಒಂದು ಸೂರು ಬೇಕು, ಅದಕ್ಕಾಗಿ ಒಂದು ಮನೆ ಹಾಗೂ ಕಚೇರಿ ಹುಡುಕಾಟದಲ್ಲಿ ಕಾಂಗ್ರೆಸ್ ನಾಯಕರು ಬಿಸಿಯಾಗಿದ್ದಾರೆ. ಇನ್ನು ಸಿದ್ದುಗಾಗಿ ಕೋಲಾರದ ಪ್ರತಿಷ್ಠಿತ ಬಡಾವಣೆಗಳಲ್ಲಿ ಮನೆಯನ್ನು ಹುಡುಕಾಟ ಮಾಡಲಾಗುತ್ತಿದೆ.

ಸಿದ್ದರಾಮಯ್ಯ ಅವರ ವರ್ಚಸ್ಸಿಗೆ, ಅವರಿಗೆ ತಕ್ಕ ಮನೆ ಬೇಕು, ಎಲ್ಲಾ ರೀತಿಯಲ್ಲೂ ಅನುಕೂಲವಿರುವ, ಹೆಚ್ಚಿನ ಜನರು ಬಂದರೂ ಉಳಿದುಕೊಳ್ಳಲು, ಸಣ್ಣಪುಟ್ಟ ಸಭೆಗಳನ್ನು ಮಾಡಲು, ಹೆದ್ದಾರಿಗೆ ಹತ್ತಿರ ಇರುವಂತಹ ಮನೆಯ ಹುಡುಕಾಟ ಮಾಡಲಾಗಿದೆ. ಈಗಾಗಲೇ ಸುಮಾರು ಐದಾರು ಮನೆಗಳನ್ನು ನೋಡಲಾಗಿದೆ.

ಜೊತೆಗೆ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್​ ಸಭೆಗಳನ್ನು ಮಾಡಲು ನಗರದ ಚೊಕ್ಕ ಕನ್ವೆನ್ಷನ್​ ಹಾಲ್​ ಅನ್ನು ಚುನಾವಣೆ ಮುಗಿಯುವವರೆಗೆ ಬುಕ್​ ಮಾಡಲಾಗಿದೆ ಅನ್ನೋದು ಕೋಲಾರ ಕಾಂಗ್ರೆಸ್​ ಮುಖಂಡರ ಮಾತು. ಇಂದು ಸೋಮವಾರ ಕೋಲಾರದಲ್ಲಿ ನಡೆಯಲಿರುವ ಪ್ರಜಾಧ್ವನಿ ಯಾತ್ರೆ ಸಂದರ್ಭದಲ್ಲಿ ಕಚೇರಿ, ಮನೆಯನ್ನು ಸಿದ್ದುರಾಮಯ್ಯ ಅವರೇ ಖುದ್ದು ನೋಡಿ ಅಂತಿಮ ಮಾಡುವ ಸಾಧ್ಯತೆ ಇದೆ ಎನ್ನುತ್ತಾರೆ ಕಾಂಗ್ರೆಸ್ ಮುಖಂಡ ಗೋಪಾಲಗೌಡ.

ಒಟ್ಟಾರೆ ಸಿದ್ದರಾಮಯ್ಯ ಕ್ಷೇತ್ರ ಯಾವುದು ಅನ್ನೋ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ಬಾಡಿಗೆ ಮನೆ ಹಾಗೂ ಕಚೇರಿ ಮಾಡುವ ಮೂಲಕ ಇರುವ ಇನ್ನು ಹಲವು ಅನುಮಾನಗಳಿಗೆ ಹಾಗೂ ಗೊಂದಲಗಳಿಗೂ ಸಿದ್ದರಾಮಯ್ಯ ತೆರೆ ಎಳೆಯಲಿದ್ದಾರೆ.

ವರದಿ: ರಾಜೇಂದ್ರ ಸಿಂಹ, ಟಿವಿ9, ಕೋಲಾರ 

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ