AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಧಾಕರ್​ನನ್ನು ಸೋಲಿಸಿದ್ದಕ್ಕೆ ಕಾಂಗ್ರೆಸ್​ ನಾಯಕರು ಹೇಗೆಲ್ಲ ಸಂಭ್ರಮಿಸಿದರು ಗೊತ್ತಾ?ನೂತನ ಶಾಸಕ ಪ್ರದೀಪ್ ಈಶ್ವರ್ ಮಾತು ಕೇಳಿ

ಸಾಮಾನ್ಯ ಯುವಕ ಪ್ರದೀಪ್ ಈಶ್ವರ್​, ಪ್ರಭಾವಿ ಸಚಿವ ಡಾ ಕೆ ಸುಧಾಕರ್‌ ಅವರನ್ನು ಸೋಲಿಸಿ ಇಡೀ ರಾಜ್ಯವನ್ನೇ ತಮ್ಮತ್ತ ನೋಡುವಂತೆ ಮಾಡಿದ್ದಾರೆ. ಸುಧಾಕರ್ ಅವರನ್ನು ಸೋಲಿಸಿದ್ದಕ್ಕೆ ಕಾಂಗ್ರೆಸ್ ನಾಯಕರು ಹೇಗೆಲ್ಲ ಸಂಭ್ರಮಸಿದರು ಎನ್ನುವುದನ್ನು ಅವರೇ ಹೇಳಿಕೊಂಡಿದ್ದಾರೆ.

ಸುಧಾಕರ್​ನನ್ನು ಸೋಲಿಸಿದ್ದಕ್ಕೆ ಕಾಂಗ್ರೆಸ್​ ನಾಯಕರು ಹೇಗೆಲ್ಲ ಸಂಭ್ರಮಿಸಿದರು ಗೊತ್ತಾ?ನೂತನ ಶಾಸಕ ಪ್ರದೀಪ್ ಈಶ್ವರ್ ಮಾತು ಕೇಳಿ
ರಮೇಶ್ ಬಿ. ಜವಳಗೇರಾ
|

Updated on: May 18, 2023 | 10:22 AM

Share

ಚಿಕ್ಕಳ್ಳಾಪುರ:  ಪ್ರಭಾವಿ ಸಚಿವ ಡಾ ಕೆ ಸುಧಾಕರ್‌ ಅವರನ್ನು ಸೋಲಿಸಿರುವ ಪ್ರದೀಪ್‌ ಈಶ್ವರ್‌ (Pradeep Eshwar),  ಶಾಸಕರಾಗಿ ಆಯ್ಕೆಯಾಗಿ ರಾಜ್ಯವೇ ಹುಬ್ಬೇರಿಸುವಂತೆ ಮಾಡಿದ್ದಾರೆ. ಕಾಂಗ್ರೆಸ್​ನ ನೂತನ ಶಾಸಕ ಪ್ರದೀಶ್ ಈಶ್ವರಪ್ಪ ಮಾತಿನ ಶೈಲಿಗೆ ಎಲ್ಲರು ಫಿದಾ ಆಗಿದ್ದಾರೆ. ಅಲ್ಲದೇ ಇದೀಗ ಶಾಸಕರಾಗಿ ಆಯ್ಕೆಯಾದ ಐದಯ ದಿನ ಆಯ್ತು ಅಷ್ಟೇ ಆಗಲಿ ಕ್ಷೇತ್ರದಲ್ಲಿ ಮನೆಮನೆ ರೌಂಡ್ಸ್​ ಹಾಕುತ್ತಿದ್ದಾರೆ. ಹೌದು.. ಇಂದು(ಮೇ 18) ಮೊದಲಿಗೆ ಮೈಲಪ್ಪನಹಳ್ಳಿ ಗ್ರಾಮದಿಂದ ಮನೆ ಮನೆಗೆ ಭೇಟಿ ಆರಂಭಿಸಿದ್ದು, ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸುತ್ತಿದ್​ದಾರೆ. ಇನ್ನು ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್, ಸುಧಾಕರ್ ಸೋಲಿಸಿದ್ದಕ್ಕೆ ಸಿದ್ದರಾಮಯ್ಯ ಹಾಲುಕುಡಿದಷ್ಟು ಖುಷಿಪಟ್ಟರು ಎಂದರು.

ಇದನ್ನೂ ಓದಿ: ಗೆದ್ದ ಐದೇ ದಿನದಲ್ಲಿ ಮನೆ-ಮನೆಗೆ ಹೊರಟ ಪ್ರದೀಪ್ ಈಶ್ವರ್, ಇಡೀ ರಾಜ್ಯವೇ ತಿರುಗಿ ನೋಡುವಂತೆ ಮಾಡುತ್ತಿರುವ ನೂತನ ಶಾಸಕ

ಚಿಕ್ಕಬಳ್ಳಾಪುರ ತಾಲ್ಲೂಕಿನ ಮೈಲಪ್ಪನಹಳ್ಳಿ ಗ್ರಾಮದಲ್ಲಿ ಪ್ರದೀಪ್ ಈಶ್ವರ್ ಮಾತನಾಡಿದ ಪ್ರದೀಪ್ ಈಶ್ವರ್, ಡಿ.ಕೆ.ಶಿವಕುಮಾರ್ ನನ್ನನ್ನು ಅಭಿನಂದಿಸಿ ಆಶೀರ್ವಾದ ಮಾಡಿದರು. ಕೆ.ಸಿ.ವೇಣುಗೋಪಾಲ್ ತಬ್ಬಿಕೊಂಡು ಸಂತೋಷ ಹಂಚಿಕೊಂಡರು. ಸುಧಾಕರ್ ವಿರುದ್ಧ ಗೆದ್ದಿದ್ದಕ್ಕೆ ನನ್ನನ್ನು ಸೆಲೆಬ್ರಿಟಿ ರೀತಿ ನೋಡುತ್ತಿದ್ದಾರೆ. ಜನರ ಪ್ರೀತಿ ಅಭಿಮಾನ ವಿಶ್ವಾಸಕ್ಕೆ ಚಿರಋಣಿ. ನಾನು ನಿರಂತರವಾಗಿ ಕ್ಷೇತ್ರದ ಜನರ ಜೊತೆ ಇರಲು ಬಯಸುತ್ತೇನೆ. ಚಿಕ್ಕಬಳ್ಳಾಪುರ ಕ್ಷೇತ್ರದ ಜನರ ಕಷ್ಟ, ಸುಖದಲ್ಲಿ ಭಾಗಿಯಾಗುತ್ತೇನೆ ಎಂದು ಹೇಳಿದರು.

ನನ್ನ ಕಾರು ಅಡ್ಡ ನಿಲ್ಲಿಸಿ ಜನ ಸೆಲ್ಫೀ ತೆಗೆದುಕೊಳ್ಳುತ್ತಿದ್ದಾರೆ. ಮಾಜಿ ಶಾಸಕರಂತೆ ನಾನು ಅಹಂಕಾರ ಪಡುವವನಲ್ಲ. ನಾನು ನಿರಂತರ ಜನರ ಜೊತೆ ಇರಲು ಬಯಸುತ್ತೇನೆ . ಜನರ ಕಷ್ಟ ಸುಖಗಳಿಗೆ ಬಾಗಿಯಾಗುತ್ತೇನೆ. ಮಾದರಿ ಶಾಸಕನಾಗಲು ಅಧ್ಯಯನ ನಡೆಸಿದ್ದೇನೆ ಎಂದು ಎಂದರು.

ಇಡೀ ರಾಜ್ಯ ಚಿಕ್ಕಬಳ್ಳಾಪುರ ಕ್ಷೇತ್ರದ ಕಡೆ ನೋಡುತ್ತಿದೆ. ಕಾರಣ ಪ್ರಭಾವಿ ಸಚಿವ ಡಾ ಕೆ ಸುಧಾಕರ್‌ ಅವರನ್ನು ಸೋಲಿಸಿರುವ ಪ್ರದೀಪ್‌ ಈಶ್ವರ್‌. ಏಳೆಂಟು ವರ್ಷಗಳ ಹಿಂದೆ ನಗರದಲ್ಲಿ ಸಾಮಾನ್ಯನಾಗಿ ಓಡಾಡಿಕೊಂಡಿದ್ದ ಹುಡುಗ ಪ್ರಭಾವಿ ಸಚಿವರನ್ನು ಮಣಿಸಿ ಶಾಸಕರಾಗಿ ಆಯ್ಕೆಯಾಗಿ ರಾಜ್ಯವೇ ಹುಬ್ಬೇರಿಸುವಂತೆ ಮಾಡಿದ್ದಾರೆ.

ತಮ್ಮ ತೆಲುಗು ಡೈಲಾಗ್‌ಗಳಿಂದಲೇ ಚುನಾವಣಾ ಪ್ರಚಾರದ ವೇಳೆ ಪ್ರದೀಪ್‌ ಈಶ್ವರ್‌ ಗಮನ ಸೆಳೆದಿದ್ದರು. ಸಚಿವ ಡಾ ಕೆ ಸುಧಾಕರ್‌ ಅವರಿಗೆ ಚುನಾವಣಾ ಕಣದಲ್ಲಿ ತಕ್ಕ ತಿರುಗೇಟು ನೀಡಿದ್ದರು. ಅದರ ಪರಿಣಾಮವೇ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಇಡೀ ರಾಜ್ಯವೇ ನೋಡುವಂತಹ ಫಲಿತಾಂಶ ಹೊರಬಿದ್ದಿದೆ. ಚಿಕ್ಕಬಳ್ಳಾಪುರದ ಜನ ಈ ಬಾರಿ ಬದಲಾವಣೆ ಬಯಸಿ ಪ್ರದೀಪ್‌ ಈಶ್ವರ್‌ ಅವರನ್ನು ಗೆಲ್ಲಿಸಿದ್ದಾರೆ.

Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಾಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಾಗಳ ಬಗ್ಗೆ ತಿಳಿಯಿರಿ
ಹುಡಾ ಅಧ್ಯಕ್ಷ ಸ್ಥಾನಕ್ಕೆ ಬೀದಿಗಿಳಿದ ಮುಸ್ಲಿಂ ಸಮುದಾಯ
ಹುಡಾ ಅಧ್ಯಕ್ಷ ಸ್ಥಾನಕ್ಕೆ ಬೀದಿಗಿಳಿದ ಮುಸ್ಲಿಂ ಸಮುದಾಯ
ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!