Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಸಿದ್ದರಾಮಯ್ಯ ಪರ ಮತ ಬೇಟೆಗಿಳಿದ ಕಾಂಗ್ರೆಸ್ ನಾಯಕರು, ಮೊದಲು ಒಕ್ಕಲಿಗ ಸಮುದಾಯಕ್ಕೆ ಗಾಳ

ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ ನಂತರ ಕ್ಷೇತ್ರದಲ್ಲಿ ರಾಜಕೀಯ ಲೆಕ್ಕಾಚಾರಗಳು ಜೋರಾಗಿ ನಡೆಯುತ್ತಿವೆ. ಇನ್ನು ಈಗಿನಿಂದಲೇ ಕಾಂಗ್ರೆಸ್ ಸಿದ್ದರಾಮಯ್ಯ ಪರ ಮತ ಸೆಳೆಯಲು ಕಸರತ್ತು ನಡೆಸಿದೆ.

ಕೋಲಾರದಲ್ಲಿ ಸಿದ್ದರಾಮಯ್ಯ ಪರ ಮತ ಬೇಟೆಗಿಳಿದ ಕಾಂಗ್ರೆಸ್ ನಾಯಕರು, ಮೊದಲು ಒಕ್ಕಲಿಗ ಸಮುದಾಯಕ್ಕೆ ಗಾಳ
ವೇಮಗಲ್​ನಲ್ಲಿ ಒಕ್ಕಲಿಗ ಮುಖಂಡರ ಸಭೆ ಮಾಡಿದ ಕಾಂಗ್ರೆಸ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 31, 2023 | 4:38 PM

ಕೋಲಾರ: ಸಿದ್ದರಾಮಯ್ಯ(Siddaramaiah) ಅವರು ಈ ಬಾರಿ ಕೋಲಾರದಿಂದ(Kolar) ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಕ್ಷೇತ್ರದಲ್ಲಿ ರಾಜಕೀಯ ರಂಗೇರಿದೆ. ದಿನಕ್ಕೊಂದು ರಾಜಕೀಯ ಬೆಳವಣಿಗೆಗಳಲು ನಡೆಯುತ್ತಲೇ ಇವೆ. ನಿನ್ನೆ (ಜನವರಿ 30) ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಅವರು ಕೋಲಾರಕ್ಕೆ ಭೇಟಿ ನೀಡಿ ಹಲವು ಮುಖಂಡರ ಜೊತೆ ಮಾತುಕತೆ ನಡೆಸಿ ಹೋಗಿದ್ದರು. ಇದೀಗ ಶಾಸಕರಾದ ಕೃಷ್ಣಬೈರೇಗೌಡ, ಶ್ರೀನಿವಾಸಗೌಡ, ನಂಜೇಗೌಡ ಸೇರಿದಂತೆ ಹಲವು ನಾಯಕರು ಸಿದ್ದರಾಮಯ್ಯನವರ ಪರವಾಗಿ ಒಕ್ಕಲಿಗ ಸಮುದಾಯದ ಮತ ಬೇಟೆಗೆ ಇಳಿದಿದ್ದಾರೆ.

ಇದನ್ನೂ ಓದಿ: ಯತೀಂದ್ರ ಸಿದ್ದರಾಮಯ್ಯ ಕೋಲಾರ ರೌಂಡ್ಸ್: ಕುರುಬ ಸಮುದಾಯದ ವೋಟ್​​ ಕ್ರೋಢೀಕರಣ

ಹೌದು..ಒಕ್ಕಲಿಗ ಶಾಸಕರುಗಳಾದ ಕೃಷ್ಣಬೈರೇಗೌಡ, ಶ್ರೀನಿವಾಸಗೌಡ, ಹಾಗೂ ನಂಜೇಗೌಡ ಹಾಗೂ ವಿಧಾನಪರಿಷತ್​ ಸದಸ್ಯ ಅನಿಲ್​ ಕುಮಾರ್​ ಅವರುಗಳು ನೇತೃತ್ವದಲ್ಲಿ ವೇಮಗಲ್​ ಹೋಬಳಿಯ ಒಕ್ಕಲಿಗ ಮುಖಂಡರ ಸಭೆ ನಡೆಸಿದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಮಾಡಿದ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ಅವರ ಪರವಾಗಿ ಒಕ್ಕಲಿಗರು ಕೂಡಾ ಒಂದಾಗಬೇಕು ಎಂದು ಸಭೆಯಲ್ಲಿ ಸಮುದಾಯದ ಮುಖಂಡರಿಗೆ ಮನವಿ ಮಾಡಿದರು. ಈ ಮೂಲಕ ಸಿದ್ದರಾಮಯ್ಯ ಪರವಾಗಿ ಒಕ್ಕಲಿಗರನ್ನು ಒಂದುಗೂಡಿಸಲು ಕೆಲಸಕ್ಕೆ ಕೈಹಾಕಿದ್ದಾರೆ.

ಈ ವೇಳೆ ಮಾತನಾಡಿದ ಶಾಸಕ ಕೃಷ್ಣಬೈರೇಗೌಡ ಮಾತನಾಡಿ ಎಲ್ಲರಿಗೂ ಕೂಡಾ ಜಾತಿ ಅಭಿಮಾನ ಇರಬೇಕು. ಅದರೆ, ಜಾತಿಯನ್ನಿಟ್ಟುಕೊಂಡು ರಾಜಕೀಯ ಮಾಡಬಾರದು ಎಂದು ಒಕ್ಕಲಿಗ ಮುಖಂಡರಿಗೆ ಮನವಿ ಮಾಡಿದ ಅವರು, ರಾಜ್ಯದ ಅಭಿವೃದ್ದಿ ದೃಷ್ಟಿಯಿಂದ ರೈತರ ಹಿತದೃಷ್ಟಿಯಿಂದ ಸಿದ್ದರಾಮಯ್ಯ ಅವರು ಅದರಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರಕ್ಕೆ ಬರಬೇಕು ಎಂದು ಮನವಿ ಮಾಡಿದರು.

ಕೋಲಾರದಲ್ಲಿ ಅಲ್ಪಸಂಖ್ಯಾತರ ಮತಗಳಷ್ಟೇ ಒಕ್ಕಲಿಗ ಮತಗಳು ಕೂಡಾ ಪ್ರಾಮುಖ್ಯತೆ ಪಡೆದಿದೆ. ಒಂದು ಲೆಕ್ಕದಲ್ಲಿ ಒಕ್ಕಲಿಗ ಮತಗಳು ನಿರ್ಣಾಯಕ ಅಂತನೇ ಹೇಳಬಹುದು. ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಸಮುದಾಯದ ಮತಗಳ ಬುಟ್ಟಿಗೆ ಕೈಹಾಕಿರುವ ಕಾಂಗ್ರೆಸ್, ​ ಮೊದಲು ಅಲ್ಪಸಂಖ್ಯಾತರು ನಂತರ, ಒಕ್ಕಲಿಗರು, ನಂತರದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮತಗಳನ್ನು ಸೆಳೆಯಲು ಪ್ಲಾನ್​ ಮಾಡಿದೆ. ಈ  ಹಿನ್ನೆಲೆಯಲ್ಲಿ ಹಂತ ಹಂತವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ.

ವರದಿ:  ರಾಜೇಂದ್ರ ಸಿಂಹ ಟಿವಿ9 ಕೋಲಾರ

Published On - 4:36 pm, Tue, 31 January 23

ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಅಶೋಕ
ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಅಶೋಕ
ಹಿಮಾನಿ ಶವವನ್ನು ಸೂಟ್‌ಕೇಸ್‌ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ
ಹಿಮಾನಿ ಶವವನ್ನು ಸೂಟ್‌ಕೇಸ್‌ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ
ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ