AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಸಿದ್ದರಾಮಯ್ಯ ಪರ ಮತ ಬೇಟೆಗಿಳಿದ ಕಾಂಗ್ರೆಸ್ ನಾಯಕರು, ಮೊದಲು ಒಕ್ಕಲಿಗ ಸಮುದಾಯಕ್ಕೆ ಗಾಳ

ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ ನಂತರ ಕ್ಷೇತ್ರದಲ್ಲಿ ರಾಜಕೀಯ ಲೆಕ್ಕಾಚಾರಗಳು ಜೋರಾಗಿ ನಡೆಯುತ್ತಿವೆ. ಇನ್ನು ಈಗಿನಿಂದಲೇ ಕಾಂಗ್ರೆಸ್ ಸಿದ್ದರಾಮಯ್ಯ ಪರ ಮತ ಸೆಳೆಯಲು ಕಸರತ್ತು ನಡೆಸಿದೆ.

ಕೋಲಾರದಲ್ಲಿ ಸಿದ್ದರಾಮಯ್ಯ ಪರ ಮತ ಬೇಟೆಗಿಳಿದ ಕಾಂಗ್ರೆಸ್ ನಾಯಕರು, ಮೊದಲು ಒಕ್ಕಲಿಗ ಸಮುದಾಯಕ್ಕೆ ಗಾಳ
ವೇಮಗಲ್​ನಲ್ಲಿ ಒಕ್ಕಲಿಗ ಮುಖಂಡರ ಸಭೆ ಮಾಡಿದ ಕಾಂಗ್ರೆಸ್
TV9 Web
| Edited By: |

Updated on:Jan 31, 2023 | 4:38 PM

Share

ಕೋಲಾರ: ಸಿದ್ದರಾಮಯ್ಯ(Siddaramaiah) ಅವರು ಈ ಬಾರಿ ಕೋಲಾರದಿಂದ(Kolar) ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಕ್ಷೇತ್ರದಲ್ಲಿ ರಾಜಕೀಯ ರಂಗೇರಿದೆ. ದಿನಕ್ಕೊಂದು ರಾಜಕೀಯ ಬೆಳವಣಿಗೆಗಳಲು ನಡೆಯುತ್ತಲೇ ಇವೆ. ನಿನ್ನೆ (ಜನವರಿ 30) ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಅವರು ಕೋಲಾರಕ್ಕೆ ಭೇಟಿ ನೀಡಿ ಹಲವು ಮುಖಂಡರ ಜೊತೆ ಮಾತುಕತೆ ನಡೆಸಿ ಹೋಗಿದ್ದರು. ಇದೀಗ ಶಾಸಕರಾದ ಕೃಷ್ಣಬೈರೇಗೌಡ, ಶ್ರೀನಿವಾಸಗೌಡ, ನಂಜೇಗೌಡ ಸೇರಿದಂತೆ ಹಲವು ನಾಯಕರು ಸಿದ್ದರಾಮಯ್ಯನವರ ಪರವಾಗಿ ಒಕ್ಕಲಿಗ ಸಮುದಾಯದ ಮತ ಬೇಟೆಗೆ ಇಳಿದಿದ್ದಾರೆ.

ಇದನ್ನೂ ಓದಿ: ಯತೀಂದ್ರ ಸಿದ್ದರಾಮಯ್ಯ ಕೋಲಾರ ರೌಂಡ್ಸ್: ಕುರುಬ ಸಮುದಾಯದ ವೋಟ್​​ ಕ್ರೋಢೀಕರಣ

ಹೌದು..ಒಕ್ಕಲಿಗ ಶಾಸಕರುಗಳಾದ ಕೃಷ್ಣಬೈರೇಗೌಡ, ಶ್ರೀನಿವಾಸಗೌಡ, ಹಾಗೂ ನಂಜೇಗೌಡ ಹಾಗೂ ವಿಧಾನಪರಿಷತ್​ ಸದಸ್ಯ ಅನಿಲ್​ ಕುಮಾರ್​ ಅವರುಗಳು ನೇತೃತ್ವದಲ್ಲಿ ವೇಮಗಲ್​ ಹೋಬಳಿಯ ಒಕ್ಕಲಿಗ ಮುಖಂಡರ ಸಭೆ ನಡೆಸಿದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಮಾಡಿದ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ಅವರ ಪರವಾಗಿ ಒಕ್ಕಲಿಗರು ಕೂಡಾ ಒಂದಾಗಬೇಕು ಎಂದು ಸಭೆಯಲ್ಲಿ ಸಮುದಾಯದ ಮುಖಂಡರಿಗೆ ಮನವಿ ಮಾಡಿದರು. ಈ ಮೂಲಕ ಸಿದ್ದರಾಮಯ್ಯ ಪರವಾಗಿ ಒಕ್ಕಲಿಗರನ್ನು ಒಂದುಗೂಡಿಸಲು ಕೆಲಸಕ್ಕೆ ಕೈಹಾಕಿದ್ದಾರೆ.

ಈ ವೇಳೆ ಮಾತನಾಡಿದ ಶಾಸಕ ಕೃಷ್ಣಬೈರೇಗೌಡ ಮಾತನಾಡಿ ಎಲ್ಲರಿಗೂ ಕೂಡಾ ಜಾತಿ ಅಭಿಮಾನ ಇರಬೇಕು. ಅದರೆ, ಜಾತಿಯನ್ನಿಟ್ಟುಕೊಂಡು ರಾಜಕೀಯ ಮಾಡಬಾರದು ಎಂದು ಒಕ್ಕಲಿಗ ಮುಖಂಡರಿಗೆ ಮನವಿ ಮಾಡಿದ ಅವರು, ರಾಜ್ಯದ ಅಭಿವೃದ್ದಿ ದೃಷ್ಟಿಯಿಂದ ರೈತರ ಹಿತದೃಷ್ಟಿಯಿಂದ ಸಿದ್ದರಾಮಯ್ಯ ಅವರು ಅದರಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರಕ್ಕೆ ಬರಬೇಕು ಎಂದು ಮನವಿ ಮಾಡಿದರು.

ಕೋಲಾರದಲ್ಲಿ ಅಲ್ಪಸಂಖ್ಯಾತರ ಮತಗಳಷ್ಟೇ ಒಕ್ಕಲಿಗ ಮತಗಳು ಕೂಡಾ ಪ್ರಾಮುಖ್ಯತೆ ಪಡೆದಿದೆ. ಒಂದು ಲೆಕ್ಕದಲ್ಲಿ ಒಕ್ಕಲಿಗ ಮತಗಳು ನಿರ್ಣಾಯಕ ಅಂತನೇ ಹೇಳಬಹುದು. ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಸಮುದಾಯದ ಮತಗಳ ಬುಟ್ಟಿಗೆ ಕೈಹಾಕಿರುವ ಕಾಂಗ್ರೆಸ್, ​ ಮೊದಲು ಅಲ್ಪಸಂಖ್ಯಾತರು ನಂತರ, ಒಕ್ಕಲಿಗರು, ನಂತರದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮತಗಳನ್ನು ಸೆಳೆಯಲು ಪ್ಲಾನ್​ ಮಾಡಿದೆ. ಈ  ಹಿನ್ನೆಲೆಯಲ್ಲಿ ಹಂತ ಹಂತವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ.

ವರದಿ:  ರಾಜೇಂದ್ರ ಸಿಂಹ ಟಿವಿ9 ಕೋಲಾರ

Published On - 4:36 pm, Tue, 31 January 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ