AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ, ವಿ ಸೋಮಣ್ಣ ವಿರುದ್ಧ ಕಾಂಗ್ರೆಸ್ ನಿಯೋಗದಿಂದ ದೂರು ದಾಖಲು

ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯ ವಸತಿ ಸಚಿವ ವಿ ಸೋಮಣ್ಣ ವಿರುದ್ಧ ಕಾಂಗ್ರೆಸ್ ನಿಯೋಗ ದೂರು ನೀಡಿದೆ.

ಅಮಿತ್ ಶಾ, ವಿ ಸೋಮಣ್ಣ ವಿರುದ್ಧ ಕಾಂಗ್ರೆಸ್ ನಿಯೋಗದಿಂದ ದೂರು ದಾಖಲು
ಅಮಿತ್ ಶಾ ವಿರುದ್ಧ ಕಾಂಗ್ರೆಸ್ ದೂರು
ರಮೇಶ್ ಬಿ. ಜವಳಗೇರಾ
|

Updated on: Apr 27, 2023 | 11:09 AM

Share

ಬೆಂಗಳೂರು: ಕಾಂಗ್ರೆಸ್(Congress) ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ದಂಧೆ, ಗಲಭೆಗಳು ಏಳಬಹುದು ಎಂದು ಹೇಳಿಕೆ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ವಿರುದ್ಧ ಕಾಂಗ್ರೆಸ್ ದೂರು ನೀಡಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಇಂದು(ಏಪ್ರಿಲ್ 27) ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಇನ್ನು ಚಾಮರಾಜನಗರ ಜೆಡಿಎಸ್ ಅಭ್ಯರ್ಥಿ ನಾಮಪತ್ರ ಹಿಂಪಡೆಯುವಂತೆ ಆಮಿಷವೊಡ್ಡಿದ ಆರೋಪದ ಮೇಲೆ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ವಿರುದ್ಧವೂ ಸಹ ಕಾಂಗ್ರೆಸ್​ ದೂರು ನೀಡಿದೆ. ಬಿಜೆಪಿ ಪರ ಮತ ಹಾಕುವಂತೆ ಬಿಜೆಪಿ ನಾಯಕರು ಮತದಾರರನ್ನು ಬೆದರಿಸುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ವಿರೋಧ ಪಕ್ಷವಾದ ಕಾಂಗ್ರೆಸ್‌ ಮೇಲೆ ಇಲ್ಲಸಲ್ಲದ ಆರೋಪ ಹೊರಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ತುಮಕೂರು: ಕಾಂಗ್ರೆಸ್​ಗೆ ಮತ ಹಾಕಲ್ಲ ಎಂದಿದ್ದಕ್ಕೆ ಹಲ್ಲೆ ಆರೋಪ, ಕೇಸ್ ಬುಕ್

ದೂರು ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರಕ್ರಿಯಿಸಿದ ಡಿಕೆ ಶಿವಕುಮಾರ್, ಕರ್ನಾಟಕ ಶಾಂತಿಯ ತೋಟ. ಇದು ಕರ್ನಾಟಕ ರಾಜ್ಯದ ಪದ್ಧತಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೋಮು‌ಗಲಭೆ ಆಗುತ್ತೆ ಎಂದಯ ಅಮಿತ್ ಶಾ ಹೇಳಿದ್ದಾರೆ. ಕಾಂಗ್ರೆಸ್ ಗೆ ವೋಟ್ ಮಾಡಬೇಡಿ ಎಂದು ಹೇಳುವ ಮೂಲಕ ಮತದಾರರನ್ನು ಹೆದರಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿದ್ದೇವೆ. ಏಪ್ರಿಲ್ 25 ಈ ಹೇಳಿಕೆಯನ್ನು ನೀಡಿದ್ದು, ಎಫ್ಐಆರ್ ದಾಖಲಿಸಿ ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಹಾಗೇ ಅವರನ್ನು ಪ್ರಚಾರಕ್ಕೆ ಬರದಂತೆ ಚುನಾವಣಾ ಆಯೋಗ ಚುನಾವಣಾ ನಿರ್ಬಂಧ ಹೇರಬೇಕು ಎಂದು ಆಗ್ರಹಿಸಿದರು.

ಸಾಮಾನ್ಯ ಜನ ಮಾತಾಡಿದ್ದರೆ ಇಷ್ಟೊತ್ತಿಗೆ ಬಂಧಿಸುತ್ತಿದ್ದರು. ಪೇ ಸಿಎಂ ಕ್ಯಾಂಪೆನ್ ಮಾಡಿದಾಗಲೇ ತೊಂದರೆ ಕೊಟ್ಟರು. ಈಗ ಅಮಿತ್ ಶಾ ವಿರುದ್ಧ ಎಫ್ಐಆರ್ ಯಾಕೆ ದಾಖಲಾಗಬಾರದು ಎಂದರು.

ಅಮಿತ್ ಶಾ ಹೇಳಿದ್ದೇನು?

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ದಂಧೆ, ಗಲಭೆಗಳು ಏಳಬಹುದು ಎಂದು ಬುಧವಾರ(ಏಪ್ರಿಲ್ 25) ಸಾರ್ವಜನಿಕ ರ‍್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಈ ಹಿಂದೆ ಬಂಧನದಲ್ಲಿದ್ದ ಎಲ್ಲ ಪಿಎಫ್‌ಐ ಕಾರ್ಯಕರ್ತರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಡುಗಡೆ ಮಾಡಿಸಿದ್ದರು. ನಂತರ ಬಿಜೆಪಿ ಸರ್ಕಾರವೇ ಅವರನ್ನು ಪತ್ತೆ ಮಾಡಿ ಮತ್ತೆ ಜೈಲಿಗಟ್ಟಿತ್ತು. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಪಿಎಫ್ಐ ನಿಷೇಧವನ್ನು ತೆಗೆದುಹಾಕುತ್ತದೆ ಎಂದು ತನ್ನ ಚುನಾವಣಾ ಭರವಸೆ ನೀಡಿದೆ ಎಂದು ಅಮಿತ್ ಶಾ ಆರೋಪಿಸಿದ್ದರು.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!