AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ, ವಿ ಸೋಮಣ್ಣ ವಿರುದ್ಧ ಕಾಂಗ್ರೆಸ್ ನಿಯೋಗದಿಂದ ದೂರು ದಾಖಲು

ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯ ವಸತಿ ಸಚಿವ ವಿ ಸೋಮಣ್ಣ ವಿರುದ್ಧ ಕಾಂಗ್ರೆಸ್ ನಿಯೋಗ ದೂರು ನೀಡಿದೆ.

ಅಮಿತ್ ಶಾ, ವಿ ಸೋಮಣ್ಣ ವಿರುದ್ಧ ಕಾಂಗ್ರೆಸ್ ನಿಯೋಗದಿಂದ ದೂರು ದಾಖಲು
ಅಮಿತ್ ಶಾ ವಿರುದ್ಧ ಕಾಂಗ್ರೆಸ್ ದೂರು
ರಮೇಶ್ ಬಿ. ಜವಳಗೇರಾ
|

Updated on: Apr 27, 2023 | 11:09 AM

Share

ಮುಖ್ಯಾಂಶಗಳು

  • ಕಾಂಗ್ರೆಸ್ ನಿಯೋಗದಿಂದ ಬಿಜೆಪಿ ನಾಯಕರ ವಿರುದ್ಧ ದೂರು
  • ಕೇಂದ್ರ ಗೃಹ ಸಚಿವ ಅಮಿತ್ ಶಾ,ವಿ ಸೋಮಣ್ಣ ವಿರುದ್ಧ ದೂರು ನೀಡಿದ ಕೈ ನಾಯಕರು
  • ಘರ್ಷಣೆಗಳು, ಗಲಭೆಗಳು ಹೆಚ್ಚಾಗುತ್ತವೆ ಎಂಬ ಹೇಳಿಕೆ ಹಿನ್ನೆಲೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು

ಬೆಂಗಳೂರು: ಕಾಂಗ್ರೆಸ್(Congress) ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ದಂಧೆ, ಗಲಭೆಗಳು ಏಳಬಹುದು ಎಂದು ಹೇಳಿಕೆ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ವಿರುದ್ಧ ಕಾಂಗ್ರೆಸ್ ದೂರು ನೀಡಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಇಂದು(ಏಪ್ರಿಲ್ 27) ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಇನ್ನು ಚಾಮರಾಜನಗರ ಜೆಡಿಎಸ್ ಅಭ್ಯರ್ಥಿ ನಾಮಪತ್ರ ಹಿಂಪಡೆಯುವಂತೆ ಆಮಿಷವೊಡ್ಡಿದ ಆರೋಪದ ಮೇಲೆ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ವಿರುದ್ಧವೂ ಸಹ ಕಾಂಗ್ರೆಸ್​ ದೂರು ನೀಡಿದೆ. ಬಿಜೆಪಿ ಪರ ಮತ ಹಾಕುವಂತೆ ಬಿಜೆಪಿ ನಾಯಕರು ಮತದಾರರನ್ನು ಬೆದರಿಸುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ವಿರೋಧ ಪಕ್ಷವಾದ ಕಾಂಗ್ರೆಸ್‌ ಮೇಲೆ ಇಲ್ಲಸಲ್ಲದ ಆರೋಪ ಹೊರಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ತುಮಕೂರು: ಕಾಂಗ್ರೆಸ್​ಗೆ ಮತ ಹಾಕಲ್ಲ ಎಂದಿದ್ದಕ್ಕೆ ಹಲ್ಲೆ ಆರೋಪ, ಕೇಸ್ ಬುಕ್

ದೂರು ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರಕ್ರಿಯಿಸಿದ ಡಿಕೆ ಶಿವಕುಮಾರ್, ಕರ್ನಾಟಕ ಶಾಂತಿಯ ತೋಟ. ಇದು ಕರ್ನಾಟಕ ರಾಜ್ಯದ ಪದ್ಧತಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೋಮು‌ಗಲಭೆ ಆಗುತ್ತೆ ಎಂದಯ ಅಮಿತ್ ಶಾ ಹೇಳಿದ್ದಾರೆ. ಕಾಂಗ್ರೆಸ್ ಗೆ ವೋಟ್ ಮಾಡಬೇಡಿ ಎಂದು ಹೇಳುವ ಮೂಲಕ ಮತದಾರರನ್ನು ಹೆದರಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿದ್ದೇವೆ. ಏಪ್ರಿಲ್ 25 ಈ ಹೇಳಿಕೆಯನ್ನು ನೀಡಿದ್ದು, ಎಫ್ಐಆರ್ ದಾಖಲಿಸಿ ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಹಾಗೇ ಅವರನ್ನು ಪ್ರಚಾರಕ್ಕೆ ಬರದಂತೆ ಚುನಾವಣಾ ಆಯೋಗ ಚುನಾವಣಾ ನಿರ್ಬಂಧ ಹೇರಬೇಕು ಎಂದು ಆಗ್ರಹಿಸಿದರು.

ಸಾಮಾನ್ಯ ಜನ ಮಾತಾಡಿದ್ದರೆ ಇಷ್ಟೊತ್ತಿಗೆ ಬಂಧಿಸುತ್ತಿದ್ದರು. ಪೇ ಸಿಎಂ ಕ್ಯಾಂಪೆನ್ ಮಾಡಿದಾಗಲೇ ತೊಂದರೆ ಕೊಟ್ಟರು. ಈಗ ಅಮಿತ್ ಶಾ ವಿರುದ್ಧ ಎಫ್ಐಆರ್ ಯಾಕೆ ದಾಖಲಾಗಬಾರದು ಎಂದರು.

ಅಮಿತ್ ಶಾ ಹೇಳಿದ್ದೇನು?

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ದಂಧೆ, ಗಲಭೆಗಳು ಏಳಬಹುದು ಎಂದು ಬುಧವಾರ(ಏಪ್ರಿಲ್ 25) ಸಾರ್ವಜನಿಕ ರ‍್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಈ ಹಿಂದೆ ಬಂಧನದಲ್ಲಿದ್ದ ಎಲ್ಲ ಪಿಎಫ್‌ಐ ಕಾರ್ಯಕರ್ತರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಡುಗಡೆ ಮಾಡಿಸಿದ್ದರು. ನಂತರ ಬಿಜೆಪಿ ಸರ್ಕಾರವೇ ಅವರನ್ನು ಪತ್ತೆ ಮಾಡಿ ಮತ್ತೆ ಜೈಲಿಗಟ್ಟಿತ್ತು. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಪಿಎಫ್ಐ ನಿಷೇಧವನ್ನು ತೆಗೆದುಹಾಕುತ್ತದೆ ಎಂದು ತನ್ನ ಚುನಾವಣಾ ಭರವಸೆ ನೀಡಿದೆ ಎಂದು ಅಮಿತ್ ಶಾ ಆರೋಪಿಸಿದ್ದರು.

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’