AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bajrang Dal Controversy: ಕಾಂಗ್ರೆಸ್​​ನಿಂದ ಬಜರಂಗದಳ ನಿಷೇಧ ಪ್ರಸ್ತಾವ ವಾಪಸ್?

ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ವಿರುದ್ಧ ಕ್ರಮದ ಕುರಿತು ಪ್ರಸ್ತಾವ ಮಾಡಿದ್ದಕ್ಕೆ ವ್ಯಾಪಕ ವಿರೋಧ, ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ) ನಾಯಕರು ಡ್ಯಾಮೇಜ್ ಕಂಟ್ರೋಲ್ ಮಾಡಿಕೊಳ್ಳಲು ಮುಂದಾಗಿದ್ದಾರೆ.

Bajrang Dal Controversy: ಕಾಂಗ್ರೆಸ್​​ನಿಂದ ಬಜರಂಗದಳ ನಿಷೇಧ ಪ್ರಸ್ತಾವ ವಾಪಸ್?
ಕಾಂಗ್ರೆಸ್ ಪಕ್ಷದ ಚಿಹ್ನೆ
ಗಣಪತಿ ಶರ್ಮಾ
|

Updated on: May 02, 2023 | 6:36 PM

Share

ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ (Bajrang Dal) ವಿರುದ್ಧ ಕ್ರಮದ ಕುರಿತು ಪ್ರಸ್ತಾವ ಮಾಡಿದ್ದಕ್ಕೆ ವ್ಯಾಪಕ ವಿರೋಧ, ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ (Congress) ನಾಯಕರು ಡ್ಯಾಮೇಜ್ ಕಂಟ್ರೋಲ್ ಮಾಡಿಕೊಳ್ಳಲು ಮುಂದಾಗಿದ್ದಾರೆ. ಬಜರಂಗದಳ ನಿಷೇಧ ಪ್ರಸ್ತಾವವನ್ನು ವಾಪಸ್ ಪಡೆಯಲು ಚಿಂತನೆ ನಡೆಸಿದ್ದಾರೆ. ಇಂದು (ಮಂಗಳವಾರ) ರಾತ್ರಿ ನಾಯಕರು ಸಮಾಲೋಚನೆ ನಡೆಸಿ, ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಬುಧವಾರ ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಬಜರಂಗದಳ ನಿಷೇಧ ಪ್ರಸ್ತಾವ ವಿವಾದಕ್ಕೀಡಾಗುತ್ತಿದ್ದಂತೆಯೇ ಇದರಿಂದ ಚುನಾವಣೆ ಮೇಲೆ ನಕಾರಾತ್ಮಕ ಪರಿಣಾಮವಾಗಬಹುದು ಎಂಬ ಚಿಂತೆ ಕಾಂಗ್ರೆಸ್ ಪಕ್ಷವನ್ನು ಆವರಿಸಿದೆ ಎನ್ನಲಾಗಿದೆ. ಹೀಗಾಗಿ ಅದನ್ನು ಪ್ರಣಾಳಿಕೆಯಿಂದ ತೆಗೆದುಹಾಕಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಪಕ್ಷದ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಪ್ರಣಾಳಿಕೆಗೆ ಬಿಜೆಪಿ ನಾಯಕರು ಈಗಾಗಲೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಹ ಟಾಂಗ್ ನೀಡಿದ್ದಾರೆ. ಈ ಮಧ್ಯೆ, ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಿಸುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ.

ಏನಿದೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ?

ಸಮಾಜದಲ್ಲಿ ದ್ವೇಷ ಬಿತ್ತಿದರೆ ಬಜರಂಗದಳ, ಪಿಎಫ್​ಐಯಂಥ ಬಹುಸಂಖ್ಯಾತ, ಅಲ್ಪಸಂಖ್ಯಾತ ಸಂಘಟನೆಗಳ ನಿಷೇಧ ಮಾಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: PM Modi: ಕಾಂಗ್ರೆಸ್​​ನವರಿಗೆ ಹನುಮಂತನ ಕಂಡರೂ ಆಗಲ್ಲ; ಬಜರಂಗದಳ ನಿಷೇಧ ಪ್ರಸ್ತಾವಕ್ಕೆ ಮೋದಿ ಟಾಂಗ್

ಬಜರಂಗ ದಳದ ಹೆಸರು ಪ್ರಸ್ತಾಪಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬಸವರಾಜ ಬೊಮ್ಮಾಯಿ, ಪಿಎಫ್​​ಐ ದೇಶವಿರೋಧಿ ಕೃತ್ಯಗಳನ್ನು ಎಸಗಿದೆ. ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿಕೊಂಡಿದೆ. ಸಾಕಷ್ಟು ಕೇಸ್​ಗಳು ಅದರ ಮೇಲಿವೆ, ಪುರಾವೆಗಳೂ ಇವೆ. ಅದಕ್ಕೆ ಭಜರಂಗದಳವನ್ನು ಹೊಲಿಸುವುದು ಸರಿಯಲ್ಲ. ಪಿಎಫ್​ಐಯನ್ನು ನಾವು ಈಗಾಗಲೇ ನಿಷೇಧಿಸಿದ್ದೇವೆ. ಸಾಮಾಜಿಕವಾಗಿ, ಧಾರ್ಮಿಕವಾಗಿ ಕೆಲಸ ಮಾಡುವಂಥ ಸಂಘಟನೆ ಬಜರಂಗದಳ ಎಂದು ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ