AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​​ ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ: ಅಂತಿಮ ಪಟ್ಟಿಯಲ್ಲಿ ಯಾರಿಗೆಲ್ಲ ಸಿಕ್ತು ಟಿಕೆಟ್? ಇಲ್ಲಿದೆ ವಿವರ

Karnataka Assembly Elections 2023: ನಿನ್ನೆ(ಏಪ್ರಿಲ್ 19) ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ ಮಾಡಿದ್ದ ಎಐಸಿಸಿ, ಬಳಿಕ ಮಧ್ಯ ರಾತ್ರಿ ಫೈನಲ್ ಪಟ್ಟಿ ಬಿಡುಗಡೆ ಮಾಡಿದೆ. ಎಐಸಿಸಿ ಕಾರ್ಯದರ್ಶೀಗೆ ಟಿಕೆಟ್​ ಕೈತಪ್ಪಿದೆ.

ಕಾಂಗ್ರೆಸ್​​ ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ: ಅಂತಿಮ ಪಟ್ಟಿಯಲ್ಲಿ ಯಾರಿಗೆಲ್ಲ ಸಿಕ್ತು ಟಿಕೆಟ್? ಇಲ್ಲಿದೆ ವಿವರ
ರಮೇಶ್ ಬಿ. ಜವಳಗೇರಾ
|

Updated on:Apr 20, 2023 | 6:38 AM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಕಾಂಗ್ರೆಸ್​​ನ 6ನೇ ಹಾಗೂ ಅಂತಿಮ ಪಟ್ಟಿ (Karnataka Congress Candidates List) ಬಿಡುಗಡೆ ಮಾಡಿದೆ. ನಿನ್ನೆ(ಏಪ್ರಿಲ್ 19) 5ನೇ ಪಟ್ಟಿ ಬಿಡುಗಡೆ ಮಾಡಿದ್ದ ಎಐಸಿಸಿ, ಬಳಿಕ ಮಧ್ಯ ರಾತ್ರಿ ಫೈನಲ್ ಪಟ್ಟಿ ಬಿಡುಗಡೆ ಮಾಡಿದೆ. ಬಾಕಿ ಉಳಿದಿದ್ದ 5 ಕ್ಷೇತ್ರಗಳಿಗೆ ಬುಧವಾರ ತಡರಾತ್ರಿ 2 ಗಂಟೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.  ಈ ಮೂಲಕ ಕಾಂಗ್ರೆಸ್​ ಎಲ್ಲಾ 224 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಪ್ರಮುಖವಾಗಿ ಎಐಸಿಸಿ ಕಾರ್ಯದರ್ಶಿ ಎಸ್​ ಬೋಸರಾಜು ಅವರಿಗೆ ಟಿಕೆಟ್​ ಕೈತಪ್ಪಿದೆ. ಎಸ್ ಬೋಸರಾಜು ಹಾಗೂ ಪುತ್ರ ರವಿ ಬೋಸರಾಜು ರಾಯಚೂರು ನಗರ ಕ್ಷೇತ್ರ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್​ ನೀಡುವಂತೆ ಬೋಸರಾಜು ಪಟ್ಟು ಹಿಡಿದಿದ್ದರು. ಜಿಲ್ಲೆಯ ಪ್ರಬಲ ನಾಯಕರಾಗಿರುವ ಬೋಸರಾಜುಗೆ ಟಿಕೆಟ್​ ಕೈತಪ್ಪಿದ್ದು, ಅಂತಿಮವಾಗಿ ರಾಯಚೂರು ನಗರ ಟಿಕೆಟ್​ ಅನ್ನು ಅಲ್ಪಸಂಖ್ಯಾತ ಸಮುದಾಯಕ್ಕೆ ನೀಡಿದೆ.

ಇದನ್ನೂ ಓದಿ: Karnataka Assembly Elections 2023: ಕಾಂಗ್ರೆಸ್​ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ, ಬೊಮ್ಮಾಯಿ ವಿರುದ್ಧ ಅಭ್ಯರ್ಥಿ ಬದಲು

ನಿನ್ನೆ ಅಷ್ಟೇ(ಏಪ್ರಿಲ್ 19)) ಬಿಜೆಪಿ ತನ್ನ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್​ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ ಮಾಡಿತ್ತು. ಬಳಿಕ ತೀವ್ರ ಕಗ್ಗಂಟಾಗಿ ಉಳಿದಿದ್ದ 5 ಕ್ಷೇತ್ರಗಳಿಗೆ ಕಾಂಗ್ರೆಸ್​ ಬುಧವಾರ ಮಧ್ಯರಾತ್ರಿ 2ಕ್ಕೆ ಕಾಂಗ್ರೆಸ್​​ ಫೈನಲ್ (6ನೇ ಪಟ್ಟಿ)  ಪಟ್ಟಿಯನ್ನು ಪ್ರಕಟಿಸಿದೆ. ಬಾಕಿ ಉಳಿದುಕೊಂಡಿದ್ದ ರಾಯಚೂರು ನಗರ, ಶಿಡ್ಲಘಟ್ಟ, ಸಿ.ವಿ ರಾಮನ್ ನಗರ, ಅರಕಲಗೂಡು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಅವರ ಹೆಸರುಗಳು ಈ ಕೆಳಗಿನಂತಿವೆ.

ಬಾಕಿ ಉಳಿದಿದ್ದ 5 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಇಂತಿದೆ

  • ರಾಯಚೂರು – ಮೊಹಮ್ಮದ್ ಶಾಲಮ್
  • ಶಿಡ್ಲಘಟ್ಟ – ಬಿ ವಿ ರಾಜೀವ್ ಗೌಡ
  • ಸಿ ವಿ ರಾಮನ್ ನಗರ – ಎಸ್ ಆನಂದ್ ಕುಮಾರ್
  • ಅರಕಲಗೂಡು – ಎಚ್.ಪಿ. ಶ್ರೀಧರ್ ಗೌಡ
  • ಮಂಗಳೂರು ಉತ್ತರ – ಇನಾಯತ್ ಅಲಿ

ಮೇ 10ರಂದು ಕರ್ನಾಟಕ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಈ ಹಿನ್ನೆಲೆಯಲ್ಲಿ ಕೊನೆದಿನ ವಿವಿಧ ಪಕ್ಷಗಳ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:18 am, Thu, 20 April 23

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ