AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಕರ್ನಾಟಕದ ಜನತೆಯ ಗೆಲುವು, ದ್ವೇಷದ ವಿರುದ್ಧ ಪ್ರೀತಿಗೆ ಸಿಕ್ಕ ಜಯ: ರಾಹುಲ್ ಗಾಂಧಿ

Rahul Gandhi: ನಾವು ಬಡವರ ಜತೆ ನಿಂತಿದ್ದೆವು. ಇದು ಎಲ್ಲರ ಗೆಲವು. ಇದು ಕರ್ನಾಟಕದ ಜನರ ಗೆಲುವು. ನಾವು 5 ಗ್ಯಾರಂಟಿ ಭರವಸೆಗಳನ್ನು ನೀಡಿದ್ದೆವು. ನಾವು ಆ ಭರವಸೆಗಳನ್ನು ವಿಧಾನಸಭೆ ಕಲಾಪದ ಮೊದಲ ದಿನವೇ ಜಾರಿಗೆ ತರುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇದು ಕರ್ನಾಟಕದ ಜನತೆಯ ಗೆಲುವು, ದ್ವೇಷದ ವಿರುದ್ಧ ಪ್ರೀತಿಗೆ ಸಿಕ್ಕ ಜಯ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
|

Updated on:May 13, 2023 | 3:04 PM

Share

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ (Congress) ಭರ್ಜರಿಯಾಗಿ ಮುನ್ನಡೆ ಸಾಧಿಸಿ, ಹಲವು ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರುತ್ತಿದ್ದಂತೆ ದೆಹಲಿಯಲ್ಲಿ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi), ನಾನು ಮೊದಲಿಗೆ ಕರ್ನಾಟಕದ ಜನತೆಗೆ ಧನ್ಯವಾದಗಳನ್ನು  ಹೇಳಲು ಬಯಸುತ್ತೇನೆ. ನಾವು ಕರ್ನಾಟಕದಲ್ಲಿ ದ್ವೇಷದಿಂದ ಹೋರಾಡಿಲ್ಲ, ಹೃದಯದಿಂದ ಹೋರಾಡಿದ್ದೇವೆ. ದ್ವೇಷದ ಮುಂದೆ ಪ್ರೀತಿ ಗೆಲ್ಲುತ್ತದೆ, ಗೆದ್ದಿದೆ. ಈ ದೇಶದವರಿಗೆ ಗೊತ್ತು ಪ್ರೀತಿ ಇಷ್ಟ ಎಂದು.

ನಾವು ಬಡವರ ಜತೆ ನಿಂತಿದ್ದೆವು. ಇದು ಎಲ್ಲರ ಗೆಲವು. ಇದು ಕರ್ನಾಟಕದ ಜನರ ಗೆಲುವು. ನಾವು 5 ಗ್ಯಾರಂಟಿ ಭರವಸೆಗಳನ್ನು ನೀಡಿದ್ದೆವು. ನಾವು ಆ ಭರವಸೆಗಳನ್ನು ವಿಧಾನಸಭೆ ಕಲಾಪದ ಮೊದಲ ದಿನವೇ ಜಾರಿಗೆ ತರುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಕರ್ನಾಟಕದ ಗೆಲುವನ್ನು ಕ್ರೋನಿ ಕ್ಯಾಪಿಟಲಿಸಂ ವಿರುದ್ಧದ ಜನತೆಯ ಗೆಲುವು ಎಂದು ರಾಹುಲ್ ಗಾಂಧಿ ಬಣ್ಣಿಸಿದ್ದಾರೆ. ನವದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಪ್ರೀತಿಯಿಂದಲೇ ನಾವು ದ್ವೇಷವನ್ನು ಕಿತ್ತು ಹಾಕಿದ್ದೇವೆ. ಇದು ಇತರ ಎಲ್ಲ ರಾಜ್ಯಗಳಲ್ಲಿಯೂ ಸಂಭವಿಸುತ್ತದೆ ಎಂದು ಹೇಳಿದರು. ಹೊಸ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪಕ್ಷದ ಭರವಸೆಗಳನ್ನು ಈಡೇರಿಸಲಾಗುವುದು. ಒಂದೆಡೆ ಕ್ರೋನಿ ಕ್ಯಾಪಿಟಲಿಸಂನ ಬಲವಿತ್ತು, ಮತ್ತೊಂದೆಡೆ ಬಡವರ ಬಲವಿತ್ತುಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಕರ್ನಾಟಕ ಹೋರಾಟದಲ್ಲಿ ದ್ವೇಷ ಅಥವಾ ನಿಂದನೆ ಕಾಂಗ್ರೆಸ್‌ನ ಅಸ್ತ್ರವಾಗಿರಲಿಲ್ಲ. ನಾವು ಜನರ ಸಮಸ್ಯೆಗಳಿಗಾಗಿ ಹೋರಾಡಿದ್ದೇವೆ ಕರ್ನಾಟಕ ಮೇ ನಫ್ರತ್ ಕಿ ಬಜಾರ್ ಬಂದ್ ಹುಯಿ, ಮೊಹಬ್ಬತ್ ಕಿ ದುಕಾನೇಂ ಖುಲಿ (ಕರ್ನಾಟಕದಲ್ಲಿ  ದ್ವೇಷದ ಅಂಗಡಿಗಳು ಮಚ್ಚಿ ಪ್ರೀತಿಯ  ಅಂಗಡಿಗಳು ತೆರೆದಿವೆ) ಎಂದು ರಾಹುಲ್ ಗಾಂಧಿ  ಹೇಳಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಅಪ್ಡೇಟ್​ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:51 pm, Sat, 13 May 23

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ