AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamarajnagara Election 2023 Winner: ಚಾಮರಾಜನಗರದಲ್ಲಿ ವಿ ಸೋಮಣ್ಣಗೆ ಸೋಲು

ವರುಣಾ ಹಾಗೂ ಚಾಮರಾಜನಗರದಲ್ಲಿ ಸ್ಪರ್ಧೆ ಮಾಡಿದ್ದ ವಿ ಸೋಮಣ್ಣ ಈಗ ಒಂದು ಕ್ಷೇತ್ರದಲ್ಲಿ ಸೋಲಾಗಿದೆ. ಚಾಮರಾನಗರದಲ್ಲಿ ಸೋಮಣ್ಣ ಮುಖಭಂಗವಾಗಿದ್ದು, ವರುಣಾದಲ್ಲಿ ಹಿನ್ನಡೆ ಸಾಧಿಸಿದ್ದಾರೆ.

Chamarajnagara Election 2023 Winner: ಚಾಮರಾಜನಗರದಲ್ಲಿ ವಿ ಸೋಮಣ್ಣಗೆ ಸೋಲು
ವಿ ಸೋಮಣ್ಣ
ರಮೇಶ್ ಬಿ. ಜವಳಗೇರಾ
|

Updated on:May 13, 2023 | 11:55 AM

Share

ಚಾಮರಾಜನಗರ: ಬೆಂಗಳೂರಿನಿಂದ ವಲಸೆ ಹೋಗಿ ಚಾಮರಾಜನಗರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ವಿ ಸೋಮಣ್ಣ ಅವರಿಗೆ ಸೋಲಾಗಿದೆ. ಕಾಂಗ್ರೆಸ್ ಅಭ್ಯೆರ್ಥಿ ಪುಟ್ಟರಂಗಶೆಟ್ಟಿ ಅವರು ಸತತ ಮೂರನೇ ಬಾರಿಗೆ ಗೆದ್ದು ಹ್ಯಾಟ್ರಿಕ್​ ಸಾಧಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಗಡಿ ಜಿಲ್ಲೆ ಕಾರಣಕ್ಕೆ ಸಾಧಾರಣ ಕ್ಷೇತ್ರಗಳ ಪಟ್ಟಿಯಲ್ಲಿದ್ದ ಚಾಮರಾಜನಗರವು ರಾತ್ರೋರಾತ್ರಿ ಹೈವೋಲ್ಟೇಜ್‌ ಕ್ಷೇತ್ರವಾಗಿ ಹೊರಹೊಮ್ಮಿರುವುದು 2023ರ ಸಾರ್ವತ್ರಿಕ ಚುನಾವಣೆಯ ವಿಶೇಷತೆಗಳಲ್ಲೊಂದು. ರಾಜಧಾನಿ ಹೃದಯ ಭಾಗದ ಸ್ವಕ್ಷೇತ್ರ ಗೋವಿಂದರಾಜನಗರವನ್ನು ಬಿಟ್ಟು ಚಾಮರಾಜನಗರ ಕ್ಷೇತ್ರದಲ್ಲಿ ಕಮಲ ಅರಳಿಸಲು ಸಚಿವ ವಿ ಸೋಮಣ್ಣ ಅಖಾಡಕ್ಕಿಳಿದಿರುವುದು ದಿಢೀರ್‌ ಪರಿವರ್ತನೆಯ ಕೇಂದ್ರ ಬಿಂದುವಾಗಿತ್ತು.

ಚಾಮರಾಜನಗರದಿಂದ ಸೋಮಣ್ಣ ಸ್ಪರ್ಧೆ ಅಚ್ಚರಿಯ ಬೆಳವಣಿಗೆ ಏನಲ್ಲ. ಬಿಜೆಪಿ ಸೇರುವುದಕ್ಕೂ ಹಿಂದಿನಿಂದಲೂ ಸೋಮಣ್ಣನವರಿಗೆ ಚಾಮರಾಜನಗರದೊಂದಿಗೆ ಸಂಪರ್ಕವಿತ್ತು. ಹಾಗಾಗಿ ಅವರ ಆಪ್ತ ಬಳಗ, ಬೆಂಬಲಿಗರ ಪಡೆಯೂ ಇತ್ತು. ಇದೇ ಕಾರಣಕ್ಕೆ 2018ರಲ್ಲೂ ಚಾಮರಾಜನಗರ ಸೇರಿದಂತೆ ಆ ಜಿಲ್ಲೆಯ ಗುಂಡ್ಲುಪೇಟೆ ಇಲ್ಲವೇ ಹನೂರಿನಿಂದ ಸೋಮಣ್ಣ ಸ್ಪರ್ಧಿಸುವ ಬಗ್ಗೆ ಚರ್ಚೆಯಾಗಿತ್ತು. ಕೊನೆಗೆ ಗೋವಿಂದರಾಜನಗರದಿಂದಲೇ ಸ್ಪರ್ಧಿಸಿದ್ದರು.

Published On - 11:41 am, Sat, 13 May 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್