AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2019ರಲ್ಲಿ ಮೋದಿ ಸರ್​​ನೇಮ್ ಹೇಳಿಕೆ ನೀಡಿದ್ದ ಕೋಲಾರದಿಂದಲೇ ಕರ್ನಾಟಕ ಚುನಾವಣೆ ಪ್ರಚಾರ ಆರಂಭಿಸಲಿದ್ದಾರೆ ರಾಹುಲ್​​ ಗಾಂಧಿ

ರಾಹುಲ್ ಗಾಂಧಿ ಅವರು ಕೋಲಾರಕ್ಕೆ ಬಂದು ತಮ್ಮ ಸತ್ಯಮೇವ ಜಯತೇ ರ್ಯಾಲಿ ಆರಂಭಿಸಲಿದ್ದಾರೆ. ಇಲ್ಲಿಂದಲೇ ಚುನಾವಣಾ ಯಾತ್ರೆ ಆರಂಭಿಸುವಂತೆ ಮನವಿ ಮಾಡಿದ್ದೆವು. ಅವರು ಹೇಳಿಕೆ ನೀಡಿದ್ದ ಜಾಗ ಅದು. ಅವರು ಇಲ್ಲಿಂದಲೇ ಮೆಗಾ ರ್ಯಾಲಿ ಆರಂಭಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

2019ರಲ್ಲಿ ಮೋದಿ ಸರ್​​ನೇಮ್ ಹೇಳಿಕೆ ನೀಡಿದ್ದ ಕೋಲಾರದಿಂದಲೇ ಕರ್ನಾಟಕ ಚುನಾವಣೆ ಪ್ರಚಾರ ಆರಂಭಿಸಲಿದ್ದಾರೆ ರಾಹುಲ್​​ ಗಾಂಧಿ
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
|

Updated on: Mar 29, 2023 | 9:38 PM

Share

ಬೆಂಗಳೂರು: ಮೇ 10 ರಂದು ನಡೆಯಲಿರುವ ರಾಜ್ಯ ಚುನಾವಣೆಗಾಗಿ ಕಾಂಗ್ರೆಸ್‌ನ ರಾಹುಲ್ ಗಾಂಧಿ(Rahul Gandhi) ಕರ್ನಾಟಕದಲ್ಲಿ (Karnataka Election) ತಮ್ಮ ಪ್ರಚಾರವನ್ನು ಮುಂದಿನ ತಿಂಗಳು ಪ್ರಾರಂಭಿಸಲಿದ್ದಾರೆ. ಪ್ರತಿಭಟನೆಯ ಸಂಕೇತವಾಗಿ ಏಪ್ರಿಲ್ 5 ರಂದು ರಾಹುಲ್ ಗಾಂಧಿ ಅವರು ಮೋದಿ ಸರ್​​ನೇಮ್ (Modi Surname) ಹೇಳಿಕೆ ನೀಡಿದ್ದ ಸ್ಥಳವಾದ ಕೋಲಾರದಲ್ಲಿ ರ್ಯಾಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರ ಸರ್​​ನೇಮ್ ಹೇಳಿಕೆ ವಿಚಾರದಲ್ಲಿ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಇದರಿಂದಾಗಿ ರಾಹುಲ್ ಸಂಸದ ಸ್ಥಾನದಿಂದ ಅನರ್ಹರಾಗಿದ್ದರು.

ರಾಹುಲ್ ಗಾಂಧಿ ಅವರು ಕೋಲಾರಕ್ಕೆ ಬಂದು ತಮ್ಮ ಸತ್ಯಮೇವ ಜಯತೇ ರ್ಯಾಲಿ ಆರಂಭಿಸಲಿದ್ದಾರೆ. ಇಲ್ಲಿಂದಲೇ ಚುನಾವಣಾ ಯಾತ್ರೆ ಆರಂಭಿಸುವಂತೆ ಮನವಿ ಮಾಡಿದ್ದೆವು. ಅವರು ಹೇಳಿಕೆ ನೀಡಿದ್ದ ಜಾಗ ಅದು. ಅವರು ಇಲ್ಲಿಂದಲೇ ಮೆಗಾ ರ್ಯಾಲಿ ಆರಂಭಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

2019 ರ ಚುನಾವಣೆಗೆ ಪೂರ್ವಭಾವಿಯಾಗಿ ಕೋಲಾರದಲ್ಲಿ ನಡೆದ ರ್ಯಾಲಿಯಲ್ಲಿ, ಪರಾರಿಯಾದ ಉದ್ಯಮಿಗಳಾದ ಲಲಿತ್ ಮೋದಿ ಮತ್ತು ನೀರವ್ ಮೋದಿಯನ್ನು ಉಲ್ಲೇಖಿಸಿ ಎಲ್ಲಾ ಕಳ್ಳರಿಗೂ ಮೋದಿ ಎಂಬ ಸರ್ ನೇಮ್ ಯಾಕಿದೆ ಎಂದು ರಾಹುಲ್ ಕೇಳಿದ್ದರು.

ಆದರೆ ಇದು ಇತರೆ ಹಿಂದುಳಿದ ವರ್ಗಗಳಿಗೆ ಮಾಡಿದ ಅವಮಾನ ಎಂದು ಬಿಜೆಪಿ ಪರಿಗಣಿಸಿದ್ದು, ಗುಜರಾತ್‌ನ ಪಕ್ಷದ ನಾಯಕ ಪೂರ್ಣೇಶ್ ಮೋದಿ ಪ್ರಕರಣ ದಾಖಲಿಸಿದ್ದರು. ತಮ್ಮ ಹೇಳಿಕೆಗೆ ಕ್ಷಮೆಯಾಚಿಸಲು ರಾಹುಲ್ ನಿರಾಕರಿಸಿದ್ದರು. ಶುಕ್ರವಾರ, ಅವರು ಲೋಕಸಭೆಯಿಂದ ಅನರ್ಹಗೊಂಡರು, ಇದು ಭಾರಿ ಪ್ರತಿಪಕ್ಷಗಳ ಆಕ್ರೋಶಕ್ಕೆ ಕಾರಣವಾಯಿತು.

18 ವಿರೋಧ ಪಕ್ಷಗಳ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇತ್ತ ಕಾಂಗ್ರೆಸ್ ಈ ಬೆಳವಣಿಗೆಯನ್ನು ಬೆಳ್ಳಿ ರೇಖೆ ಎಂದು ನೋಡುತ್ತಿದ್ದು, ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಇದು ಅಸ್ತ್ರದಂತಾಗಿದೆ. ಬುಧವಾರ ಬೆಳಗ್ಗೆ ಚುನಾವಣಾ ಆಯೋಗವು ಕರ್ನಾಟಕಕ್ಕೆ ಚುನಾವಣಾ ದಿನಾಂಕವನ್ನು ಘೋಷಿಸಿತು. ಅಲ್ಲಿ ಆಡಳಿತಾರೂಢ ಬಿಜೆಪಿ ಸತತ ಎರಡನೇ ಅವಧಿಗೆ ಅಧಿಕಾರವೇರುವ ನಿರೀಕ್ಷೆಯಲ್ಲಿದೆ.

ಇದನ್ನೂ ಓದಿ:ನೋಟು ಎಸೆದ ಪ್ರಕರಣ; ಡಿಕೆ ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

2018ರಲ್ಲಿ ಎಚ್‌ಡಿ ಕುಮಾರಸ್ವಾಮಿ ಅವರ ಜನತಾದಳ ಸೆಕ್ಯುಲರ್‌ನೊಂದಿಗೆ ಕರ್ನಾಟಕದಲ್ಲಿ ಸರ್ಕಾರ ರಚಿಸಿದ್ದ ಕಾಂಗ್ರೆಸ್ ಒಂದು ವರ್ಷದ ನಂತರ ಅಧಿಕಾರದಿಂದ ಹೊರಗುಳಿಯಿತು. ಹಲವಾರು ಶಾಸಕರು ಕೈಬಿಟ್ಟ ಕಾರಣ ಮೈತ್ರಿ ಸರ್ಕಾರ ಪತನವಾಯಿತು. ಸರ್ಕಾರ ಬೀಳಲು ಬಿಜೆಪಿಯೇ ಕಾರಣ ಎಂದು ಎರಡೂ ಪಕ್ಷಗಳು ಆರೋಪಿಸಿದ್ದವು.

ಈ ಬಾರಿಯೂ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ. ಅತಂತ್ರ ಅಸೆಂಬ್ಲಿ ವೇಳೆ ಕುಮಾರಸ್ವಾಮಿಯವರ ಜೆಡಿಎಸ್ ಜೊತೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುತ್ತದೆಯೇ ಎಂಬ ಪ್ರಶ್ನೆಗೆ, ಡಿಕೆ ಶಿವಕುಮಾರ್ ಅತಂತ್ರ ಅಸೆಂಬ್ಲಿ ಪ್ರಶ್ನೆಯೇ ಇಲ್ಲ, ಏಕೈಕ ದೊಡ್ಡ ಪಕ್ಷ ಅಸ್ತಿತ್ವದಲ್ಲಿದೆ ಎಂದು ಎನ್ ಡಿಟಿವಿಗೆ ಹೇಳಿದ್ದಾರೆ.

ಮತ್ತಷ್ಟು ಚುನಾವಣಾ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ