AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ರವಿ ನನ್ನನ್ನು ಬಿಜೆಪಿಯಿಂದ ಹೊರ ಕಳಿಸಿದರು, ಈಗ ಜನ ಅವರನ್ನು ಕ್ಷೇತ್ರದಿಂದಲೇ ಹೊರಕಳಿಸಿದ್ದಾರೆ: ಎಂಪಿ ಕುಮಾರಸ್ವಾಮಿ ವ್ಯಂಗ್ಯ

ಮೂಡಿಗೆರೆ ಕ್ಷೇತ್ರದಲ್ಲಿ ಬಿಜೆಪಿಗೆ ಜೀವ ತುಂಬಿದ್ದೇ ನಾನು. ಸಿ.ಟಿ.ರವಿ ನನ್ನನ್ನು ಬಿಜೆಪಿಯಿಂದ ಹೊರ ಕಳಿಸಿದರು. ಆದರೆ ಸಿ.ಟಿ.ರವಿಯನ್ನು ಕ್ಷೇತ್ರದಿಂದಲೇ ಜನ ಹೊರಕಳಿಸಿದ್ದಾರೆ.

ಸಿಟಿ ರವಿ ನನ್ನನ್ನು ಬಿಜೆಪಿಯಿಂದ ಹೊರ ಕಳಿಸಿದರು, ಈಗ ಜನ ಅವರನ್ನು ಕ್ಷೇತ್ರದಿಂದಲೇ ಹೊರಕಳಿಸಿದ್ದಾರೆ: ಎಂಪಿ ಕುಮಾರಸ್ವಾಮಿ ವ್ಯಂಗ್ಯ
ಎಂಪಿ ಕುಮಾರಸ್ವಾಮಿ, ಸಿ.ಟಿ. ರವಿ
ಆಯೇಷಾ ಬಾನು
|

Updated on:May 15, 2023 | 10:40 AM

Share

ಚಿಕ್ಕಮಗಳೂರು: ಬಿಜೆಪಿಯ ಭದ್ರಕೋಟೆ, ಹಿಂದುತ್ವದ ಕಿಚ್ಚಿನ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಜೆಪಿಗೆ ಹೀನಾಯ ಸೋಲಾಗಿದೆ. ಹಿಂದುತ್ವದ ಫೈಯರ್ ಬ್ರಾಂಡ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದಶಿ ಸಿ.ಟಿ. ರವಿ(CT Ravi) ಸೇರಿದಂತೆ ಹಾಲಿ ನಾಲ್ಕು ಶಾಸಕರನ್ನ ಸೋಲಿಸುವ ಮೂಲಕ ಬಿಜೆಪಿ ಕೋಟೆಯನ್ನ ಕಾಂಗ್ರೆಸ್ ಕಬ್ಜ ಮಾಡಿದೆ. ಮತ್ತೊಂದೆಡೆ ಸಿ.ಟಿ.ರವಿ ಸೋಲಿನ ಬಗ್ಗೆ ಮೂಡಿಗೆರೆ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ(MP Kumaraswamy) ವ್ಯಂಗ್ಯವಾಡಿದ್ದಾರೆ.

ಮೂಡಿಗೆರೆ ಕ್ಷೇತ್ರದಲ್ಲಿ ಬಿಜೆಪಿಗೆ ಜೀವ ತುಂಬಿದ್ದೇ ನಾನು. ಸಿ.ಟಿ.ರವಿ ನನ್ನನ್ನು ಬಿಜೆಪಿಯಿಂದ ಹೊರ ಕಳಿಸಿದರು. ಆದರೆ ಸಿ.ಟಿ.ರವಿಯನ್ನು ಕ್ಷೇತ್ರದಿಂದಲೇ ಜನ ಹೊರಕಳಿಸಿದ್ದಾರೆ. ಚಿಕ್ಕಮಗಳೂರು ಇನ್ಮುಂದೆ ವೀರಶೈವ-ಲಿಂಗಾಯತರ ಕ್ಷೇತ್ರ. ಸಿ.ಟಿ.ರವಿ ದತ್ತಮಾಲೆ, ಅಹಿತಕರ ಘಟನೆ ಮುಂದಿಟ್ಟು ಪ್ರಚಾರ ನಡೆಸಿದ್ರು. ಇನ್ಮುಂದೆ ಸಿ.ಟಿ.ರವಿಯ ಈ ವಿಚಾರಗಳು ಕೆಲಸ ಮಾಡುವುದಿಲ್ಲ. ಮಾಜಿ ಸಿಎಂ ಯಡಿಯೂರಪ್ಪ ಮೊಬೈಲ್ ಸ್ವಿಚ್​​​ ಆಫ್ ಮಾಡಲಿಲ್ಲ. ಫೋನ್ ಸ್ವಿಚ್​​​ ಆಫ್ ಮಾಡಿದ್ರೆ ಬಿಜೆಪಿಗೆ 50 ಸೀಟ್ ಅಷ್ಟೇ ಬರುತ್ತಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಪಾಕಿಸ್ತಾನ ಪರ ಘೋಷಣೆ: ಸ್ವಯಂಪ್ರೇರಿತ ದೂರು ದಾಖಲು

ನನ್ನನ್ನು ಬಿಟ್ಟಿದ್ದಕ್ಕೆ 5 ಕ್ಷೇತ್ರ ಹೋಗುತ್ತೆ ಅಂತ ಜನರೇ ಹೇಳಿದ್ದರು. ಜೆಡಿಎಸ್​ನಲ್ಲಿ ಬೂತ್​ ಕಮಿಟಿ, ಪಕ್ಷ ಸಂಘಟನೆ ಇರಲಿಲ್ಲ. ಹಾಗಾಗಿ ನನಗೆ ಸೋಲುಂಟಾಗಿದೆ. ಎಲ್ಲವನ್ನೂ ಸರಿಮಾಡಿಕೊಂಡು ಜೆಡಿಎಸ್​ ಪಕ್ಷ ಸಂಘಟನೆ ಮಾಡುವೆ. ಮುಂಬರುವ ಜಿ.ಪಂ., ತಾ.ಪಂ. ಚುನಾವಣೆಯಲ್ಲಿ ಪಕ್ಷ ಗೆಲ್ಲಿಸಲು ಶ್ರಮ ವಹಿಸುವೆ ಎಂದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಎಂ.ಪಿ.ಕುಮಾರಸ್ವಾಮಿ ತಿಳಿಸಿದರು.

20 ವರ್ಷದ ಭದ್ರಕೋಟೆಯನ್ನು ವಶಪಡಿಸಿಕೊಂಡ ಕೈ

ಚಿಕ್ಕಮಗಳೂರು ಜಿಲ್ಲೆಯ ಪಂಚ ಕ್ಷೇತ್ರಗಳನ್ನ ತನ್ನ ಹಿಡಿತದಲ್ಲಿ ಇಟ್ಟುಕೊಂಡಿಂದ ಬಿಜೆಪಿಗೆ ಚುನಾವಣೆಯ ಫಲಿತಾಂಶ ಕೆಂಡದಂತೆ ಸುಡ ತೊಡಗಿದೆ. 20 ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿದ್ದ ಚಿಕ್ಕಮಗಳೂರು ಕ್ಷೇತ್ರವನ್ನ ಕಬ್ಜಾ ಮಾಡಿದ್ದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಸೋಲು ಸೇರಿದಂತೆ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿಯ ಹಾಲಿ ಶಾಸಕರು ಮನೆಯ ದಾರಿ ಹಿಡಿದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ವಿಧಾನಸಭಾ ಚುನಾವಣೆಯ ಸಂಪೂರ್ಣ ಜವಾಬ್ದಾರಿಯನ್ನ ವಹಿಸಿಕೊಂಡಿದ್ದ ಸಿ.ಟಿ ರವಿಯನ್ನ ಟಾರ್ಗೆಟ್‌ ಮಾಡಿದ್ದ ಕಾಂಗ್ರೆಸ್ ಲಿಂಗಾಯತ ಮುಖಂಡರು ಸಿಟಿ ರವಿಯ ಒಂದು ಕಾಲದ ಆಪ್ತ ಎಚ್.ಡಿ ತಮ್ಮಯ್ಯನನ್ನ ಕಣಕ್ಕಿಳಿಸುವ ಮೂಲಕ ಲಿಂಗಾಯತ ಅಸ್ತ್ರ ಪ್ರಯೋಗ ಮಾಡಿತ್ತು‌.

ಕಾಂಗ್ರೆಸ್ ಜೊತೆಗೆ ಜೆಡಿಎಸ್ ಕೈ ಜೋಡಿಸಿ ಜೆ.ಡಿಎಸ್ ಅಭ್ಯರ್ಥಿ ಇದ್ರು ಬಹಿರಂಗವಾಗಿ ಕಾಂಗ್ರೆಸ್ ಬೆಂಬಲಿಸುವಂತೆ ಎಚ್.ಡಿ.ಕುಮಾರಸ್ವಾಮಿ ಪರಮಾಪ್ತ MLC SL ಭೋಜೇಗೌಡ ಕಣಕ್ಕಿಳಿದಿದ್ರು. ಕಾಂಗ್ರೆಸ್ ಜೆಡಿಎಸ್ ಜೊತೆ ದಲಿತ ಸಂಘಟನೆಗಳು ಒಂದಾಗಿ ನಾಲ್ಕು ಬಾರಿ ಶಾಸಕನಾಗಿ ಐದನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದ ಸಿ.ಟಿ ರವಿಯನ್ನ ಸೋಲಿಸುವ ಮೂಲಕ ಚಿಕ್ಕಮಗಳೂರು ಜಿಲ್ಲೆಯ ಐದು ಕ್ಷೇತ್ರವನ್ನ ಕಾಂಗ್ರೆಸ್ ವಶಪಡಿಸಿಕೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ಐದು ಕ್ಷೇತ್ರದ ಬಿಜೆಪಿ ಸೋಲಿಗೆ ಹೊಣೆ ಹೊತ್ತಿರುವ ಸಿ.ಟಿ ರವಿ ನಮ್ಮ ಸೋಲಿಗೆ ಅವಲೋಕನ ಮಾಡುತ್ತೇವೆ, ಜನರ ತೀರ್ಪಿಗೆ ಗೌರವಿಸುತ್ತೇವೆ. ನನ್ನ ಸೋಲಿಸಲು ಜೆಡಿಎಸ್ ಟಾರ್ಗೆಟ್ ಮಾಡಿ ಕಾಂಗ್ರೆಸ್ ಬೆಂಬಲಿಸಿದ್ದೆ ಕಾರಣ ಎಂದಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:39 am, Mon, 15 May 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ