AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ರವಿ ದುರಹಂಕಾರವೇ ಅವರ ಸೋಲಿಗೆ ಕಾರಣ: HD ತಮ್ಮಯ್ಯ ಕಿಡಿ

ಹಣ ಬಲದ ನಡುವೆ ಇಂದು ಜನ ಬಲ ಗೆದ್ದಿದೆ. ಸಿಟಿ ರವಿ ದುರಹಂಕಾರವೇ ಅವರ ಸೋಲಿಗೆ ಕಾರಣ ಎಂದು ನೂತನ ಶಾಸಕ ಹೆಚ್​ಡಿ ತಮ್ಮಯ್ಯ ಕಿಡಿಕಾರಿದರು.

ಗಂಗಾಧರ​ ಬ. ಸಾಬೋಜಿ
|

Updated on:May 14, 2023 | 8:34 PM

Share

ಬೆಂಗಳೂರು: ಹಣ ಬಲದ ನಡುವೆ ಇಂದು ಜನ ಬಲ ಗೆದ್ದಿದೆ. ಸಿಟಿ ರವಿ (CT Ravi) ದುರಹಂಕಾರವೇ ಅವರ ಸೋಲಿಗೆ ಕಾರಣ ಎಂದು ನೂತನ ಶಾಸಕ ಹೆಚ್​ಡಿ ತಮ್ಮಯ್ಯ ಕಿಡಿಕಾರಿದರು. ಸದಾಶಿವನಗರದ ಡಿಕೆ ಶಿವಕುಮಾರ್​ ನಿವಾಸ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, HD ದೇವೇಗೌಡರು, ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಕೇವಲವಾಗಿ ಮಾತನಾಡುತ್ತಾರೆ. ಅದನ್ನೆಲ್ಲ ನೋಡಿಯೇ ನಾವು ಸಿಟಿ ರವಿಯಿಂದ ದೂರ ಬಂದಿದ್ದು. ಪತ್ನಿ, ಮಕ್ಕಳ ಸಮೇತ ಚುನಾವಣಾ ಪ್ರಚಾರ ಮಾಡಿದ್ದರು. ಸಿ.ಟಿ.ರವಿ ದೊಡ್ಡ ಅಭ್ಯರ್ಥಿಯಾಗಿ ಕಾಣಿಸಲೇ ಇಲ್ಲ ಎಂದು ವಾಗ್ದಾಳಿ ಮಾಡಿದರು.

ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ: ಹೆಚ್​ಡಿ ತಮ್ಮಯ್ಯ

ನಾನು ಕಾಂಗ್ರೆಸ್ ಪಕ್ಷದ ಒಬ್ಬ ನಿಷ್ಠಾವಂತ ಕಾರ್ಯಕರ್ತ. ಯಾವುದೇ ಸಚಿವ ಸ್ಥಾನಕ್ಕೆ ಬೇಡಿಕೆ ಇಡುವುದಿಲ್ಲ. ಆ ಪ್ರಶ್ನೆಯೇ ಉದ್ಭವಿಸುದಿಲ್ಲ. ಸಿಎಂ ಆಯ್ಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡುವಷ್ಟು ದೊಡ್ಡವನು ನಾನಲ್ಲ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದರು.

ಇದನ್ನೂ ಓದಿ: ಈ ಬಾರಿ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದ ನಿರ್ಮಲಾನಂದನಾಥಶ್ರೀ, ನಂಜಾವಧೂತಶ್ರೀ

ಗೆದ್ದ ಅಮಲಿನಲ್ಲಿ ಮಾತಾಡ್ತಿದ್ದಾರೆ: ತಮ್ಮಯ್ಯ ವಿರುದ್ಧ ಸಿಟಿ ರವಿ ಕಿಡಿ 

ಸಿಟಿ ರವಿ ದುರಹಂಕಾರವೇ ಸೋಲಿಗೆ ಕಾರಣ ಎಂಬ ಹೆಚ್​. ಡಿ. ತಮ್ಮಯ್ಯ ಹೇಳಿಕೆಗೆ ಮಾಜಿ ಶಾಸಕ ಸಿ.ಟಿ.ರವಿ  ಕಿಡಿಕಾರಿದ್ದು, ಗೆದ್ದ ಅಮಲಿನಲ್ಲಿ ಮಾತನಾಡುತ್ತಿದ್ದಾರೆ. ಆ ಅಮಲು ಎಷ್ಟು ದಿನ ಇರುತ್ತೆ, ಒಂದಲ್ಲ ಒಂದು ದಿನ ಇಳಿಯಲೇಬೇಕು. ಅವರು ನನ್ನ ಬಳಿಯೇ ಬಂದು ಸಹಿ ಮಾಡಿಸಿಕೊಂಡು ಹೋಗುತ್ತಿದ್ದರು. ನನ್ನ ಬಳಿ ಸಹಿ ಮಾಡಿಸಿಕೊಂಡು ಹೋಗುತ್ತಿದ್ದನ್ನು ಮರೆಯಬಾರದು ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಭಟ್ಕಳದಲ್ಲಿ ಕಾಂಗ್ರೆಸ್ ಗೆದ್ದ ಬೆನ್ನಲ್ಲೇ ಬಿಜೆಪಿ ಮುಖಂಡನ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು

ನಾನು ಯಾರ ಮೇಲೂ ಬೊಟ್ಟು ಮಾಡುವುದಿಲ್ಲ: ಸಿ.ಟಿ.ರವಿ

ಹೊಂದಾಣಿಕೆ ಮಾಡಿಕೊಂಡು ರಾಜಕೀಯ ಮಾಡಲು ಬರಲ್ಲ. ಜವಾಬ್ದಾರಿ ಸಿಕ್ಕಿದ ಮೇಲೆ ಕ್ಷೇತ್ರದ ಓಡಾಟ ಕಡಿಮೆ ಆಯ್ತು. ನಾನು ಯಾರ ಮೇಲೂ ಬೊಟ್ಟು ಮಾಡುವುದಿಲ್ಲ. ನಿರಂತರವಾಗಿ ಗೆಲ್ಲುವುದೊಂದೇ ನಾಯಕನ ಲಕ್ಷಣ ಅಲ್ಲ. ನನಗೆ ಸಿದ್ಧಾಂತ, ಪಕ್ಷ ಮುಖ್ಯ, ವೈಯಕ್ತಿಕ ಹಿತಾಸಕ್ತಿ ಅಲ್ಲ. ಸೋಲನ್ನು ನಾನು ವಿನಮ್ರವಾಗಿ ತೆಗೆದುಕೊಂಡಿದ್ದೇನೆ. ಸೋಲಿಗೆ ಅನೇಕ ಕಾರಣವಿದೆ, ಪಕ್ಷದ ಒಳಗಡೆ ಮಾತಾಡುತ್ತೇವೆ ಎಂದು ಹೇಳಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:31 pm, Sun, 14 May 23

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್