AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ರವಿ ದುರಹಂಕಾರವೇ ಅವರ ಸೋಲಿಗೆ ಕಾರಣ: HD ತಮ್ಮಯ್ಯ ಕಿಡಿ

ಹಣ ಬಲದ ನಡುವೆ ಇಂದು ಜನ ಬಲ ಗೆದ್ದಿದೆ. ಸಿಟಿ ರವಿ ದುರಹಂಕಾರವೇ ಅವರ ಸೋಲಿಗೆ ಕಾರಣ ಎಂದು ನೂತನ ಶಾಸಕ ಹೆಚ್​ಡಿ ತಮ್ಮಯ್ಯ ಕಿಡಿಕಾರಿದರು.

ಗಂಗಾಧರ​ ಬ. ಸಾಬೋಜಿ
|

Updated on:May 14, 2023 | 8:34 PM

Share

ಬೆಂಗಳೂರು: ಹಣ ಬಲದ ನಡುವೆ ಇಂದು ಜನ ಬಲ ಗೆದ್ದಿದೆ. ಸಿಟಿ ರವಿ (CT Ravi) ದುರಹಂಕಾರವೇ ಅವರ ಸೋಲಿಗೆ ಕಾರಣ ಎಂದು ನೂತನ ಶಾಸಕ ಹೆಚ್​ಡಿ ತಮ್ಮಯ್ಯ ಕಿಡಿಕಾರಿದರು. ಸದಾಶಿವನಗರದ ಡಿಕೆ ಶಿವಕುಮಾರ್​ ನಿವಾಸ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, HD ದೇವೇಗೌಡರು, ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಕೇವಲವಾಗಿ ಮಾತನಾಡುತ್ತಾರೆ. ಅದನ್ನೆಲ್ಲ ನೋಡಿಯೇ ನಾವು ಸಿಟಿ ರವಿಯಿಂದ ದೂರ ಬಂದಿದ್ದು. ಪತ್ನಿ, ಮಕ್ಕಳ ಸಮೇತ ಚುನಾವಣಾ ಪ್ರಚಾರ ಮಾಡಿದ್ದರು. ಸಿ.ಟಿ.ರವಿ ದೊಡ್ಡ ಅಭ್ಯರ್ಥಿಯಾಗಿ ಕಾಣಿಸಲೇ ಇಲ್ಲ ಎಂದು ವಾಗ್ದಾಳಿ ಮಾಡಿದರು.

ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ: ಹೆಚ್​ಡಿ ತಮ್ಮಯ್ಯ

ನಾನು ಕಾಂಗ್ರೆಸ್ ಪಕ್ಷದ ಒಬ್ಬ ನಿಷ್ಠಾವಂತ ಕಾರ್ಯಕರ್ತ. ಯಾವುದೇ ಸಚಿವ ಸ್ಥಾನಕ್ಕೆ ಬೇಡಿಕೆ ಇಡುವುದಿಲ್ಲ. ಆ ಪ್ರಶ್ನೆಯೇ ಉದ್ಭವಿಸುದಿಲ್ಲ. ಸಿಎಂ ಆಯ್ಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡುವಷ್ಟು ದೊಡ್ಡವನು ನಾನಲ್ಲ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದರು.

ಇದನ್ನೂ ಓದಿ: ಈ ಬಾರಿ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದ ನಿರ್ಮಲಾನಂದನಾಥಶ್ರೀ, ನಂಜಾವಧೂತಶ್ರೀ

ಗೆದ್ದ ಅಮಲಿನಲ್ಲಿ ಮಾತಾಡ್ತಿದ್ದಾರೆ: ತಮ್ಮಯ್ಯ ವಿರುದ್ಧ ಸಿಟಿ ರವಿ ಕಿಡಿ 

ಸಿಟಿ ರವಿ ದುರಹಂಕಾರವೇ ಸೋಲಿಗೆ ಕಾರಣ ಎಂಬ ಹೆಚ್​. ಡಿ. ತಮ್ಮಯ್ಯ ಹೇಳಿಕೆಗೆ ಮಾಜಿ ಶಾಸಕ ಸಿ.ಟಿ.ರವಿ  ಕಿಡಿಕಾರಿದ್ದು, ಗೆದ್ದ ಅಮಲಿನಲ್ಲಿ ಮಾತನಾಡುತ್ತಿದ್ದಾರೆ. ಆ ಅಮಲು ಎಷ್ಟು ದಿನ ಇರುತ್ತೆ, ಒಂದಲ್ಲ ಒಂದು ದಿನ ಇಳಿಯಲೇಬೇಕು. ಅವರು ನನ್ನ ಬಳಿಯೇ ಬಂದು ಸಹಿ ಮಾಡಿಸಿಕೊಂಡು ಹೋಗುತ್ತಿದ್ದರು. ನನ್ನ ಬಳಿ ಸಹಿ ಮಾಡಿಸಿಕೊಂಡು ಹೋಗುತ್ತಿದ್ದನ್ನು ಮರೆಯಬಾರದು ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಭಟ್ಕಳದಲ್ಲಿ ಕಾಂಗ್ರೆಸ್ ಗೆದ್ದ ಬೆನ್ನಲ್ಲೇ ಬಿಜೆಪಿ ಮುಖಂಡನ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು

ನಾನು ಯಾರ ಮೇಲೂ ಬೊಟ್ಟು ಮಾಡುವುದಿಲ್ಲ: ಸಿ.ಟಿ.ರವಿ

ಹೊಂದಾಣಿಕೆ ಮಾಡಿಕೊಂಡು ರಾಜಕೀಯ ಮಾಡಲು ಬರಲ್ಲ. ಜವಾಬ್ದಾರಿ ಸಿಕ್ಕಿದ ಮೇಲೆ ಕ್ಷೇತ್ರದ ಓಡಾಟ ಕಡಿಮೆ ಆಯ್ತು. ನಾನು ಯಾರ ಮೇಲೂ ಬೊಟ್ಟು ಮಾಡುವುದಿಲ್ಲ. ನಿರಂತರವಾಗಿ ಗೆಲ್ಲುವುದೊಂದೇ ನಾಯಕನ ಲಕ್ಷಣ ಅಲ್ಲ. ನನಗೆ ಸಿದ್ಧಾಂತ, ಪಕ್ಷ ಮುಖ್ಯ, ವೈಯಕ್ತಿಕ ಹಿತಾಸಕ್ತಿ ಅಲ್ಲ. ಸೋಲನ್ನು ನಾನು ವಿನಮ್ರವಾಗಿ ತೆಗೆದುಕೊಂಡಿದ್ದೇನೆ. ಸೋಲಿಗೆ ಅನೇಕ ಕಾರಣವಿದೆ, ಪಕ್ಷದ ಒಳಗಡೆ ಮಾತಾಡುತ್ತೇವೆ ಎಂದು ಹೇಳಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:31 pm, Sun, 14 May 23

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ