AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರು ಎಣಿಕೆ ಮಾಡಿದರಾದರೂ ಬಿಜೆಪಿ ಅಭ್ಯರ್ಥಿ ಕೋರ್ಟ್​ ಮೊರೆ: ಯಾವ ಕ್ಷೇತ್ರ? ಏನಾಯ್ತು? ಈ ಸ್ಟೋರಿ ನೋಡಿ

ರಾಜ್ಯ ವಿಧಾನಸಭೆ ಚುನಾವಣೆಯ ಮತಎಣಿಕೆ ಫಲಿತಾಂಶ ನಿನ್ನೆ(ಮೇ.13) ಹೊರಬಿದ್ದಿತ್ತು. ಆದರೆ, ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಫಲಿತಾಂಶ ಮಾತ್ರ ಬಹಳ ಕುತೂಹಲ ಕೆರಳಿಸುವಂತಿತ್ತು. ಜೊತೆಗೆ ಕೆಲವೊಂದು ವಿವಾದ ಹಾಗೂ ಗಲಾಟೆಗೂ ಕಾರಣವಾಯಿತು. ಈ ಕುರಿತು ಇಲ್ಲಿದೆ ನೋಡಿ.

ಮರು ಎಣಿಕೆ ಮಾಡಿದರಾದರೂ ಬಿಜೆಪಿ ಅಭ್ಯರ್ಥಿ ಕೋರ್ಟ್​ ಮೊರೆ: ಯಾವ ಕ್ಷೇತ್ರ? ಏನಾಯ್ತು? ಈ ಸ್ಟೋರಿ ನೋಡಿ
ಮತ ಎಣಿಕೆ ಫಲಿತಾಂಶ ಹಿನ್ನಲೆ ಬೆಂಬಲಿಗರ ಪ್ರತಿಭಟನೆ
ಕಿರಣ್ ಹನುಮಂತ್​ ಮಾದಾರ್
|

Updated on: May 14, 2023 | 8:01 AM

Share

ಕೋಲಾರ: ಜಿಲ್ಲೆಯ ಮಾಲೂರು(Malur) ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ನಿನ್ನೆ(ಮೇ.13) ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯುತ್ತಿತ್ತು. ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಒಂದು ರೀತಿಯಾದರೆ ಮಾಲೂರು ಕ್ಷೇತ್ರದ ಮತಎಣಿಕೆ ಮಾತ್ರ ಇಡೀ ಜಿಲ್ಲೆಯ ಹಾಗೂ ರಾಜ್ಯದ ಜನರಿಗೆ ಕುತೂಹಲಕ್ಕೆ ಕಾರಣವಾಗಿತ್ತು. ಕಾರಣ ಮಾಲೂರು ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ನಂಜೇಗೌಡ(nanjegowda), ಬಿಜೆಪಿ ಅಭ್ಯರ್ಥಿ ಕೆ.ಎಸ್ ಮಂಜುನಾಥಗೌಡ(K S Manjunath Gowda) ಹಾಗೂ ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ್​ ಕುಮಾರ್​(Hoodi Vijaykumar) ನಡುವೆ ಜಿದ್ದಾ ಜಿದ್ದಿ ಪೈಪೋಟಿ ಏರ್ಪಟ್ಟಿತ್ತು. ಆರಂಭದಲ್ಲಿ ​ಕಾಂಗ್ರೆಸ್ ಅಭ್ಯರ್ಥಿ, ನಂತರ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ನಂತರ ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ್​ ಕುಮಾರ್​ ಒಬ್ಬರಾದ ಮೇಲೆ ಒಬ್ಬರು ಮುನ್ನಡೆ ಸಾಧಿಸಿಕೊಂಡು ಬಂದರು. ಆದರೆ, ಒಂದು ಹಂತದಲ್ಲಿ ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ್​ ಕುಮಾರ್​ 1500 ದಿಂದ 2000 ಮತಗಳ ಅಂತರದಲ್ಲಿ ಸುಮಾರು ಏಳೆಂಟು ಸುತ್ತು ಮುನ್ನಡೆ ಸಾಧಿಸಿಕೊಂಡು ಬಂದರು.

ಆದರೆ ಕೊನೆ ಎರಡು ಸುತ್ತುಗಳಲ್ಲಿ ಹೂಡಿ ವಿಜಯ್​ಕುಮಾರ್​ಗೆ ಕೊಂಚ ಹಿನ್ನಡೆಯಾಗಿ ಕಾಂಗ್ರೆಸ್​ ಅಭ್ಯರ್ಥಿ ಹಾಗೂ ಬಿಜೆಪಿ ಅಭ್ಯರ್ಥಿಗಳ ನಡುವೆ ಕೇವಲ ನೂರು ಇನ್ನೂರು ಮತಗಳ ಅಂತರದಲ್ಲಿ ಹಗ್ಗ ಜಗ್ಗಾಟ ಶುರುವಾಗಿತ್ತು. ಕೊನೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಕೇವಲ 248 ಮತಗಳ ಅಂತರದಲ್ಲಿ ಜಯಗಳಿಸುವ ಮೂಲಕ ಕುತೂಹಲಕ್ಕೆ ತೆರೆ ಎಳೆದಿತ್ತು. ಆದರೆ ಸ್ಥಳಕ್ಕೆ ಬಂದ ಬಿಜೆಪಿ ಅಭ್ಯರ್ಥಿ ಕೆ.ಎಸ್​.ಮಂಜುನಾಥಗೌಡ ಗೆಲುವಿನ ವಿರುದ್ದ ಪ್ರತಿಭಟಿಸಿ ಮರು ಎಣಿಕೆಗೆ ಆಗ್ರಹಿಸಿದರು. ಈ ವೇಳೆ ಮರುಎಣಿಕೆ ಮಾಡಿದರಾದರೂ ಬಿಜೆಪಿ ಅಭ್ಯರ್ಥಿ ಕೋರ್ಟ್​ನ ಮೊರೆ ಹೋಗುವುದಾಗಿ ಹೇಳಿದ್ರು.

ಇದನ್ನೂ ಓದಿ:Karnataka Assembly Election: ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಅಪರಾಧಗಳದ್ದೇ ಸದ್ದು; ಒಬ್ಬರ ಮೇಲೊಬ್ಬರು ಆರೋಪಗಳ ಸುರಿಮಳೆ

ಬಿಜೆಪಿ ಅಭ್ಯರ್ಥಿ ಮತಎಣಿಕೆ ಕೇಂದ್ರಕ್ಕೆ ಆಗಮಿಸುತ್ತಿದ್ದಂತೆ ಕಾಂಗ್ರೆಸ್​ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ತಳ್ಳಾಟ ನೂಕಾಟ ಶುರುವಾಯಿತು. ಈ ವೇಳೆ ಅಲ್ಲಿದ್ದ ಕಾರ್ಯಕರ್ತರನ್ನ ತಡೆಯಲು ಹೋದ ಪೊಲೀಸರು ಹಾಗೂ ಬಿಎಸ್​ಎಫ್​ ಸಿಬ್ಬಂದಿಗಳು ಹರಸಾಹಸ ಪಡಬೇಕಾಯಿತು. ನಂತರ ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ವೆಂಕಟರಾಜಾ ಹಾಗೂ ಎಸ್ಪಿ ನಾರಾಯಣ್​ ಪರಿಸ್ಥಿತಿಯನ್ನು ನಿಯಂತ್ರಿಸಿ, ಎರಡು ಪಕ್ಷಗಳ ಅಭ್ಯರ್ಥಿಗಳನ್ನು ಕೂರಿಸಿ, ಮಾತನಾಡಿಸಲು ಮುಂದಾದರಾದರೂ ಅಷ್ಟೊತ್ತಿಗೆ ಸ್ಥಳಕ್ಕೆ ಬಂದ ಸಂಸದ ಮುನಿಸ್ವಾಮಿ ಹಾಗೂ ಕಾಂಗ್ರೆಸ್​ನ ವಿಧಾನಪರಿಷತ್ ಸದಸ್ಯ ನಜೀರ್​ ಅಹಮದ್, ಅನಿಲ್​ ಕುಮಾರ್​ ನಡುವೆ ಮಾತಿನ ಚಕಮಕಿ ನಡೆಯಿತು.

ಈ ವೇಳೆ ಎಲ್ಲರನ್ನೂ ಹೊರಕಳಿಸಿ ಕೇವಲ ಅಭ್ಯರ್ಥಿಗಳ ಸಮ್ಮುಖದಲ್ಲಿ ಉದ್ಬವವಾಗಿದ್ದ ಗೊಂದಲ ನಿವಾರಣೆಗೆ ಅವರು ಹೇಳುವ ಐದು ಬೂತ್​ಗಳ ವಿವಿಪ್ಯಾಟ್​ಗಳನ್ನು ಎಣಿಕೆ ಮಾಡಿದರು. ಸುಮಾರು ಎರಡು ಗಂಟೆಗೂ ಅಧಿಕಕಾಲ ವಿವಿಪ್ಯಾಟ್​ಗಳನ್ನು ಅಧಿಕಾರಿಗಳು ಹಾಗೂ ಅಭ್ಯರ್ಥಿಗಳ ಸಮ್ಮುಖದಲ್ಲಿ ಎಣಿಸಲಾಯಿತು. ಅಷ್ಟಕ್ಕೂ ಸಮಾಧಾನಗೊಳ್ಳದ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಕೋರ್ಟ್​ನ ಮೊರೆ ಹೋಗುವುದಾಗಿ ಹೇಳಿದ್ರು. ಆದರೆ ಇದಕ್ಕೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಅವರು ಎಲ್ಲಿಗೆ ಬೇಕಾದ್ರು, ಹೋಗಲಿ. ಇದು ಜನರು ಕೊಟ್ಟಿರುವ ತೀರ್ಪು ಎಂದರು. ಅಲ್ಲದೆ ಈ ಬಾರಿ ಕಾಂಗ್ರೆಸ್​ ಸರ್ಕಾರ ಬಂದಿದ್ದು, ನನ್ನ ಕನಸಿನ ಮಾಲೂರು ನಿರ್ಮಾಣ ಮಾಡುವುದಾಗಿ ಹೇಳಿದ್ರು. ಮಾಲೂರು ಕ್ಷೇತ್ರ ಹಲವು ಕುತೂಹಲ ಹಾಗೂ ರೋಚಕತೆಗೆ ದಾರಿ ಮಾಡಿಕೊಟ್ಟಿದ್ದ ಮಾಲೂರು ಕೊನೆಗೆ ಗೊಂದಲಗಳ ಮೂಲಕವೇ ಕೊನೆಯಾಗಿದ್ದು, ಮುಂದೆ ಈ ವಿವಾದ ಎಲ್ಲಿಯವರೆಗೆ ಹೋಗುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.

ವರದಿ: ರಾಜೇಂದ್ರಸಿಂಹ ಟಿವಿ9 ಕೋಲಾರ

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ