Karnataka Assembly Elections 2023: ಬೆಂಗಳೂರಿನಲ್ಲಿ ಈವರೆಗೂ ಸೀಜ್‌ ಆದ ವಸ್ತುಗಳ ಮೌಲ್ಯ ಇಷ್ಟೊಂದಾ? ಅಬ್ಬಬ್ಬಾ..!

ಅಕ್ರಮವಾಗಿ ಸಾಗಿಸಲಾಗುತ್ತಿರುವ, ನಗದು, ಮದ್ಯ, ಮಾದಕ ದ್ರವ್ಯಗಳು, ಆಭರಣ, ಉಡುಗೊರೆ ಸಾಮಗ್ರಿಗಳು ಮತ್ತು ವಾಹನಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ ಹದ್ದಿನಕಣ್ಣಿಟ್ಟಿರುವ ಅಧಿಕಾರಿಗಳು ಏಪ್ರಿಲ್ 20ರ ವರೆಗೆ 2894 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

Karnataka Assembly Elections 2023: ಬೆಂಗಳೂರಿನಲ್ಲಿ ಈವರೆಗೂ ಸೀಜ್‌ ಆದ ವಸ್ತುಗಳ ಮೌಲ್ಯ ಇಷ್ಟೊಂದಾ? ಅಬ್ಬಬ್ಬಾ..!
ಬೆಂಗಳೂರಿನಲ್ಲಿ ಕೋಟಿ ಕೋಟಿ ಜಪ್ರಿ
Follow us
|

Updated on:Apr 23, 2023 | 12:50 PM

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಮತ್ತೊಂದೆಡೆ ನೀತಿ ಸಂಹಿತೆ ಜಾರಿ(Code Of Conduct) ಆಗಿದ್ದು ಪೊಲೀಸರು, ಚುನಾವಣಾಧಿಕಾರಿಗಳು ಫುಲ್ ಅಲರ್ಟ್ ಆಗಿದ್ದಾರೆ. ಅಕ್ರಮವಾಗಿ ಸಾಗಿಸಲಾಗುತ್ತಿರುವ, ನಗದು, ಮದ್ಯ, ಮಾದಕ ದ್ರವ್ಯಗಳು, ಆಭರಣ, ಉಡುಗೊರೆ ಸಾಮಗ್ರಿಗಳು ಮತ್ತು ವಾಹನಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ ಹದ್ದಿನಕಣ್ಣಿಟ್ಟಿರುವ ಅಧಿಕಾರಿಗಳು ಏಪ್ರಿಲ್ 20ರ ವರೆಗೆ 2894 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. 76,30,86,056 ಪ್ರಮಾಣ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಬೆಂಗಳೂರಿನಲ್ಲಿ ಸೀಜ್‌ ಆದ ವಸ್ತುಗಳ ವಿವರ

ಚುನಾವಣೆಯ ಸಲುವಾಗಿ ಅಕ್ರಮವಾಗಿ ಸಾಗಾಟ‌ ಮಾಡುತ್ತಿದ್ದ ಹಣ ಮತ್ತು ಇನ್ನಿತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. 2023ರ ಏಪ್ರಿಲ್ 23ರ ವರೆಗೆ ಬೆಂಗಳೂರಿನಲ್ಲಿ ಸೀಜ್ ಮಾಡಲಾದ ವಸ್ತುಗಳು ಮತ್ತು ಅವುಗಳ ವಿವರವನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದೆ.

  1. ನಗದು -11 ಕೋಟಿ 35 ಲಕ್ಷ 88 ಸಾವಿರದ 541 ರೂಪಾಯಿ
  2. ಮಧ್ಯ – 25 ಕೋಟಿ 91 ಲಕ್ಷದ 58 ಸಾವಿರದ 127 ರೂ ಮೊತ್ತದ 595684 ಲೀಟರ್ ವಶಕ್ಕೆ
  3. ಡ್ರಗ್ಸ್ – 10 ಕೋಟಿ 26 ಲಕ್ಷದ 86 ಸಾವಿರದ 663 ಮೌಲ್ಯದ 377 ಕೆ.ಜಿ.
  4. ಚಿನ್ನ ಬೆಳ್ಳಿ – 17ಕೋಟಿ 09 ಲಕ್ಷದ 97 ಸಾವಿರದ 093 ರೂ ಮೌಲ್ಯದ 291 ಕೆಜಿ ವಶಕ್ಕೆ ಪಡೆಯಲಾಗಿದೆ
  5. ಗಿಫ್ಟ್ ಗಳು -5 ಕೋಟಿ74 ಲಕ್ಷದ 14 ಸಾವಿರದ 592 ರೂ ಮೌಲ್ಯದ 49937 ವಸ್ತುಗಳು ವಶಕ್ಕೆ
  6. ವಾಹನಗಳು – 5ಕೋಟಿ 88ಲಕ್ಷದ 81 ಸಾವಿರದ 040 ರೂಗಳ 365 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
Election seize

ಬೆಂಗಳೂರಿನಲ್ಲಿ ಸೀಜ್‌ ಆದ ವಸ್ತುಗಳ ವಿವರ

ಇದನ್ನೂ ಓದಿ: ಶಾಸಕಿ ಸೌಮ್ಯಾರೆಡ್ಡಿ ಕಾರು ಸೀಜ್​ ಪ್ರಕರಣ; ಕಾರು ಚಾಲಕನ ವಿರುದ್ದ FIR ದಾಖಲು

ಇದುವರೆಗೆ ನಗರದಲ್ಲಿ ಚುನಾವಣೆಯ ಸಲುವಾಗಿ ಒಟ್ಟು 2894 ಎಫ್ಆರ್ ದಾಖಲಾಗಿದ್ದು 76,30,86,056 ಪ್ರಮಾಣದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಈ ವರೆಗೂ ಒಟ್ಟು ಬೆಂಗಳೂರು ನಗರದಲ್ಲಿ 743 ದೂರುಗಳು ಚುನಾವಣೆಯ ಸಂಬಂಧ ದಾಖಲಾಗಿದೆ. ಅದರಲ್ಲಿ 119 ಸುಳ್ಳು ದೂರುಗಳು, 622 ಪ್ರಕರಣದಲ್ಲಿ ಕ್ರಮಕೈಗೊಳ್ಳಲಾಗಿದೆ. ಉಳಿದ 2 ಪ್ರಕರಣದಲ್ಲಿ ತನಿಖೆ ಮುಂದುವರೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:50 pm, Sun, 23 April 23

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು