AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಅನಿಲ್ ಬೆನಕೆ ಬೆಂಬಲಿಗರಿಂದ ಮುತ್ತಿಗೆ: ಧರ್ಮೇಂದ್ರ ಪ್ರಧಾನ್ ನೇತೃತ್ವದಲ್ಲಿ ನಡೆಯಬೇಕಿದ್ದ ಸಭೆ ರದ್ದು

ಟಿಕೆಟ್ ವಂಚಿತ ಬಿಜೆಪಿ ಶಾಸಕರು, ಆಕಾಂಕ್ಷಿಗಳೊಂದಿಗೆ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್​ ನಡೆಸಬೇಕಿದ್ದ ಸಭೆ ರದ್ದು ಮಾಡಲಾಗಿದೆ. ಸಭೆ ನಡೆಯಬೇಕಿದ್ದ ಖಾಸಗಿ ಹೋಟೆಲ್‌ಗೆ ಶಾಸಕ‌ ಅನಿಲ್ ಬೆ‌ನಕೆ ಬೆಂಬಲಿಗರಿಂದ ಮುತ್ತಿಗೆ ಹಾಕಲಾಗಿದೆ.

ಶಾಸಕ ಅನಿಲ್ ಬೆನಕೆ ಬೆಂಬಲಿಗರಿಂದ ಮುತ್ತಿಗೆ: ಧರ್ಮೇಂದ್ರ ಪ್ರಧಾನ್ ನೇತೃತ್ವದಲ್ಲಿ ನಡೆಯಬೇಕಿದ್ದ ಸಭೆ ರದ್ದು
ಧರ್ಮೇಂದ್ರ ಪ್ರಧಾನ್Image Credit source: digitallearning.eletsonline.com
ಗಂಗಾಧರ​ ಬ. ಸಾಬೋಜಿ
|

Updated on:Apr 14, 2023 | 7:13 PM

Share

ಬೆಳಗಾವಿ: ಟಿಕೆಟ್ ವಂಚಿತ ಬಿಜೆಪಿ ಶಾಸಕರು, ಆಕಾಂಕ್ಷಿಗಳೊಂದಿಗೆ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ (Dharmendra Pradhan)​ ನಡೆಸಬೇಕಿದ್ದ ಸಭೆ ರದ್ದು ಮಾಡಲಾಗಿದೆ. ಸಭೆ ನಡೆಯಬೇಕಿದ್ದ ಖಾಸಗಿ ಹೋಟೆಲ್‌ಗೆ ಶಾಸಕ‌ ಅನಿಲ್ ಬೆ‌ನಕೆ (MLA Anil Benake) ಬೆಂಬಲಿಗರಿಂದ ಮುತ್ತಿಗೆ ಹಾಕಲಾಗಿದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ರಾಜ್ಯಸಭಾ ಈರಣ್ಣಾ ಕಡಾಡಿಗೆ ತರಾಟೆ ತೆಗೆದುಕೊಂಡಿದ್ದು, ಅನಿಲ್ ಬೆನಕೆ ಬೆಂಬಲಿಗರು ಹಾಗೂ ನಿರ್ಮಲ ಕುಮಾರ್ ಸುರಾನಾ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್ ಬದಲಾವಣೆಗೆ ಬೆನಕೆ ಬೆಂಬಲಿಗರು ಪಟ್ಟು ಹಿಡಿದರು. ಕಾರ್ಯಕರ್ತರ ಮನವೊಲಿಸಲು ಸುರಾನಾ, ಈರಣ್ಣಾ ಕಡಾಡಿ ಹರಸಾಹಸ ಪಟ್ಟಿದ್ದು, ಹೈಕಮಾಂಡ್ ನಾಯಕರು ಸೂಕ್ತ ತೀರ್ಮಾನ ಮಾಡುತ್ತಾರೆಂದು ಹೇಳಿ ತೆರಳಿದ್ದಾರೆ.

ಬಿ-ಫಾರ್ಮ್‌ ಪಡೆದ ನಾಯಕರು ಸಭೆಗೆ ಬರುವಂತೆ ಸೂಚನೆ 

ವಿಶೇಷವೆಂದರೆ, ಈಗಾಗಲೇ ಬಿ-ಫಾರ್ಮ್‌ ಪಡೆದ ನಾಯಕರು ಅದನ್ನು ತೆಗೆದುಕೊಂಡೇ ಸಭೆಗೆ ಬರುವಂತೆ ಸೂಚಿಸಲಾಗಿದೆ. ರಾಮದುರ್ಗ ಕ್ಷೇತ್ರದ ಹಾಲಿ ಶಾಸಕ ಮಹದೇವಪ್ಪ ಯಾದವಾಡ ಮತ್ತು ಬೆಳಗಾವಿ ಉತ್ತರ ಕ್ಷೇತ್ರದ ಅನಿಲ್ ಬೆನಕೆ ಟಿಕೆಟ್ ದೊರೆಯದಿರುವುದಕ್ಕೆ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. 2-3 ದಿನಗಳ ಕಾಲ ಕಾಯುವುದಾಗಿಯೂ ಪಕ್ಷವು ತಮ್ಮ ಉಮೇದುವಾರಿಕೆಯನ್ನು ಮರುಪರಿಶೀಲಿಸದಿದ್ದರೆ ಸೋಮವಾರ ರಾಮದುರ್ಗ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವುದಾಗಿ ಯಾದವಾಡ ಶುಕ್ರವಾರ ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಬಿಜೆಪಿ ಬಂಡಾಯ ಶಮನಕ್ಕೆ ಹೈಕಮಾಂಡ್ ಎಂಟ್ರಿ; ಅತೃಪ್ತರ ಜತೆ ಧರ್ಮೇಂದ್ರ ಪ್ರಧಾನ್ ಸಭೆ

ಜೆಡಿಎಸ್ ಮತ್ತು ಕಾಂಗ್ರೆಸ್‌ನಿಂದ ತನಗೆ ಆಫರ್‌

ಏತನ್ಮಧ್ಯೆ, ಜೆಡಿಎಸ್ ಮತ್ತು ಕಾಂಗ್ರೆಸ್‌ನಿಂದ ತನಗೆ ಆಫರ್‌ಗಳಿವೆ ಎಂದು ಬೆನಕೆ ಒಪ್ಪಿಕೊಂಡಿದ್ದಾರೆ ಮತ್ತು ಪ್ರಧಾನ್ ಅವರನ್ನು ಭೇಟಿಯಾದ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ. ಅಥಣಿ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಇಂದು ಕಾಂಗ್ರೆಸ್‌ ಸೇರುವುದಾಗಿ ಘೋಷಿಸಿದ್ದಾರೆ. ಅಥಣಿಯಲ್ಲಿ ಮಹೇಶ ಕುಮಠಳ್ಳಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಇದನ್ನೂ ಓದಿ: ಬಿಜೆಪಿ, ಜೆಡಿಎಸ್​ನ 25 ನಾಯಕರು ಕಾಂಗ್ರೆಸ್​ಗೆ ಬರುತ್ತಾರೆ: ಡಿಕೆ ಶಿವಕುಮಾರ್

ಈ ಮೂರು ಸ್ಥಾನಗಳ ಹೊರತಾಗಿ ಬೈಲಹೊಂಗಲದಲ್ಲಿಯೂ ಬಂಡಾಯ ಎದ್ದಿದ್ದು, ಯಡಿಯೂರಪ್ಪನವರ ನಿಷ್ಠಾವಂತ ಡಾ. ವಿಶ್ವನಾಥ ಪಾಟೀಲ ಅವರಿಗೆ ಪಕ್ಷ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:13 pm, Fri, 14 April 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ