AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಹೆಸರು ಬಳಸಿ ಚುನಾವಣೆ ಭಾಷಣ ಮಾಡಿದ್ದ ಬಿಜೆಪಿ ಅಭ್ಯರ್ಥಿಗೆ ಸಂಕಷ್ಟ

ವಿಧಾನಸಭೆ ಚುನಾವಣೆಗೆ ಆರು ದಿನಗಳು ಬಾಕಿ ಉಳಿದಿದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿವೆ. ಅದರಂತೆ ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿದ್ದ ಮೊಳಕಾಲ್ಮೂರು ಬಿಜೆಪಿ ಅಭ್ಯರ್ಥಿ ಎಸ್​.ತಿಪ್ಪೇಸ್ವಾಮಿ ವಿರುದ್ಧ ಇದೀಗ ಜಾತಿ ಹೆಸರು ಬಳಸಿ ಭಾಷಣ ಮಾಡಿದ ಹಿನ್ನಲೆ ಚುನಾವಣಾಧಿಕಾರಿಯಿಂದ ದೂರು ದಾಖಲಾಗಿದೆ.

ಜಾತಿ ಹೆಸರು ಬಳಸಿ ಚುನಾವಣೆ ಭಾಷಣ ಮಾಡಿದ್ದ ಬಿಜೆಪಿ ಅಭ್ಯರ್ಥಿಗೆ ಸಂಕಷ್ಟ
ಬಿಜೆಪಿ ಅಭ್ಯರ್ಥಿ ಎಸ್​.ತಿಪ್ಪೇಸ್ವಾಮಿ
ಕಿರಣ್ ಹನುಮಂತ್​ ಮಾದಾರ್
|

Updated on:May 04, 2023 | 9:20 AM

Share

ಚಿತ್ರದುರ್ಗ: ವಿಧಾನಸಭೆ ಚುನಾವಣೆ(Karnataka Assembly Election 2023)ಗೆ ಆರು ದಿನಗಳು ಬಾಕಿ ಉಳಿದಿದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿವೆ. ಅದರಂತೆ ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿದ್ದ ಮೊಳಕಾಲ್ಮೂರು (Molakalmuru) ಬಿಜೆಪಿ ಅಭ್ಯರ್ಥಿ ಎಸ್​.ತಿಪ್ಪೇಸ್ವಾಮಿ(S. Thippeswamy) ವಿರುದ್ಧ ಇದೀಗ ಜಾತಿ ಹೆಸರು ಬಳಸಿ ಭಾಷಣ ಮಾಡಿದ ಹಿನ್ನಲೆ ಚುನಾವಣಾಧಿಕಾರಿಯಿಂದ ದೂರು ದಾಖಲಾಗಿದೆ. ಹೌದು ಏಪ್ರಿಲ್ 26ರಂದು ತೆಂಗಿನ ಗೌರಸಮುದ್ರದಲ್ಲಿ ಭಾಷಣ ಮಾಡಿದ್ದ ಎಸ್​.ತಿಪ್ಪೇಸ್ವಾಮಿ, ಜಾತಿಯ ಹೆಸರು ಬಳಸಿ ಭಾಷಣ ಮಾಡಿದ್ದ ಆರೋಪದ ಮೇಲೆ, ಚುನಾವಣಾಧಿಕಾರಿ ನೀತಿಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ಮಾಹಿತಿ ಕಲೆಹಾಕಿ ದೂರು ದಾಖಲಿಸಿರುವ ಚುನಾವಣಾಧಿಕಾರಿ

ಹೌದು ಏಪ್ರಿಲ್ 26ರಂದು ತೆಂಗಿನ ಗೌರಸಮುದ್ರದಲ್ಲಿ ಭಾಷಣ ಮಾಡಿದ್ದ ತಿಪ್ಪೇಸ್ವಾಮಿ ‘ನಾನು ಮ್ಯಾಸನಾಯಕ, ಕಾಂಗ್ರೆಸ್​​ ಅಭ್ಯರ್ಥಿ ಊರ ನಾಯಕ, ನಮಗೂ ಅವರಿಗೂ ಸಂಬಂಧ ಇಲ್ಲ ಎಂದು ತಿಪ್ಪೇಸ್ವಾಮಿ ಭಾಷಣ ಮಾಡಿದ್ದರು. ಇದರ ಮಾಹಿತಿ ಕಲೆ ಹಾಕಿದ್ದ ಚುನಾವಣಾಧಿಕಾರಿ ಫ್ಲೈಯಿಂಗ್ ಸ್ಕ್ವಾಡ್ ತಿಪ್ಪೇಸ್ವಾಮಿ, ಇದೀಗ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ:ಈ ಕ್ಷೇತ್ರದಲ್ಲಿ ಶುರುವಾಗಿದೆ ದೇಣಿಗೆ ರಾಜಕೀಯ; ಜೆಡಿಎಸ್​ ಅಭ್ಯರ್ಥಿಗೆ ಹೋದಲೆಲ್ಲ ಹರಿದು ಬರ್ತಿದೆ ಹಣ

ಅವಹೇಳನಕಾರಿ ಹೇಳಿಕೆ; ಬಸನಗೌಡ ಪಾಟೀಲ್‌ ಯತ್ನಾಳ್, ಪ್ರಿಯಾಂಕ್ ಖರ್ಗೆಗೆ ಚುನಾವಣಾ ಆಯೋಗ ನೋಟಿಸ್

ಬೆಂಗಳೂರು: ಚುನಾವಣಾ ಪ್ರಚಾರ ಸಭೆಗಳಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ವಿಚಾರವಾಗಿ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಹಾಗೂ ಚಿತ್ತಾಪುರ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ನೀಡಿತ್ತು. ಇದೀಗ ಇಬ್ಬರೂ ನಾಯಕರು ಆಯೋಗಕ್ಕೆ ಕಾರಣ ನೀಡಬೇಕಿದೆ. ಯತ್ನಾಳ್ ಅವರು ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಪದ ಬಳಸಿ ಟೀಕಿಸಿದ್ದರೆ ಪ್ರಿಯಾಂಕ್ ಖರ್ಗೆ ಪ್ರಧಾನಿ ಮೋದಿ ವಿರುದ್ಧ ನಿಂದನಾತ್ಮಕ ಪದ ಬಳಸಿ ಟೀಕಿಸಿದ್ದರು.

ಇಂದು(ಮೇ.4) ಸಂಜೆ 5 ಗಂಟೆಯೊಳಗೆ ಉತ್ತರ ನೀಡುವಂತೆ ಇಬ್ಬರಿಗೂ ಆಯೋಗ ಸೂಚಿಸಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ನೋಟಿಸ್ ನೀಡಲಾಗಿದೆ. ನೀತಿ ಸಂಹಿತೆ ಪ್ರಕಾರ, ರಾಜಕೀಯ ವಿರೋಧಿಗಳ ವೈಯಕ್ತಿಕ ತೇಜೋವಧೆ ಮಾಡುವಂತಿಲ್ಲ. ಹೀಗಾಗಿ ನಿಮ್ಮ ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು ಎಂದು ಇಬ್ಬರೂ ನಾಯಕರನ್ನು ಆಯೋಗ ಪ್ರಶ್ನಿಸಿದೆ. ಪ್ರಚಾರದ ವೇಳೆ ನಾಯಕರು ಭಾಷೆಯ ಘನತೆಯನ್ನು ಮರೆಯುತ್ತಿರುವುದು ಹಲವು ಬಾರಿ ಕಂಡು ಬಂದಿದೆ ಎಂದು ಮಂಗಳವಾರ ಹೇಳಿದ್ದ ಚುನಾವಣಾ ಆಯೋಗ, ನಾಯಕರ ಅವಹೇಳನಕಾರಿ ಹೇಳಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಸ್ಟಾರ್ ಪ್ರಚಾರಕರು ಮತ್ತು ಪಕ್ಷಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿತ್ತು.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:20 am, Thu, 4 May 23

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು