AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ಜಗದೀಶ್ ಶೆಟ್ಟರ್ ನಡುವೆ ಲಿಂಗಾಯತರ ಬಗ್ಗೆ ಬಿಸಿಬಿಸಿ ಚರ್ಚೆ, ಇನ್​ಸೈಡ್ ಸ್ಟೋರಿ ಇಲ್ಲಿದೆ

ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾದ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ, ಪ್ರಮುಖವಾಗಿ ಲಿಂಗಾಯತರ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಇನ್​ಸೈಡ್ ಸ್ಟೋರಿ ಇಲ್ಲಿದೆ.

ರಾಹುಲ್ ಗಾಂಧಿ ಜಗದೀಶ್ ಶೆಟ್ಟರ್ ನಡುವೆ ಲಿಂಗಾಯತರ ಬಗ್ಗೆ ಬಿಸಿಬಿಸಿ ಚರ್ಚೆ, ಇನ್​ಸೈಡ್ ಸ್ಟೋರಿ ಇಲ್ಲಿದೆ
ಜಗದೀಶ್ ಶೆಟ್ಟರ್ ಭೇಟಿಯಾದ ರಾಹುಲ್ ಗಾಂಧಿ
Rakesh Nayak Manchi
|

Updated on:Apr 23, 2023 | 5:04 PM

Share

ಹುಬ್ಬಳ್ಳಿ: ಬಿಜೆಪಿಯಲ್ಲಿನ ಸುದೀರ್ಘ ಪಯಣಕ್ಕೆ ಇತ್ತೀಚೆಗೆ ಬ್ರೇಕ್ ಹಾಕಿ ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಅವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಪ್ರಮುಖವಾಗಿ ಲಿಂಗಾಯತರ (Lingayats) ಬಗ್ಗೆ ಚರ್ಚೆ ನಡೆಸಿದ್ದಾರೆ. ಬಿಜೆಪಿಯ (BJP) ಹಿಂದುತ್ವ ಸಿದ್ಧಾಂತ ಮತ್ತು ಬಸವತತ್ವಗಳನ್ನೇ ಮುಂದಿಟ್ಟುಕೊಂಡು ರಾಹುಲ್ ಗಾಂಧಿಯವರು ಶೆಟ್ಟರ್ ಬಳಿಯಿಂದ ಮಹತ್ವದ ಮಾಹಿತಿ ಕಲೆ ಹಾಕಿಕೊಂಡಿದ್ದಾರೆ. ಅಷ್ಟು ಮಾತ್ರವಲ್ಲದೆ, ಶೆಟ್ಟರ್ ಕುಟುಂಬದ ರಾಜಕೀಯ ಇತಿಹಾಸ ತಿಳಿದುಕೊಂಡ ರಾಹುಲ್, ತಾವೇ ಇಡೀ ಉತ್ತರ ಕರ್ನಾಟಕ ಪ್ರವಾಸ ಮಾಡಬೇಕು ಎಂದು ಶೆಟ್ಟರ್​​ಗೆ ಸೂಚಿಸಿದ್ದಾರೆ. ಹಾಗಿದ್ದರೆ ರಾಹುಲ್ ಗಾಂಧಿ ಶೆಟ್ಟರ್​ಗೆ ಏನೆಲ್ಲಾ ಕೇಳಿದ್ದಾರೆ? ಶೆಟ್ಟರ್​ಗೆ ಅವರು ಕೊಟ್ಟ ಸಲಹೆಗಳು ಏನೇನು ಎಂಬ ಇನ್​ಸೈಡ್ ಸ್ಟೋರಿ ಇಲ್ಲಿದೆ ನೋಡಿ.

ಶೆಟ್ಟರ್ ಜೊತೆಗಿನ ಮಾತುಕತೆ ವೇಳೆ, ರಾಮಕೃಷ್ಣ ಹೆಗಡೆ ಕಾಲದಿಂದಲೂ ಲಿಂಗಾಯತರ ನಿಲುವಿನ ಬಗ್ಗೆ ಚೆರ್ಚಿಸಿದರು. ಬಸವ ತತ್ವ ಮತ್ತು ಬಿಜೆಪಿ ತತ್ವ ಬೇರೆ ಬೇರೆ. ಬಸವಣ್ಣನವರ ತತ್ವಗಳಿಗೆ ವಿರುದ್ಧವಾಗಿರುವ ಬಿಜೆಪಿಯನ್ನ ಲಿಂಗಾಯತರು ಯಾಕೆ ಬೆಂಬಲಿಸಿದರು? ಬಿಎಸ್ ಯಡಿಯೂರಪ್ಪ ಅವರ ಕಾರಣಕ್ಕೆ ಲಿಂಗಾಯತರು ಬಿಜೆಪಿ ಪರ‌ ನಿಂತಿದ್ದಾರಾ? ಅಥವಾ ಬೇರೆ ಏನಾದರೂ ಕಾರಣಗಳಿವೆಯಾ? ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದ್ದಾರೆ.

ಕಾಂಗ್ರೆಸ್ ಬಸವ ತತ್ವಗಳ ಪರವಾಗಿದೆ ಎಂದು ಹೇಳಿದ ರಾಹುಲ್ ಗಾಂಧಿ, ಈ ಚುನಾವಣೆಯಲ್ಲಿ ಲಿಂಗಾಯತರ ದೊಡ್ಡ ಬೆಂಬಲ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿದೆ. ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್‌ 50ಕ್ಕೂ ಹೆಚ್ಚು ಲಿಂಗಾಯತ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ‌. ಬಸವ ತತ್ವ, ಬಸವಣ್ಣನವರ ವಿಚಾರಧಾರೆಗಳ‌ ಬಗ್ಗೆ ಕಾಂಗ್ರೆಸ್ ಬಹಳ ನಂಬಿಕೆ ಇರುವಂತ ಪಕ್ಷ ಎಂದು ಹೇಳಿದರು.

ಇದನ್ನೂ ಓದಿ: ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹೆಸರು ಪ್ರಸ್ತಾಪಿಸಿದ ಚಿತ್ತರಗಿ ಶ್ರೀ, ಪೇಚಿಗೆ ಸಿಲುಕಿದ ಸಂಘಟಕರು

ಇದೇ ವೇಳೆ ಶೆಟ್ಟರ್ ಕುಟುಂಬದ ರಾಜಕೀಯ ಇತಿಹಾಸ ತಿಳಿದುಕೊಂಡ ರಾಹುಲ್ ಗಾಂಧಿ, ಜಗದೀಶ್ ಶೆಟ್ಟರ್ ಪಕ್ಷಕ್ಕೆ ಸೇರಿದ್ದು ಉತ್ತರ ಕರ್ನಾಟಕ ಭಾಗದಲ್ಲಿ ಅನುಕೂಲ ಆಗಿದೆ. ತಾವೇ ಇಡೀ ಉತ್ತರ ಕರ್ನಾಟಕ ಪ್ರವಾಸ ಮಾಡಬೇಕು ಬಿಜೆಪಿ ಲಿಂಗಾಯತ ಸಮುದಾಯಕ್ಕೆ ಮಾಡುತ್ತಿರುವ ಅನ್ಯಾಯದ ಬಗ್ಗೆ ಗಟ್ಟಿಯಾಗಿ ಮಾತನಾಡಿ ಎಂದು ಸೂಚಿಸಿದರು. ರಾಹುಲ್ ಜೊತೆಗಿನ ಮಾತುಕತೆಯಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಕೂಡ ಭಾಗಿಯಾಗಿದ್ದಾರೆ.

ದಿನಗಳ ಹಿಂದೆಯಷ್ಟೇ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದ ರಾಜ್ಯ ಕಾಂಗ್ರೆಸ್​ ಚುನಾವಣಾ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೆವಾಲಾ, ಲಿಂಗಾಯತ ಮತಗಳನ್ನು ಸೆಳೆಯುವಂತೆ ಸೂಚಿಸಿದ್ದಾರೆ. ಲಿಂಗಾಯತ ನಾಯಕರಿಗೆ ಬಿಜೆಪಿ ಮೋಸ ಮಾಡಿದೆ ಅನ್ನೋದನ್ನ ಬಿಂಬಿಸಿ. ಕೇವಲ ನಿಮ್ಮ ಕ್ಷೇತ್ರವಲ್ಲ ಸುತ್ತ ಮುತ್ತಲಿನ ಕ್ಷೇತ್ರದಲ್ಲೂ ನೀವು ತಂತ್ರ ಹೆಣೆಯಬೇಕು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್​ ಗೆಲ್ಲಲೇಬೇಕು. ಕಳೆದ ಮೂವತ್ತು ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿರೋ ಸೆಂಟ್ರಲ್ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್​ ಬಾವುಟ ಹಾರಿಸಬೇಕೆಂದು ಜಗದೀಶ್​ ಶೆಟ್ಟರ್ ಅವರಿಗೆ ಸೂಚನೆ ನೀಡಿದ್ದರು.

ಇತ್ತ, ಶೆಟ್ಟರ್ ಮುಂದಿಟ್ಟುಕೊಂಡು ಬಿಜೆಪಿ ಸೋಲಿಸುವ ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರವಾಗಿ ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದಲ್ಲಿ ಶೆಟ್ಟರ್​ ಸೋಲಿಸಲು ಪ್ರತಿತಂತ್ರ ಹಾಕಿಕೊಂಡಿದೆ. ನಾಗ್ಪುರದಿಂದ ಸುಮಾರು 50 ಆರೆಸ್ಸೆಸ್ ಕಾರ್ಯಕರ್ತರನ್ನು ಹುಬ್ಬಳ್ಳಿಗೆ ಕರೆಸಿಕೊಳ್ಳಲಾಗಿದ್ದು, ಅವರಿಗೆ ವಿವಿಧ ಸಂಘಟನಾ ಜವಾಬ್ದಾರಿಗಳನ್ನು ವಹಿಸಲಾಗಿದೆ ಎಂದು ಹೇಳಲಾಗಿದೆ. ಈ ತಂಡವು ಶೆಟ್ಟರ್ ಮೇಲೆ ನಿಗಾ ಇರಿಸಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:41 pm, Sun, 23 April 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?