AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ: ಸಿ.ಟಿ ರವಿ ವಿರುದ್ಧ ಬದಲಾವಣೆ ಸಂಕಲ್ಪಯಾತ್ರೆ ಆರಂಭಿಸಿದ ಕಾರ್ಯಕರ್ತರು

ಚುನಾವಣೆ ಸಮೀಪಿಸುತ್ತಿದ್ದಂತೆಯೇ ಇತ್ತ ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಲ್ಲಿ ಅಸಮಧಾನ ಸ್ಫೋಟಗೊಂಡಿದ್ದು, ಕಾರ್ಯಕರ್ತರು ಹಾಗೂ ಲಿಂಗಾಯತ ಮುಖಂಡರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಗೆ ಶಾಕ್ ಕೊಟ್ಟಿದ್ದಾರೆ.

ಚಿಕ್ಕಮಗಳೂರು ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ: ಸಿ.ಟಿ ರವಿ ವಿರುದ್ಧ ಬದಲಾವಣೆ ಸಂಕಲ್ಪಯಾತ್ರೆ ಆರಂಭಿಸಿದ ಕಾರ್ಯಕರ್ತರು
ಸಿ.ಟಿ ರವಿ
ರಮೇಶ್ ಬಿ. ಜವಳಗೇರಾ
|

Updated on:Feb 17, 2023 | 7:30 PM

Share

ಚಿಕ್ಕಮಗಳೂರು:  ವಿಧಾನಸಭೆ ಚುನಾವಣೆ (Karnataka Assembly Elections 2023) ಹೊತ್ತಲ್ಲೇ ಚಿಕ್ಕಮಗಳೂರು ಬಿಜೆಪಿಯಲ್ಲಿ(BJP) ಭಿನ್ನಮತ ಸ್ಫೋಟವಾಗಿದೆ. ನಿನ್ನೆ (ಫೆ.16) ಶಾಸಕ ಸಿ.ಟಿ.ರವಿ(CT Ravi) ಆಪ್ತ ತಮ್ಮಯ್ಯ (HD Tammaiah)ಬಿಜೆಪಿಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಮತ್ತಷ್ಟು ಮುಖಂಡರು, ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ಗುಜರಾತ್‌ ಮಾದರಿಯಲ್ಲಿ ಲಿಂಗಾಯತರಿಗೆ ಟಿಕೆಟ್‌ ನೀಡದ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿದ್ದು, ಹೆಚ್.ಡಿ.ತಮ್ಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್​ ಸೇರಲು  ನಿರ್ಧರಿಸಿದ್ದಾರೆ.

ಇದನ್ನೂ ಓದಿ: Setback for CT Ravi: ಚಿಕ್ಕಮಗಳೂರು ಬಿಜೆಪಿ ಶಾಸಕರ ಆಪ್ತರಾಗಿದ್ದ ಹೆಚ್ ಡಿ ತಮ್ಮಯ್ಯ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ

ಇಂದು(ಫೆಬ್ರವರಿ 17) ಚಿಕ್ಕಮಗಳೂರಿನ ಸನ್‌ರೈಸ್ ಹೋಟೆಲ್ ನಲ್ಲಿ 500ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಹಾಗೂ ಲಿಂಗಾಯತ ಮುಖಂಡ ಸಭೆ ನಡೆಸಿದರು. ಈ ಸಭೆಯಲ್ಲಿ ಸಿ.ಟಿ ರವಿ ವಿರುದ್ಧ ಬದಲಾವಣೆ ಸಂಕಲ್ಪಯಾತ್ರೆಗೆ ನಿರ್ಧರಿಸಿದ್ದು, ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಹೆಚ್.ಡಿ ತಮ್ಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲು ಸಭೆಯಲ್ಲಿ ತೀರ್ಮಾನಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರ ಅತ್ಯಂತ ಆಪ್ತರೆಂದು ಗುರುತಿಸಿಕೊಂಡಿದ್ದ ಮತ್ತು ಚಿಕ್ಕಮಗಳೂರು ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾಗಿ ಕೆಲಸ ಮಾಡುತ್ತಿದ್ದ ಹೆಚ್ ಡಿ ತಮ್ಮಯ್ಯ  ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ (primary membership) ರಾಜೀನಾಮೆ ನೀಡಿದ್ದರು.

ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಅವರು ಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಚಿಕ್ಕಮಗಳೂರು ಕ್ಷೇತ್ರದಿಂದ ಟಕೆಟ್ ಗಾಗಿ ಆಗ್ರಹಿಸಿದ್ದರಂತೆ. ಅದು ಸಿಗುವ ಲಕ್ಷಣ ಕಾಣದಿದ್ದರಿಂದ ಪಕ್ಷದಿಂದ ಹೊರನಡೆದಿದ್ದಾರೆ ಎನ್ನಲಾಗಿದೆ. ಇದೀಗ ತಮ್ಮಯ್ಯ ಹಾದಿಯನ್ನೇ ತುಳಿಯಲು 500ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಹಾಗೂ ಲಿಂಗಾಯತ ಮುಖಂಡರು ನಿರ್ಧರಿಸಿದ್ದಾರೆ. ಇದರಿಂದ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಇತ್ತ ಬಿಜೆಪಿಯಲ್ಲಿ ಅಸಮಧಾನ ಸ್ಫೋಟಗೊಂಡಿದ್ದು, ಸಿಟಿ ರವಿಗೆ ಆಘಾತ ಎದುರಾಗಿದೆ.

Published On - 7:30 pm, Fri, 17 February 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?