Congress Bus Yatra ಪಕ್ಷ ಸಂಘಟನೆಗೆ ಕಾಂಗ್ರೆಸ್ ಬಸ್ ಯಾತ್ರೆ: ಎರಡು ಪ್ರತ್ಯೇಕ ಸಮಿತಿ ರಚಿಸಿದ ಡಿಕೆ ಶಿವಕುಮಾರ್

ಪಕ್ಷ ಸಂಘಟನೆ ಸಲುವಾಗಿ ಕಾಂಗ್ರೆಸ್ ಬಸ್ ಯಾತ್ರೆ ಕೈಗೊಂಡಿದ್ದರು, ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎರಡು ಪ್ರತ್ಯೇಕ ಸಮನ್ವಯ ಸಮಿತಿ ರಚಿಸಿದ್ದಾರೆ.

Congress Bus Yatra ಪಕ್ಷ ಸಂಘಟನೆಗೆ ಕಾಂಗ್ರೆಸ್ ಬಸ್ ಯಾತ್ರೆ: ಎರಡು ಪ್ರತ್ಯೇಕ ಸಮಿತಿ ರಚಿಸಿದ ಡಿಕೆ ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
Follow us
| Updated By: ರಮೇಶ್ ಬಿ. ಜವಳಗೇರಾ

Updated on: Jan 03, 2023 | 4:53 PM

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ (Karnataka Assembly election 2023) ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಈಗಾಗಲೇ ಟಿಕೆಟ್​ ಹಂಚಿಕೆ ಸಂಬಂಧ ಜಿಲ್ಲಾವಾರು ಅಭ್ಯರ್ಥಿಗಳ ಅಭಿಪ್ರಾಯ ಸಂಗ್ರಹ ನಡೆದಿದೆ. ಇನ್ನೊಂದೆಡೆ ಪಕ್ಷ ಸಂಘಟನೆಗಾಗಿ ಬಸ್ ಯಾತ್ರೆಗೆ (Congress Bus Yatra) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಎರಡು ಪ್ರತ್ಯೇಕ ಸಮನ್ವಯ ಸಮಿತಿ ರಚಿಸಿದ್ದಾರೆ.

ಇದನ್ನೂ ಓದಿ: Congress Bus Yatra:ಕರ್ನಾಟಕ ಕಾಂಗ್ರೆಸ್​ ಬಸ್ ಯಾತ್ರೆಗೆ ಮುಹೂರ್ತ ಫಿಕ್ಸ್, ಇಲ್ಲಿದೆ ವೇಳಾಪಟ್ಟಿ

ಕಾಂಗ್ರೆಸ್ ಪಕ್ಷ ಸಂಘಟನೆಗೆ ನಾಯಕರ ಬಸ್ ಯಾತ್ರೆ ಹಿನ್ನೆಲೆ ಡಿಕೆ ಶಿವಕುಮಾರ್ ಅವರು ಉತ್ತರ ಹಾಗೂ ದಕ್ಷಿಣ ಕರ್ನಾಟಕ್ಕೆ ಎರಡು ಪ್ರತ್ಯೇಕ ಸಮನ್ವಯ ಸಮಿತಿ ರಚನೆ ಮಾಡಿದ್ದಾರೆ. ಉತ್ತರ ಕರ್ನಾಟಕ ಭಾಗಕ್ಕೆ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ನೇತೃತ್ವದಲ್ಲಿ 22 ಸಮನ್ವಯ ಸದಸ್ಯರನ್ನು ನೇಮಿಸಿದ್ರೆ, ದಕ್ಷಿಣ ‌ಕರ್ನಾಟಕಕ್ಕೆ ಸಂಸದ ಜಿ ಸಿ ಚಂದ್ರಶೇಖರ ನೇತೃತ್ವದಲ್ಲಿ 29 ಸದಸ್ಯರ ನೇಮಕ ಮಾಡಿ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಈ ಎರಡು ಸಮನ್ವಯ ಸಮಿತಿ ಬಸ್ ಯಾತ್ರೆಯ ಸಿದ್ಧತೆ ನೋಡಿಕೊಳ್ಳಲಿದೆ.

ಜ.11ರಿಂದ ಬಸ್ ಯಾತ್ರೆ ಶುರು

ಕಾಂಗ್ರೆಸ್​ ಬಸ್ ಯಾತ್ರೆಗೆ (Congress Bus Yatra) ಮುಹೂರ್ತ ಫಿಕ್ಸ್​ ಆಗಿದ್ದು, ಜನವರಿ 11ರಿಂದ ಕಾಂಗ್ರೆಸ್ ನಾಯಕರ ಜಂಟಿ ಬಸ್ ಯಾತ್ರೆ ಆರಂಭವಾಗಲಿದೆ. ಬೆಳಗಾವಿಯಿಂದ ಶುರುವಾಗಲಿದ್ದು, ಒಟ್ಟೂ 21 ಜಿಲ್ಲೆಗಳಲ್ಲಿ ಬಸ್ ಯಾತ್ರೆ ಸಂಚರಿಸಲಿದೆ.

* ಜನವರಿ 11ರಂದು ಬೆಳಗಾವಿ ಜಿಲ್ಲೆ * ಜನವರಿ 16ರಂದು ಹೊಸಪೇಟೆ * ಜನವರಿ 17ರಂದು ಕೊಪ್ಪಳದಲ್ಲಿ ಯಾತ್ರೆ * ಜನವರಿ 18ರಂದು ಬಾಗಲಕೋಟೆ, ಗದಗ ಜಿಲ್ಲೆಯಲ್ಲಿ ಬಸ್ ಯಾತ್ರೆ * ಜನವರಿ 19ರಂದು ಹಾವೇರಿ, ದಾವಣಗೆರೆ ಜಿಲ್ಲೆ * ಜನವರಿ 21 ಹಾಸನ, ಚಿಕ್ಕಮಗಳೂರು * ಜನವರಿ 22 ಉಡುಪಿ, ದಕ್ಷಿಣ ಕನ್ನಡ. * ಜನವರಿ 23 ಕೋಲಾರ, ಚಿಕ್ಕಬಳ್ಳಾಪುರ * ಜನವರಿ 24 ತುಮಕೂರು, ಬೆಂಗಳೂರು ಗ್ರಾಮಾಂತರ * ಜನವರಿ 25 ಚಾಮರಾಜನಗರ, ಮೈಸೂರು * ಜನವರಿ 26 ಮಂಡ್ಯ ಮತ್ತು ರಾಮನಗರ * ಜನವರಿ 27 ಯಾದಗಿರಿ-ಕಲಬುರಗಿ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ