ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ಗೆ ಬಡಿದ ರಣಹದ್ದು; ವಿಂಡೋ ಗ್ಲಾಸ್​ ಪುಡಿಪುಡಿ, ತಪ್ಪಿದ ಅನಾಹುತ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಚ್​ಎಎಲ್​ನಿಂದ ಮುಳಬಾಗಿಲಿಗೆ ತೆರಳುತ್ತಿದ್ದರು. ಈ ವೇಳೆ ಹೆಲಿಕಾಪ್ಟರ್​ಗೆ ರಣಹದ್ದು ಬಡಿದಿದೆ. ಇದರಿಂದ ಹೆಲಿಕಾಪ್ಟರ್​ ವಿಂಡೋ ಗ್ಲಾಸ್​ ಪುಡಿಪುಡಿಯಾಗಿದ್ದು ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶವಾಗಿದೆ.

Follow us
| Updated By: Digi Tech Desk

Updated on:May 03, 2023 | 10:25 AM

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಕೇವಲ 8 ದಿನಗಳು ಮಾತ್ರ ಬಾಕಿ ಇವೆ. ಹೀಗಾಗಿ ರಾಜ್ಯಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಮತ್ತೊಂದೆಡೆ ಇಂದು ಬೆಳಗ್ಗೆ ಕಾಂಗ್ರೆಸ್​ನ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಕೆ ಶಿವಕುಮಾರ್(DK Shivakumar) ಕೋಲಾರದ ಮುಳುಬಾಗಿಲಿಗೆ ಪ್ರಯಾಣಿಸುವ ವೇಳೆ ಅವಘಡವೊಂದು ಸಂಭವಿಸಿದೆ. ಡಿಕೆ ಶಿವಕುಮಾರ್ ಮುಳುಬಾಗಿಲಿಗೆ ತೆರಳಲು ಹೆಚ್​ಎಎಲ್​ ಏರ್​ಪೋರ್ಟ್​​ಗೆ ಬಂದಿದ್ದರು.  ಆದ್ರೆ ಹೆಲಿಕಾಪ್ಟರ್ ಕೊಂಚ ದೂರ ಸಾಗಿ ತುರ್ತು ಭೂಸ್ಪರ್ಶವಾಗಿದೆ. ಏಕೆಂದರೆ ಹಾರಾಟ ವೇಳೆ ಹೆಲಿಕಾಪ್ಟರ್​ ಮುಂಭಾಗದ ವಿಂಡೋ​ ಗಾಜು ಪುಡಿಪುಡಿಯಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಚಾರ ಹಿನ್ನೆಲೆ ಮುಳುಬಾಗಿಲಿಗೆ ತೆರಳಬೇಕಿತ್ತು. ಹೀಗಾಗಿ ಬೆಂಗಳೂರಿನ ಹೆಚ್​ಎಎಲ್​ನಿಂದ ಮುಳಬಾಗಿಲಿಗೆ ತೆರಳಲು ಹೆಲಿಕಾಪ್ಟರ್ ಹತ್ತಿದ್ದಾರೆ. ಕೊಂಚ ದೂರ ಸಾಗುತ್ತಿದ್ದಂತೆ ಹೆಲಿಕಾಪ್ಟರ್​ಗೆ ರಣಹದ್ದು ಬಡಿದಿದೆ. ಇದರಿಂದ ಹೆಲಿಕಾಪ್ಟರ್​ ವಿಂಡೋ ಗ್ಲಾಸ್​ ಪುಡಿಪುಡಿಯಾಗಿದ್ದು ತಕ್ಷಣ ಎಚ್ಚೆತ್ತ  ಪೈಲೆಟ್ ತುರ್ತು ಭೂಸ್ಪರ್ಶ ಮಾಡಿದ್ದಾರೆ. ರಣಹದ್ದು ಬಡಿಯುತ್ತಿದ್ದಂತೆ ಡಿಕೆ ಶಿವಕುಮಾರ್ ಕೆಲ ಸಮಯ ಗಾಬರಿಯಾಗಿದ್ದಾರೆ. ಸದ್ಯ ಯಾವುದೇ ಹಾನಿಯಾಗಿಲ್ಲ. ಹೆಲಿಕಾಪ್ಟರ್ ಸಿಬ್ಬಂದಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಟಿವಿ9 ಪ್ರತಿನಿಧಿ, ಕ್ಯಾಮರಾಮೆನ್ ಎಲ್ಲರೂ ಕೂಡ ಸುರಕ್ಷಿತರಾಗಿದ್ದಾರೆ.  ಹೆಚ್​ಎಎಲ್​ ಏರ್​ಪೋರ್ಟ್​​ಗೆ ಹಿಂದಿರುಗಿದ್ದಾರೆ. ಘಟನೆ ನಡೆದ ವೇಳೆ ಟಿವಿ9 ಪ್ರತಿನಿಧಿ ಡಿಕೆ ಶಿವಕುಮಾರ್​ರೊಂದಿಗೆ ಸಂದರ್ಶನದಲ್ಲಿದ್ದರು.

ಇದನ್ನೂ ಓದಿ: Karnataka Assembly Polls: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ತುರ್ತು ಚುಟುಕು ಸಭೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ದೊಡ್ಡ ಹದ್ದು ಹೆಲಿಕಾಪ್ಟರ್​ಗೆ ಗ್ಲಾಸ್​ಗೆ ಹೊಡೆಯಿತು. ಹೊಸಕೋಟೆ ಹತ್ತಿರ ತೆರಳುತ್ತಿದ್ದಾಗ ಈ ಘಟನೆ ಆಗಿದೆ. ಘಟನೆಯಿಂದಾಗಿ ಹೆಲಿಕಾಪ್ಟರ್​ ಗ್ಲಾಸ್ ಬ್ಲ್ಯಾಸ್ಟ್ ಆಗಿದೆ. ಪೈಲಟ್​ ನಿಧಾನವಾಗಿಯೇ ಕೆಳಗೆ ಇಳಿಸಿದ್ದಾರೆ. ಸದ್ಯಕ್ಕೆ ಹೆಚ್​​ಎಎಲ್​ಗೆ ವಾಪಸ್​ ಆಗಿದ್ದೇನೆ. ಎಲ್ಲರೂ ಕೂಡ ಸುರಕ್ಷಿತವಾಗಿಯೇ ವಾಪಸಾಗಿದ್ದೇವೆ ಎಂದರು.

ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:07 pm, Tue, 2 May 23

ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ