AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ಗೆ ಬಡಿದ ರಣಹದ್ದು; ವಿಂಡೋ ಗ್ಲಾಸ್​ ಪುಡಿಪುಡಿ, ತಪ್ಪಿದ ಅನಾಹುತ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಚ್​ಎಎಲ್​ನಿಂದ ಮುಳಬಾಗಿಲಿಗೆ ತೆರಳುತ್ತಿದ್ದರು. ಈ ವೇಳೆ ಹೆಲಿಕಾಪ್ಟರ್​ಗೆ ರಣಹದ್ದು ಬಡಿದಿದೆ. ಇದರಿಂದ ಹೆಲಿಕಾಪ್ಟರ್​ ವಿಂಡೋ ಗ್ಲಾಸ್​ ಪುಡಿಪುಡಿಯಾಗಿದ್ದು ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶವಾಗಿದೆ.

ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:May 03, 2023 | 10:25 AM

Share

ಮುಖ್ಯಾಂಶಗಳು

  • ಡಿಕೆ ಶಿವಕುಮಾರ್ ಮುಳುಬಾಗಿಲಿಗೆ ಪ್ರಯಾಣಿಸುವ ವೇಳೆ ಅವಘಡ
  • ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ಗೆ ಬಡಿದ ರಣಹದ್ದು
  • ಹೆಲಿಕಾಪ್ಟರ್​ ಗ್ಲಾಸ್ ಬ್ಲ್ಯಾಸ್ಟ್

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಕೇವಲ 8 ದಿನಗಳು ಮಾತ್ರ ಬಾಕಿ ಇವೆ. ಹೀಗಾಗಿ ರಾಜ್ಯಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಮತ್ತೊಂದೆಡೆ ಇಂದು ಬೆಳಗ್ಗೆ ಕಾಂಗ್ರೆಸ್​ನ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಕೆ ಶಿವಕುಮಾರ್(DK Shivakumar) ಕೋಲಾರದ ಮುಳುಬಾಗಿಲಿಗೆ ಪ್ರಯಾಣಿಸುವ ವೇಳೆ ಅವಘಡವೊಂದು ಸಂಭವಿಸಿದೆ. ಡಿಕೆ ಶಿವಕುಮಾರ್ ಮುಳುಬಾಗಿಲಿಗೆ ತೆರಳಲು ಹೆಚ್​ಎಎಲ್​ ಏರ್​ಪೋರ್ಟ್​​ಗೆ ಬಂದಿದ್ದರು.  ಆದ್ರೆ ಹೆಲಿಕಾಪ್ಟರ್ ಕೊಂಚ ದೂರ ಸಾಗಿ ತುರ್ತು ಭೂಸ್ಪರ್ಶವಾಗಿದೆ. ಏಕೆಂದರೆ ಹಾರಾಟ ವೇಳೆ ಹೆಲಿಕಾಪ್ಟರ್​ ಮುಂಭಾಗದ ವಿಂಡೋ​ ಗಾಜು ಪುಡಿಪುಡಿಯಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಚಾರ ಹಿನ್ನೆಲೆ ಮುಳುಬಾಗಿಲಿಗೆ ತೆರಳಬೇಕಿತ್ತು. ಹೀಗಾಗಿ ಬೆಂಗಳೂರಿನ ಹೆಚ್​ಎಎಲ್​ನಿಂದ ಮುಳಬಾಗಿಲಿಗೆ ತೆರಳಲು ಹೆಲಿಕಾಪ್ಟರ್ ಹತ್ತಿದ್ದಾರೆ. ಕೊಂಚ ದೂರ ಸಾಗುತ್ತಿದ್ದಂತೆ ಹೆಲಿಕಾಪ್ಟರ್​ಗೆ ರಣಹದ್ದು ಬಡಿದಿದೆ. ಇದರಿಂದ ಹೆಲಿಕಾಪ್ಟರ್​ ವಿಂಡೋ ಗ್ಲಾಸ್​ ಪುಡಿಪುಡಿಯಾಗಿದ್ದು ತಕ್ಷಣ ಎಚ್ಚೆತ್ತ  ಪೈಲೆಟ್ ತುರ್ತು ಭೂಸ್ಪರ್ಶ ಮಾಡಿದ್ದಾರೆ. ರಣಹದ್ದು ಬಡಿಯುತ್ತಿದ್ದಂತೆ ಡಿಕೆ ಶಿವಕುಮಾರ್ ಕೆಲ ಸಮಯ ಗಾಬರಿಯಾಗಿದ್ದಾರೆ. ಸದ್ಯ ಯಾವುದೇ ಹಾನಿಯಾಗಿಲ್ಲ. ಹೆಲಿಕಾಪ್ಟರ್ ಸಿಬ್ಬಂದಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಟಿವಿ9 ಪ್ರತಿನಿಧಿ, ಕ್ಯಾಮರಾಮೆನ್ ಎಲ್ಲರೂ ಕೂಡ ಸುರಕ್ಷಿತರಾಗಿದ್ದಾರೆ.  ಹೆಚ್​ಎಎಲ್​ ಏರ್​ಪೋರ್ಟ್​​ಗೆ ಹಿಂದಿರುಗಿದ್ದಾರೆ. ಘಟನೆ ನಡೆದ ವೇಳೆ ಟಿವಿ9 ಪ್ರತಿನಿಧಿ ಡಿಕೆ ಶಿವಕುಮಾರ್​ರೊಂದಿಗೆ ಸಂದರ್ಶನದಲ್ಲಿದ್ದರು.

ಇದನ್ನೂ ಓದಿ: Karnataka Assembly Polls: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ತುರ್ತು ಚುಟುಕು ಸಭೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ದೊಡ್ಡ ಹದ್ದು ಹೆಲಿಕಾಪ್ಟರ್​ಗೆ ಗ್ಲಾಸ್​ಗೆ ಹೊಡೆಯಿತು. ಹೊಸಕೋಟೆ ಹತ್ತಿರ ತೆರಳುತ್ತಿದ್ದಾಗ ಈ ಘಟನೆ ಆಗಿದೆ. ಘಟನೆಯಿಂದಾಗಿ ಹೆಲಿಕಾಪ್ಟರ್​ ಗ್ಲಾಸ್ ಬ್ಲ್ಯಾಸ್ಟ್ ಆಗಿದೆ. ಪೈಲಟ್​ ನಿಧಾನವಾಗಿಯೇ ಕೆಳಗೆ ಇಳಿಸಿದ್ದಾರೆ. ಸದ್ಯಕ್ಕೆ ಹೆಚ್​​ಎಎಲ್​ಗೆ ವಾಪಸ್​ ಆಗಿದ್ದೇನೆ. ಎಲ್ಲರೂ ಕೂಡ ಸುರಕ್ಷಿತವಾಗಿಯೇ ವಾಪಸಾಗಿದ್ದೇವೆ ಎಂದರು.

ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:07 pm, Tue, 2 May 23

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ