AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಆಪರೇಷನ್ ಹಸ್ತಕ್ಕೆ ಕೈ ಹಾಕಿದ ಡಿಕೆ ಶಿವಕುಮಾರ್​, ದಳಪತಿಗಳಲ್ಲಿ ಮತ್ತಷ್ಟು ಟಿಕೆಟ್​ ಟೆನ್ಷನ್

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಸನದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ. ಇದರಿಂದ ದಳಪತಿಗಳಲ್ಲಿ ಮತ್ತಷ್ಟು ಟಿಕೆಟ್​ ಟೆನ್ಷನ್ ಹೆಚ್ಚಾಗಿದೆ.

ಹಾಸನದಲ್ಲಿ ಆಪರೇಷನ್ ಹಸ್ತಕ್ಕೆ ಕೈ ಹಾಕಿದ ಡಿಕೆ ಶಿವಕುಮಾರ್​, ದಳಪತಿಗಳಲ್ಲಿ ಮತ್ತಷ್ಟು ಟಿಕೆಟ್​ ಟೆನ್ಷನ್
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ರಮೇಶ್ ಬಿ. ಜವಳಗೇರಾ
|

Updated on: Mar 01, 2023 | 3:08 PM

Share

ಹಾಸನ: ಜೆಡಿಎಸ್‌ ಮನೆಯಲ್ಲಿ ಹೊತ್ತಿ ಉರಿಯುತ್ತಿರುವ ಹಾಸನ ಟಿಕೆಟ್ ಕಿಚ್ಚು ಧಗಧಗಿಸುತ್ತಿದೆ. ಸ್ವರೂಪ್‌ಗೆ ಟಿಕೆಟ್‌ ಕೊಡಲು ಹೆಚ್​ಡಿ ಕುಮಾರಸ್ವಾಮಿ ಪಣತೊಟ್ಟಿದ್ದಾರೆ. ಮತ್ತೊಂದೆಡೆ ಭವಾನಿಗೆ ಟಿಕೆಟ್‌ ಬೇಕು ಎಂದು ಹೆಚ್​ಡಿ ರೇವಣ್ಣ ಜಿದ್ದಿಗೆ ಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸನ ಟಿಕೆಟ್ ದಳ್ಳುರಿ ಬೇರೆಯೇ ಸ್ವರೂಪ ಪಡೆದುಕೊಳ್ಳುತ್ತಿದ್ದು, ಟಿಕೆಟ್‌ ಗುದ್ದಾಟ ಪ್ರತಿಷ್ಠೆ ಯುದ್ಧವಾಗಿ ಬದಲಾಗಿದೆ. ಇದರ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಸನದಲ್ಲಿ ಆಪರೇಷನ್ ಹಸ್ತಕ್ಕೆ ಕೈ ಹಾಕಿದ್ದಾರೆ. ಈ ಬಗ್ಗೆ ಖುದ್ದು ಅವರೇ ಸುಳಿವು ನೀಡಿದ್ದಾರೆ.

ಇದನ್ನೂ ಓದಿ: ಗುಂಪುಗಾರಿಕೆ ನಿಮ್ಮಿಂದ, ನಿಮ್ಮ ಕುಟುಂಬದಿಂದ ಆಗುತ್ತಿದೆ: ರೇವಣ್ಣ, ಕುಮಾರಸ್ವಾಮಿ ವಿರುದ್ಧ JDS ಶಾಸಕ ರಾಮಸ್ವಾಮಿ ವಾಗ್ದಾಳಿ

ಈಗಾಗಲೇ ಅರಸೀಕೆರೆ ‌ಶಾಸಕ ಶಿವಲಿಂಗೇಗೌಡ ಜೆಡಿಎಸ್​ನಿಂದ ದೂರು ಉಳಿದುಕೊಂಡಿದ್ದು, ಕಾಂಗ್ರೆಸ್ ಸೇರ್ಪಡೆಗೆ ಚಿಂತನೆ ನಡೆಸಿದ್ದಾರೆ. ಇನ್ನು ಜಿಲ್ಲೆ ಮತ್ತೋರ್ವ ಜೆಡಿಎಸ್​ ಶಾಸಕ ಎ‌.ಟಿ ರಾಮಸ್ವಾಮಿ ಸಹ ದಳಪತಿಗಳ ಮೇಲೆ ಮುನಿಸಿಕೊಂಡಿದ್ದು, ತೆನೆ ಇಳಿಸಿ ಕೂ ಹಿಡಿಯಲು ಪ್ಲಾನ್ ಮಾಡಿದ್ದಾರೆ. ಇಷ್ಟೆಲ್ಲ ಬೆಳವಣಿಗೆಗಳ ಮಧ್ಯೆ ಡಿಕೆ ಶಿವಕುಮಾರ್ ಕಣ್ಣು​ ಹಾಸನ ಜೆಡಿಎಸ್​ ಟಿಕೆಟ್​​ನ ಪ್ರಬಲ ಆಕಾಂಕ್ಷಿ ಸ್ವರೂಪ್​ ಮೇಲೆ ಬಿದ್ದಿದ್ದು, ಅವರನ್ನು ಪಕ್ಷಕ್ಕೆ ಸೆಳೆಲು ತಂತ್ರರೂಪಿಸಿದ್ದಾರೆ. ಈ ಬಾರಿ ಹಾಸನ ಟಿಕೆಟ್​ ಸ್ವೂರಪ್​ಗೆ ಕೊಡಿಸಲು ಕುಮಾರಸ್ವಾಮಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಇದರ ನಡುವೆ ಡಿಕೆಶಿ ಸ್ವೂರಪ್​ಗೆ ಗಾಳ ಹಾಕಿದ್ದಾರೆ.

ಹಾಸನದಲ್ಲಿ ಇಂದು(ಮಾರ್ಚ್ 01) ಮಾತನಾಡಿದ ಡಿಕೆ ಶಿವಕುಮಾರ್, ಶೀಘ್ರದಲ್ಲೇ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ತಾರೆ. ಮಾ.5ರಂದು ಸಂಗೊಳ್ಳಿ ರಾಯಣ್ಣ ಪುತ್ಥಳಿ ಉದ್ಘಾಟನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಅರಸೀಕೆರೆಗೆ ಸಿದ್ದರಾಮಯ್ಯ ಭೇಟಿ ನೀಡುತ್ತಾರೆ. ಈ ಕಾರ್ಯಕ್ರಮದಲ್ಲಿ ಶಿವಲಿಂಗೇಗೌಡ ಭಾಗಿಯಾಗುತ್ತಾರೆ. ಸ್ವರೂಪ್​​ ಜತೆ ಮಾತನಾಡಿದ್ದೇನೆ. ಎ.ಟಿ.ರಾಮಸ್ವಾಮಿ ಕೂಡ ಮಾತನಾಡಿದ್ದಾರೆ. ನಾನು ಎ.ಮಂಜು ಜೊತೆ ಮಾತನಾಡಿದ್ದು ನಿಜ. ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು ಎಂದು ಹಾಸನ ಜಿಲ್ಲಾ ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದರು.

ಇದನ್ನೂ ಓದಿ: ನನಗೆ ರಾಜಕೀಯವಾಗಿ ಅಗ್ನಿಪರೀಕ್ಷೆ ಇದೆ, ಅರ್ಥಮಾಡಿಕೊಳ್ಳಿ: ಹಾಸನದಲ್ಲಿ ಕುಮಾರಸ್ವಾಮಿ ಹೇಳಿಕೆ

ಒಂದು ವೇಳೆ ಅಂತಿಮವಾಗಿ ಹಾಸನ ಜೆಡಿಎಸ್​ ಟಿಕೆಟ್​​ ರೇವಣ್ಣ ಕುಟುಂಬಕ್ಕೆ ಸಿಕ್ಕರೆ ಸ್ವೂರಪ್​ನನ್ನು ಕಾಂಗ್ರೆಸ್​ಗೆ ಕರೆತರುವ ಪ್ಲಾನ್ ಡಿಕೆ ಶಿವಕುಮಾರ್ ಮಾಡಿದ್ದಾರೆ. ಇನ್ನು ಈ ಬಗ್ಗೆ ಸ್ವತ್ವಃ ಡಿಕೆ ಶಿವಕುಮಾರ್​​ ಸಣ್ಣ ಸುಳಿವುಕೊಟ್ಟಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಹೌದು…ಸ್ವರೂಪ್​ ಹಾಸನ ಜೆಡಿಎಸ್​ ಟಿಕೆಟ್​​ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಅಲ್ಲದೇ ಕುಮಾರಸ್ವಾಮಿ ಸಹ ಸ್ವರೂಪ್​ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇಷ್ಟಾದರೂ ಟಿಕೆಟ್​ ಸಿಗಲಿಲ್ಲವೆಂದರೆ ಸ್ವರೂಪ್​ ಕಾಂಗ್ರೆಸ್​ನಿಂದ ಅಖಾಡಕ್ಕಿಳಿದರೂ ಅಚ್ಚರಿಪಡಬೇಕಿಲ್ಲ. ಈ ಆತಂಕ ದಳಪತಿಗಳಿಗೂ ಇದೆ. ಹೀಗಾಗಿ ಮನೆಯವರಿಗೆ ಬಿಟ್ಟು ಸ್ವರೂಪ್​ಗೆ ನೀಡುವುದು ಒಳ್ಳೆಯದು ಎನ್ನುವುದು ಕುಮಾರಸ್ವಾಮಿಯವರ ಅಭಿಪ್ರಾಯವಾಗಿದೆ. ಆದ್ರೆ, ನಮ್ಮ ಕುಟುಂಬಕ್ಕೆ ಬೇಕೆಂದು ರೇವಣ್ಣ ಪಟ್ಟು ಹಿಡಿದಿದ್ದಾರೆ. ಇದರಿಂದ ಹಾಸನ ಜೆಡಿಎಸ್ ಟಿಕೆಟ್​​ ಚೆಂಡು ದೇವೇಗೌಡ್ರ ಅಂಗಳಕ್ಕೆ ಹೋಗಿದ್ದು, ದೊಡ್ಡಗೌಡ್ರ ಒಲವು ಯಾರ ಮೇಲೆ ಎನ್ನುವುದು ಕುತೂಹಲ ಮೂಡಿಸಿದೆ.

ಮೂಲಗಳ ಪ್ರಕಾರ ತಮ್ಮ ಕುಟುಂಬಕ್ಕೆ ಸವಾಲು ಹಾಕಿರುವ ಬಿಜೆಪಿಯ ಹಾಲಿ ಶಾಸಕ ಪ್ರೀತಂಗೌಡಗೆ ಪಾಠ ಕಲಿಸಲು ರೇವಣ್ಣ ಅಥವಾ ಭವಾನಿ ರೇವಣ್ಣಗೆ ಟಿಕೆಟ್​ ನೀಡುವ ಸಾಧ್ಯತೆಗಳಿವೆ ಎನ್ನಲಾದೆ. ಆದ್ರೆ, ದೇವೇಗೌಡ್ರು ಏನು ತೀರ್ಮಾನ ಮಾಡುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?