Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಆಪರೇಷನ್ ಹಸ್ತಕ್ಕೆ ಕೈ ಹಾಕಿದ ಡಿಕೆ ಶಿವಕುಮಾರ್​, ದಳಪತಿಗಳಲ್ಲಿ ಮತ್ತಷ್ಟು ಟಿಕೆಟ್​ ಟೆನ್ಷನ್

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಸನದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ. ಇದರಿಂದ ದಳಪತಿಗಳಲ್ಲಿ ಮತ್ತಷ್ಟು ಟಿಕೆಟ್​ ಟೆನ್ಷನ್ ಹೆಚ್ಚಾಗಿದೆ.

ಹಾಸನದಲ್ಲಿ ಆಪರೇಷನ್ ಹಸ್ತಕ್ಕೆ ಕೈ ಹಾಕಿದ ಡಿಕೆ ಶಿವಕುಮಾರ್​, ದಳಪತಿಗಳಲ್ಲಿ ಮತ್ತಷ್ಟು ಟಿಕೆಟ್​ ಟೆನ್ಷನ್
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
Follow us
ರಮೇಶ್ ಬಿ. ಜವಳಗೇರಾ
|

Updated on: Mar 01, 2023 | 3:08 PM

ಹಾಸನ: ಜೆಡಿಎಸ್‌ ಮನೆಯಲ್ಲಿ ಹೊತ್ತಿ ಉರಿಯುತ್ತಿರುವ ಹಾಸನ ಟಿಕೆಟ್ ಕಿಚ್ಚು ಧಗಧಗಿಸುತ್ತಿದೆ. ಸ್ವರೂಪ್‌ಗೆ ಟಿಕೆಟ್‌ ಕೊಡಲು ಹೆಚ್​ಡಿ ಕುಮಾರಸ್ವಾಮಿ ಪಣತೊಟ್ಟಿದ್ದಾರೆ. ಮತ್ತೊಂದೆಡೆ ಭವಾನಿಗೆ ಟಿಕೆಟ್‌ ಬೇಕು ಎಂದು ಹೆಚ್​ಡಿ ರೇವಣ್ಣ ಜಿದ್ದಿಗೆ ಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸನ ಟಿಕೆಟ್ ದಳ್ಳುರಿ ಬೇರೆಯೇ ಸ್ವರೂಪ ಪಡೆದುಕೊಳ್ಳುತ್ತಿದ್ದು, ಟಿಕೆಟ್‌ ಗುದ್ದಾಟ ಪ್ರತಿಷ್ಠೆ ಯುದ್ಧವಾಗಿ ಬದಲಾಗಿದೆ. ಇದರ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಸನದಲ್ಲಿ ಆಪರೇಷನ್ ಹಸ್ತಕ್ಕೆ ಕೈ ಹಾಕಿದ್ದಾರೆ. ಈ ಬಗ್ಗೆ ಖುದ್ದು ಅವರೇ ಸುಳಿವು ನೀಡಿದ್ದಾರೆ.

ಇದನ್ನೂ ಓದಿ: ಗುಂಪುಗಾರಿಕೆ ನಿಮ್ಮಿಂದ, ನಿಮ್ಮ ಕುಟುಂಬದಿಂದ ಆಗುತ್ತಿದೆ: ರೇವಣ್ಣ, ಕುಮಾರಸ್ವಾಮಿ ವಿರುದ್ಧ JDS ಶಾಸಕ ರಾಮಸ್ವಾಮಿ ವಾಗ್ದಾಳಿ

ಈಗಾಗಲೇ ಅರಸೀಕೆರೆ ‌ಶಾಸಕ ಶಿವಲಿಂಗೇಗೌಡ ಜೆಡಿಎಸ್​ನಿಂದ ದೂರು ಉಳಿದುಕೊಂಡಿದ್ದು, ಕಾಂಗ್ರೆಸ್ ಸೇರ್ಪಡೆಗೆ ಚಿಂತನೆ ನಡೆಸಿದ್ದಾರೆ. ಇನ್ನು ಜಿಲ್ಲೆ ಮತ್ತೋರ್ವ ಜೆಡಿಎಸ್​ ಶಾಸಕ ಎ‌.ಟಿ ರಾಮಸ್ವಾಮಿ ಸಹ ದಳಪತಿಗಳ ಮೇಲೆ ಮುನಿಸಿಕೊಂಡಿದ್ದು, ತೆನೆ ಇಳಿಸಿ ಕೂ ಹಿಡಿಯಲು ಪ್ಲಾನ್ ಮಾಡಿದ್ದಾರೆ. ಇಷ್ಟೆಲ್ಲ ಬೆಳವಣಿಗೆಗಳ ಮಧ್ಯೆ ಡಿಕೆ ಶಿವಕುಮಾರ್ ಕಣ್ಣು​ ಹಾಸನ ಜೆಡಿಎಸ್​ ಟಿಕೆಟ್​​ನ ಪ್ರಬಲ ಆಕಾಂಕ್ಷಿ ಸ್ವರೂಪ್​ ಮೇಲೆ ಬಿದ್ದಿದ್ದು, ಅವರನ್ನು ಪಕ್ಷಕ್ಕೆ ಸೆಳೆಲು ತಂತ್ರರೂಪಿಸಿದ್ದಾರೆ. ಈ ಬಾರಿ ಹಾಸನ ಟಿಕೆಟ್​ ಸ್ವೂರಪ್​ಗೆ ಕೊಡಿಸಲು ಕುಮಾರಸ್ವಾಮಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಇದರ ನಡುವೆ ಡಿಕೆಶಿ ಸ್ವೂರಪ್​ಗೆ ಗಾಳ ಹಾಕಿದ್ದಾರೆ.

ಹಾಸನದಲ್ಲಿ ಇಂದು(ಮಾರ್ಚ್ 01) ಮಾತನಾಡಿದ ಡಿಕೆ ಶಿವಕುಮಾರ್, ಶೀಘ್ರದಲ್ಲೇ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ತಾರೆ. ಮಾ.5ರಂದು ಸಂಗೊಳ್ಳಿ ರಾಯಣ್ಣ ಪುತ್ಥಳಿ ಉದ್ಘಾಟನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಅರಸೀಕೆರೆಗೆ ಸಿದ್ದರಾಮಯ್ಯ ಭೇಟಿ ನೀಡುತ್ತಾರೆ. ಈ ಕಾರ್ಯಕ್ರಮದಲ್ಲಿ ಶಿವಲಿಂಗೇಗೌಡ ಭಾಗಿಯಾಗುತ್ತಾರೆ. ಸ್ವರೂಪ್​​ ಜತೆ ಮಾತನಾಡಿದ್ದೇನೆ. ಎ.ಟಿ.ರಾಮಸ್ವಾಮಿ ಕೂಡ ಮಾತನಾಡಿದ್ದಾರೆ. ನಾನು ಎ.ಮಂಜು ಜೊತೆ ಮಾತನಾಡಿದ್ದು ನಿಜ. ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು ಎಂದು ಹಾಸನ ಜಿಲ್ಲಾ ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದರು.

ಇದನ್ನೂ ಓದಿ: ನನಗೆ ರಾಜಕೀಯವಾಗಿ ಅಗ್ನಿಪರೀಕ್ಷೆ ಇದೆ, ಅರ್ಥಮಾಡಿಕೊಳ್ಳಿ: ಹಾಸನದಲ್ಲಿ ಕುಮಾರಸ್ವಾಮಿ ಹೇಳಿಕೆ

ಒಂದು ವೇಳೆ ಅಂತಿಮವಾಗಿ ಹಾಸನ ಜೆಡಿಎಸ್​ ಟಿಕೆಟ್​​ ರೇವಣ್ಣ ಕುಟುಂಬಕ್ಕೆ ಸಿಕ್ಕರೆ ಸ್ವೂರಪ್​ನನ್ನು ಕಾಂಗ್ರೆಸ್​ಗೆ ಕರೆತರುವ ಪ್ಲಾನ್ ಡಿಕೆ ಶಿವಕುಮಾರ್ ಮಾಡಿದ್ದಾರೆ. ಇನ್ನು ಈ ಬಗ್ಗೆ ಸ್ವತ್ವಃ ಡಿಕೆ ಶಿವಕುಮಾರ್​​ ಸಣ್ಣ ಸುಳಿವುಕೊಟ್ಟಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಹೌದು…ಸ್ವರೂಪ್​ ಹಾಸನ ಜೆಡಿಎಸ್​ ಟಿಕೆಟ್​​ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಅಲ್ಲದೇ ಕುಮಾರಸ್ವಾಮಿ ಸಹ ಸ್ವರೂಪ್​ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇಷ್ಟಾದರೂ ಟಿಕೆಟ್​ ಸಿಗಲಿಲ್ಲವೆಂದರೆ ಸ್ವರೂಪ್​ ಕಾಂಗ್ರೆಸ್​ನಿಂದ ಅಖಾಡಕ್ಕಿಳಿದರೂ ಅಚ್ಚರಿಪಡಬೇಕಿಲ್ಲ. ಈ ಆತಂಕ ದಳಪತಿಗಳಿಗೂ ಇದೆ. ಹೀಗಾಗಿ ಮನೆಯವರಿಗೆ ಬಿಟ್ಟು ಸ್ವರೂಪ್​ಗೆ ನೀಡುವುದು ಒಳ್ಳೆಯದು ಎನ್ನುವುದು ಕುಮಾರಸ್ವಾಮಿಯವರ ಅಭಿಪ್ರಾಯವಾಗಿದೆ. ಆದ್ರೆ, ನಮ್ಮ ಕುಟುಂಬಕ್ಕೆ ಬೇಕೆಂದು ರೇವಣ್ಣ ಪಟ್ಟು ಹಿಡಿದಿದ್ದಾರೆ. ಇದರಿಂದ ಹಾಸನ ಜೆಡಿಎಸ್ ಟಿಕೆಟ್​​ ಚೆಂಡು ದೇವೇಗೌಡ್ರ ಅಂಗಳಕ್ಕೆ ಹೋಗಿದ್ದು, ದೊಡ್ಡಗೌಡ್ರ ಒಲವು ಯಾರ ಮೇಲೆ ಎನ್ನುವುದು ಕುತೂಹಲ ಮೂಡಿಸಿದೆ.

ಮೂಲಗಳ ಪ್ರಕಾರ ತಮ್ಮ ಕುಟುಂಬಕ್ಕೆ ಸವಾಲು ಹಾಕಿರುವ ಬಿಜೆಪಿಯ ಹಾಲಿ ಶಾಸಕ ಪ್ರೀತಂಗೌಡಗೆ ಪಾಠ ಕಲಿಸಲು ರೇವಣ್ಣ ಅಥವಾ ಭವಾನಿ ರೇವಣ್ಣಗೆ ಟಿಕೆಟ್​ ನೀಡುವ ಸಾಧ್ಯತೆಗಳಿವೆ ಎನ್ನಲಾದೆ. ಆದ್ರೆ, ದೇವೇಗೌಡ್ರು ಏನು ತೀರ್ಮಾನ ಮಾಡುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ