AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಮತ ಹಾಕಿದ್ದರಿಂದ ಕರಾವಳಿಗರ ಜೀವನದಲ್ಲಿ ಬದಲಾವಣೆ ಆಯ್ತಾ?: ಡಿಕೆ ಶಿವಕುಮಾರ್ ಪ್ರಶ್ನೆ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕರಾವಳಿ ಭಾಗದ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿಗೆ ಮತ ಹಾಕಿದ್ದರಿಂದ ಕರಾವಳಿಗರ ಜೀವನದಲ್ಲಿ ಬದಲಾವಣೆ ಆಯ್ತಾ?: ಡಿಕೆ ಶಿವಕುಮಾರ್ ಪ್ರಶ್ನೆ
ಡಿಕೆ ಶಿವಕುಮಾರ್
Rakesh Nayak Manchi
|

Updated on:Apr 27, 2023 | 8:54 PM

Share

ಮಂಗಳೂರು: ಕಳೆದ ಚುನಾವಣೆಯಲ್ಲಿ (2018) ಕರಾವಳಿ ಭಾಗದಲ್ಲಿ ಒಂದು ಕ್ಷೇತ್ರ ಬಿಟ್ಟು ಉಳಿದ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರನ್ನು ಆಯ್ಕೆ ಮಾಡಿದ್ದೀರಿ. ಬಿಜೆಪಿಗೆ ಮತ ಹಾಕಿದ್ದರಿಂದ ನಿಮ್ಮ ಜೀವನದಲ್ಲಿ ಬದಲಾವಣೆ ಆಗಿದೆಯೇ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಪ್ರಶ್ನಿಸಿದರು. ಮಂಗಳೂರಿನ ಅಡ್ಯಾರು ಬಳಿ ನಡೆದ ಕಾಂಗ್ರೆಸ್​ ಸಮಾವೇಶದಲ್ಲಿ (Mangaluru Congress Convention) ಮಾತನಾಡಿದ ಅವರು, ಬಿಜೆಪಿ (BJP) ಡ್ಯಾಂ ಸಂಪೂರ್ಣ ಒಡೆದು ಹೋಗಿದೆ ಎಂದು ಪುನರುಚ್ಚರಿಸಿದರು.

ಇತ್ತೀಚೆಗೆ ಬೈಂದೂರಿನಲ್ಲಿ 3,000 ಜನ ಕೇಸರಿ ಶಾಲು ಹಾಕಿಕೊಂಡು ಬಂದು ಕಾಂಗ್ರೆಸ್ ಸೇರಿದರು. ನಾವು ಯಾರಿಗೂ ಆಪರೇಷನ್ ಮಾಡಲು ಹೋಗಿಲ್ಲ, ಅವರೇ ಕಾಂಗ್ರೆಸ್ ಸೇರುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಕೇಳುವ ಪ್ರಶ್ನೆಗಳಿಗೆ ಬಿಜೆಪಿಯಲ್ಲಿ ಉತ್ತರವಿಲ್ಲ. ಹಿಂಡು ಹಿಂಡಾಗಿ ಬಿಜೆಪಿಗರು ಕಾಂಗ್ರೆಸ್ ಸೇರಲು ಬರುತ್ತಿದ್ದಾರೆ. ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ, ಚಿಂಚನಸೂರ್​ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್​ ಸೇರಿದ ಶೆಟ್ಟರ್, ಸವದಿ ದಡ್ಡರಾ ನೀವೇ ಅರ್ಥೈಸಿಕೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ: Karnataka Assembly Polls; ಭ್ರಷ್ಟಾಚಾರ ನಡೆಸಿದ ಕಾರಣ ಡಿಕೆ ಶಿವಕುಮಾರ್ ಜೈಲಿಗೆ ಹೋಗಿದ್ದರು: ಬಸನಗೌಡ ಪಾಟೀಲ್  ಯತ್ನಾಳ್

ಇಂತಹ ಪವಿತ್ರ ಭೂಮಿಯಲ್ಲಿ ಯಾರೂ ಹೂಡಿಕೆ ಮಾಡಲು ಬರುತ್ತಿಲ್ಲ. ಹೂಡಿಕೆ ಸಮಾವೇಶ ಮಾಡಿದರೂ ಕಾರವಳಿ ಭಾಗದಲ್ಲಿ ಯಾಕೆ ಹೂಡಿಕೆ ಮಾಡುತ್ತಿಲ್ಲವೆಂದು ಬಿಜೆಪಿ ಉತ್ತರಿಸಬೇಕು ಎಂದು ಹೇಳಿದ ಡಿಕೆ ಶಿವಕುಮಾರ್, ಕರಾವಳಿ ಭಾಗದಲ್ಲಿ ಬಿಜೆಪಿ ಆಡಳಿತದ ವಿರುದ್ಧ ಆಕ್ರೋಶದ ಕಟ್ಟೆ ಒಡೆದಿದೆ. ಬಿಜೆಪಿ ಭಾವನೆಗಳ ಮೇಲೆ ಹೋಗುತ್ತಿದೆ, ನಾವು ಅಭಿವೃದ್ಧಿ ಮೇಲೆ ಹೋಗುತ್ತಿದ್ದೇವೆ ಎಂದರು.

ಈಗಾಗಲೇ ನಾಲ್ಕು ಗ್ಯಾರಂಟಿ ಘೋಷಣೆ ಮಾಡಿದ್ದೇವೆ. ಇನ್ನೊಂದು ಘೋಷಣೆ ರಾಹುಲ್ ಗಾಂಧಿ ನಿಮ್ಮ ಮುಂದೆ ಇಟ್ಟಿದ್ದಾರೆ. ನಾವು ನುಡಿದಂತೆ ನಡೆಯಲಿಲ್ಲ ಅಂದರೆ ಮತ್ತೆ ನಿಮ್ಮ ಎದುರು ವೋಟ್ ಕೇಳಲು ಬರುವುದಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು. ಪ್ರಸಕ್ತ ಚುನಾವಣೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸಲಾಗುವುದು ಎಂದು ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:54 pm, Thu, 27 April 23

Follow Us
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಟೋಲ್ ಗೇಟ್ ದಾಟುವಾಗ ಕಾರಿನ ಮೇಲೆ ಬಿದ್ದ ಸಿಮೆಂಟ್ ಟ್ಯಾಂಕರ್
ಟೋಲ್ ಗೇಟ್ ದಾಟುವಾಗ ಕಾರಿನ ಮೇಲೆ ಬಿದ್ದ ಸಿಮೆಂಟ್ ಟ್ಯಾಂಕರ್
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ ಇಲ್ಲಿದೆ
ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ ಇಲ್ಲಿದೆ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ