AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ದೆಹಲಿಯತ್ತ ಡಿಕೆ ಶಿವಕುಮಾರ್: ಇಂದೇ ಫೈನಲ್​, ಯಾರಾಗುತ್ತಾರೆ ಸಿಎಂ? ಎಲ್ಲರ ಚಿತ್ತ ದಿಲ್ಲಿಯತ್ತ

ಕರ್ನಾಟಕ ಸಿಎಂ ಯಾರಾಗುತ್ತಾರೆ ಎನ್ನುವ ಗೊಂದಲ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ವರಿಷ್ಠರು ಇಂದೇ ಸಿಎಂ ಯಾರು ಎನ್ನುವುದನ್ನು ಘೋಷಣೆ ಮಾಡುವ ಸಾಧ್ಯತೆಗಳಿವೆ. ಹೀಗಾಗಿ ಎಲ್ಲರ ಚಿತ್ತ ದೆಹಲಿಯತ್ತ ನೆಟ್ಟಿದೆ.

ಕೊನೆಗೂ ದೆಹಲಿಯತ್ತ ಡಿಕೆ ಶಿವಕುಮಾರ್: ಇಂದೇ ಫೈನಲ್​, ಯಾರಾಗುತ್ತಾರೆ  ಸಿಎಂ? ಎಲ್ಲರ ಚಿತ್ತ ದಿಲ್ಲಿಯತ್ತ
ಡಿಕೆ ಶಿವಕುಮಾರ್
ರಮೇಶ್ ಬಿ. ಜವಳಗೇರಾ
|

Updated on: May 16, 2023 | 7:23 AM

Share

ಮುಖ್ಯಾಂಶಗಳು

  • ಇಂದು ದೆಹಲಿಗೆ ತೆರಳಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
  • ಎಐಸಿಸಿ ಅಧ್ಯಕ್ಷ ಖರ್ಗೆ, ವರಿಷ್ಠರನ್ನು ಭೇಟಿಯಾಗಲಿರುವ ಡಿಕೆಶಿ
  • ಖುದ್ದು ಸೋನಿಯಾ ಗಾಂಧಿ ಭೇಟಿಯಾಗಲಿರುವ ಡಿ.ಕೆ.ಶಿವಕುಮಾರ್

ಬೆಂಗಳೂರು/ನವದೆಹಲಿ: ಭಾರಿ ಬಹುಮತದೊಂದಿಗೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಫಲಿತಾಂಶ ಪ್ರಕಟಗೊಂಡು ಎರಡು ದಿನಗಳು ಕಳೆದಿವೆ. ಆದ್ರೆ, ಸಿಎಂ ಯಾರು ಎನ್ನುವುದೇ ತಿಳಿಯುತ್ತಿಲ್ಲ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿ ಹುದ್ದೆಗೆ ಹಿಡಿದಿರುವ ಬಿಗಿ ಪಟ್ಟನ್ನು ದಿನ ಕಳೆದಂತೆ ಮತ್ತಷ್ಟು ಬಿಗಿಯಾಗುತ್ತಿದೆ. ಹೀಗಾಗಿ ಕರ್ನಾಟಕದ ಮುಂದಿನ ಸಿಎಂ ಯಾರು ಎನ್ನುವ ಫೈಟ್, ಈಗ ದಿಲ್ಲಿಗೆ ಶಿಫ್ಟ್ ಆಗಿದ್ದು, ಕಗ್ಗಂಟು ಬಗೆಹರಿಸುವ ಹೊಣೆ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಅವರ ಹೆಗಲೇರಿದೆ. ಹೀಗಾಗಿ ಎಲ್ಲರ ಚಿತ್ತ ಈಗ ದೆಹಲಿಯತ್ತ ನೆಟ್ಟಿದೆ. ಸಿದ್ದರಾಮಯ್ಯ ಸೈಲೆಂಟಾಗೇ ದೆಹಲಿಯ ಗೂಡು ಸೇರಿದ್ದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೊಟ್ಟೆ ನೋವಿನ ಕಾರಣ ಹೇಳಿ ಬೆಂಗಳೂರಲ್ಲೇ ಉಳಿದಿದ್ದಾರೆ. ಇದೀಗ ಮತ್ತೆ ಡಿಕೆ ಶಿವಕುಮಾರ್​ ಇಂದು(ಮೇ 16) ಬೆಳಗ್ಗೆ ದೆಹಲಿಗೆ ತೆರಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಯಾರು ಎನ್ನುವುದು ಇಂದೇ ಅಂತಿಮಗೊಳ್ಳುವ ಎಲ್ಲಾ ಸಾಧ್ಯತೆಗಳಿವೆ.

ಇದನ್ನೂ ಓದಿ: ಸಿಎಂ ಹುದ್ದೆ ತಿಕ್ಕಾಟ ನಡುವೆಯೇ ಸಚಿವ ಸ್ಥಾನಕ್ಕಾಗಿ ಭರ್ಜರಿ ಲಾಬಿ: ಹೊಸ ಸಿಎಂಗೆ ಸಂಪುಟ ರಚನೆ ದೊಡ್ಡ ಸವಾಲ್‌

ಹೌದು…ಇಂದು ಬೆಳಗ್ಗೆ ಡಿಕೆ ಶಿವಕುಮಾರ್​ ನವದೆಹಲಿಗೆ ತೆರಳಿ ಸೋನಿಯಾ ಗಾಂಧಿ ಭೇಟಿಯಾಗಲಿದ್ದಾರೆ. ಶಿಮ್ಲಾದಿಂದ ಸೋನಿಯಾ ಗಾಂಧಿ ಬರುವ ವೇಳೆಗೆ ದೆಹಲಿ ತಲುಪಲು ಡಿಕೆ ಶಿವಕುಮಾರ್ ಪ್ಲಾನ್ ಮಾಡಿದ್ದಾರೆ. ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ. ಯಾವುದೇ ಕ್ಷಣದಲ್ಲಾದರೂ ಮುಂದಿನ ಸಿಎಂ ಯಾರು ಎನ್ನುವ ಘೋಷಣೆ ಹೊರ ಬೀಳುವ ಸಾಧ್ಯತೆಯಿದೆ.

ಅಂತಿಮವಾಗದ ಸಿಎಂ ಆಯ್ಕೆ

ರಾಜ್ಯದಿಂದ ವರದಿ ಕೊಂಡೊಯ್ದಿರುವ ಎಐಸಿಸಿ ವೀಕ್ಷಕರು ದೆಹಲಿಯಲ್ಲಿ ಖರ್ಗೆ ನಿವಾಸದಲ್ಲಿ ಸಭೆ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್, ಎಐಸಿಸಿ ವೀಕ್ಷಕರಾದ ಜಿತೇಂದ್ರ ಸಿಂಗ್, ಬಬಾರಿಯಾ ಸೇರಿ ಇತರರು ಭಾಗಿಯಾಗಿದ್ರು. ಖರ್ಗೆ ನಿವಾಸದಲ್ಲಿ ಮೂರು ಗಂಟೆಗೂ ಹೆಚ್ಚು ಕಾಲ ವೀಕ್ಷಕರು ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ, ವೇಣುಗೋಪಾಲ್ ಚರ್ಚೆ ನಡೆಸಿದ್ದಾರೆ. ವೀಕ್ಷಕರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ವರದಿಯನ್ನು ಸಲ್ಲಿಸಿದ್ದಾರೆ. ಆದ್ರೆ ಸಿಎಂ ಆಯ್ಕೆ ಬಗ್ಗೆ ಅಂತಿಮ‌ ನಿರ್ಧಾರ ತೆಗೆದುಕೊಂಡಿಲ್ಲ.

ಸಿಎಂ ಆಯ್ಕೆ ಬಗ್ಗೆ ಹೈಕಮಾಂಡ್‌ನಲ್ಲೇ ಗೊಂದಲ!

ಸಿಎಂ ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ನಾಯಕರಲ್ಲೇ ಗೊಂದಲ ಸೃಷ್ಟಿಯಾಗಿದೆ ಎನ್ನಲಾಗಿದೆ. ಸಿದ್ದರಾಮಯ್ಯಗೆ ಸಿಎಂ ಸ್ಥಾನ ನೀಡಲು ರಾಹುಲ್ ಗಾಂಧಿ ಒಲವು ತೋರಿಸಿದ್ದಾರೆ ಎನ್ನಲಾಗಿದೆ. ಶಾಸಕರು, ಸಮುದಾಯಗಳ ಬೆಂಬಲ ಆಧರಿಸಿ ರಾಹುಲ್ ಸಿದ್ದರಾಮಯ್ಯ ಪರ ಒಲವು ತೋರಿದ್ದಾರೆ ಎನ್ನಲಾಗಿದೆ. ಆದ್ರೆ ಕಾಂಗ್ರೆಸ್ ಭವಿಷ್ಯದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಯೋಚಿಸಿದ್ದು, ಸಿದ್ದರಾಮಯ್ಯಗೆ ಸಿಎಂ ಸ್ಥಾನ ನೀಡುವುದರಿಂದ ಆಗುವ ಲಾಭವೇನು? ಸಿದ್ದರಾಮಯ್ಯ ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯಲಿದ್ದಾರೆ. ಮುಂದಿನ ಚುನಾವಣೆ ಗೆಲ್ಲುವ ನಾಯಕತ್ವ ಬೆಳೆಸುವ ವಾದ ಮುಂದಿಟ್ಟಿದ್ದಾರೆ ಎನ್ನಲಾಗಿದೆ. ಇನ್ನು ಇಂದು ರಾಜ್ಯ ಕಾಂಗ್ರೆಸ್‌ ನಾಯಕರ ಜೊತೆ ವರಿಷ್ಠರು ಸಭೆ ನಡೆಸಲಿದ್ದಾರೆ. ಸಭೆ ಬಳಿಕ ಯಾರು ಸಿಎಂ ಆಗುತ್ತಾರೆಂದು ತೀರ್ಮಾನವಾಗಲಿದೆ.

ಡಿಕೆಶಿಗೆ ರಾಜಸ್ಥಾನ ಮಾದರಿ ಭಯ!

ಅಧಿಕಾರ ಹಂಚಿಕೆ ವಾದವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿರಾಕರಿಸಿದ್ದಾರೆ ಎನ್ನಲಾಗಿದೆ. ಛತ್ತೀಸ್​ಗಢ, ರಾಜಸ್ಥಾನದ ಉದಾಹರಣೆಯನ್ನು ಡಿ.ಕೆ.ಶಿವಕುಮಾರ್ ನೀಡ್ತಿದ್ದಾರೆ ಎನ್ನಲಾಗಿದೆ. ಎರಡು ರಾಜ್ಯಗಳಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ನಡೆದಿತ್ತು. ಆದ್ರೆ ಸಿಎಂ ಸ್ಥಾನ ಬಿಟ್ಟುಕೊಡದ ಅಶೋಕ್ ಗೆಹ್ಲೋಟ್, ಭೂಪೇಶ್ ಶಾಸಕರ ಬೆಂಬಲದಿಂದ ಇನ್ನೂ ಮುಂದುವರಿದಿದ್ದಾರೆ. ಇದೇ ಆತಂಕ ರಾಜ್ಯದಲ್ಲೂ ಡಿಕೆಶಿಗೆ ಕಾಡ್ತಿದೆ ಎನ್ನಲಾಗಿದೆ. ಶಾಸಕರ ಬೆಂಬಲದೊಂದಿಗೆ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯಬಹುದು ಅನ್ನೋ ಅನ್ನೋ ಆತಂಕ ಡಿಕೆಶಿಯದ್ದು ಎನ್ನಲಾಗುತ್ತಿದೆ.

ಒಟ್ಟಾರೆ ನಿಚ್ಚಳ ಬಹುಮತ ಪಡೆದಿರುವ ಕಾಂಗ್ರೆಸ್‌ಗೆ ಸಿಎಂ ಸ್ಥಾನದ ಆಯ್ಕೆ ಕಗ್ಗಂಟಾಗಿದೆ. ಶಾಸಕರ ಬೆಂಬಲ ಇದ್ದವರನ್ನೇ ಹೈಕಮಾಂಡ್ ಅಂತಿಮವಾಗಿ ಸಿಎಂ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆಯಿದೆ. ಸಿದ್ದರಾಮಯ್ಯ, ಡಿಕೆಶಿ ಇಬ್ಬರನ್ನು ಜೊತೆಗೆ ಕೂರಿಸಿ ವರಿಷ್ಠರು ಮಾತನಾಡಿಸುವ ಸಾಧ್ಯತೆಯಿದೆ. ಎಲ್ಲವೂ ಅಂದುಕೊಂಡಂತೆ ಆದ್ರೆ ಮೂಲಗಳ ಪ್ರಕಾರ ಇಂದೇ ಸಿಎಂ ಯಾರು ಎನ್ನುವ ಗೊಂದಲಗಳಿಗೆ ತೆರೆ ಬೀಳಲಿದ್ದು, ಇನ್ನೆರಡು ದಿನದಲ್ಲಿ ಸರ್ಕಾರ ರಚನೆಯಾಗುವ ಸಾಧ್ಯತೆಯಿದೆ ಎನ್ನಾಲಾಗಿದೆ.

Follow Us
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ