AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟ್ಟು ಬಿಡದ ಡಿಕೆ ಶಿವಕುಮಾರ್; ಸಿದ್ದರಾಮಯ್ಯ ವಿರುದ್ಧ ದಲಿತ ಸಿಎಂ ಅಸ್ತ್ರ ಪ್ರಯೋಗಿಸಿದ ಕೆಪಿಸಿಸಿ ಅಧ್ಯಕ್ಷ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನ ಗಳಿಸಿ ಭರ್ಜರಿ ಬಹುಮತದೊಂದಿಗೆ ಗೆದ್ದು ಬೀಗಿದ್ದ ಕಾಂಗ್ರೆಸ್ (Congress) ಪಕ್ಷಕ್ಕೆ ಈಗ ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ.

ಪಟ್ಟು ಬಿಡದ ಡಿಕೆ ಶಿವಕುಮಾರ್; ಸಿದ್ದರಾಮಯ್ಯ ವಿರುದ್ಧ ದಲಿತ ಸಿಎಂ ಅಸ್ತ್ರ ಪ್ರಯೋಗಿಸಿದ ಕೆಪಿಸಿಸಿ ಅಧ್ಯಕ್ಷ
ಡಿಕೆ ಶಿವಕುಮಾರ್ & ಸಿದ್ದರಾಮಯ್ಯ
ಗಣಪತಿ ಶರ್ಮಾ
|

Updated on: May 17, 2023 | 4:52 PM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನ ಗಳಿಸಿ ಭರ್ಜರಿ ಬಹುಮತದೊಂದಿಗೆ ಗೆದ್ದು ಬೀಗಿದ್ದ ಕಾಂಗ್ರೆಸ್ (Congress) ಪಕ್ಷಕ್ಕೆ ಈಗ ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಸಿಎಂ ಸ್ಥಾನಕ್ಕೆ ಪೈಪೋಟಿ ಕೊನೆಗೊಳ್ಳುವ ಲಕ್ಷಣಗಳು ಕಾಣಿಸುತ್ತಿಲ್ಲ. ಈ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆ ಉಭಯ ನಾಯಕರು ಹಲವು ಸುತ್ತಿನ ಮಾತುಕತೆ ನಡೆಸಿದ್ದಾತೆ. ಆದರೆ, ಇವುಗಳು ಯಾವುವೂ ಪ್ರಯೋಜನ ನೀಡಿಲ್ಲ.

ಈ ಮಧ್ಯೆ, ಸಿದ್ದರಾಮಯ್ಯ ವಿರುದ್ಧ ಡಿಕೆ ಶಿವಕುಮಾರ್ ದಲಿತ ಸಿಎಂ ಅಸ್ತ್ರ ಪ್ರಯೋಗಿಸಿದ್ದಾರೆ. ನಾನು ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ, ಅಧಿಕಾರಕ್ಕೆ ತಂದಿದ್ದೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಜತೆ ಬಿಗಿಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್, ನನಗೆ ಸಿಎಂ ಆಗಲು ಅವಕಾಶ ನೀಡದಿದ್ದರೆ ನೀವೇ ಆಗಿ ಎಂದು ಖರ್ಗೆ ಅವರನ್ನು ಒತ್ತಾಯಿಸಿದ್ದಾರೆ.

2018ರಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ಎದುರಿಸಿದ್ದೆವು. ಅವರ ನೇತೃತ್ವದಲ್ಲಿ ಚುನಾವಣೆಗೆ ಹೋಗಿ ಸೋತಿದ್ದೆವು. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಪಕ್ಷ ಅಧಿಕಾರಕ್ಕೆ ತಂದಿದ್ದೇನೆ. ಒಂದೋ ಸಿಎಂ ಆಗಲು ನನಗೆ ಅವಕಾಶ ಕೊಡಿ ಅಥವಾ ನೀವೇ ಆಗಿ. ರಾಜ್ಯದಲ್ಲಿ ದಲಿತ ಸಿಎಂ ಮಾಡುವುದಕ್ಕೆ ನನ್ನ ವಿರೋಧವಿಲ್ಲ. ದಲಿತರು ಸಿಎಂ ಆದರೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಖರ್ಗೆ ಬಳಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ತೀರ್ಮಾನ ಅಂತಿಮವಾಗಿಲ್ಲ; ರಣದೀಪ್ ಸುರ್ಜೇವಾಲ

ಸೋನಿಯಾ, ರಾಹುಲ್ ಜತೆ ಚರ್ಚಿಸಿ ನಿರ್ಧಾರ

ಶಿವಕುಮಾರ್ ನಡುವಣ ಸುದೀರ್ಘ ಮಾತುಕತೆ ನಂತರ ಖರ್ಗೆ, ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಜತೆ ಚರ್ಚಿಸಿ ಅಂತಿಮ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ. ಹೀಗಾಗಿ ಸಿಎಂ ಆಯ್ಕೆ ನಿರ್ಧಾರ ಕಾಯ್ದಿರಿಸಲಾಗಿದೆ. ಗಾಂಧಿ ಕುಟುಂಬದ ಜತೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್