AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls 2023: ಬಿಜೆಪಿ ಶಾಸಕ ಎಂಪಿ‌ ರೇಣುಕಾಚಾರ್ಯ ಆಸ್ತಿ ಎಷ್ಟಿದೆ ಗೊತ್ತಾ?

ಈಗಾಗಲೇ ಮೂರು ಸಲ ಶಾಸಕರಾಗಿ ಒಂದು ಬಾರಿ ಸಚಿವರಾಗಿರುವ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂಪಿ‌ ರೇಣುಕಾಚಾರ್ಯ ಅವರು ನಿನ್ನೆ(ಏ.20) ಐದನೇ ಬಾರಿ ಚುನಾವಣಾ ಕಣಕ್ಕಿಳಿದಿದ್ದು, ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅವರ ಆಸ್ತಿ ವಿವರ ಹೀಗಿದೆ.

Karnataka Assembly Polls 2023: ಬಿಜೆಪಿ ಶಾಸಕ ಎಂಪಿ‌ ರೇಣುಕಾಚಾರ್ಯ ಆಸ್ತಿ ಎಷ್ಟಿದೆ ಗೊತ್ತಾ?
ಎಂಪಿ ರೇಣುಕಾಚಾರ್ಯ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Apr 21, 2023 | 10:02 AM

ದಾವಣಗೆರೆ: ಈಗಾಗಲೇ ಮೂರು ಸಲ ಶಾಸಕರಾಗಿ ಒಂದು ಬಾರಿ ಸಚಿವರಾಗಿರುವ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂಪಿ‌ ರೇಣುಕಾಚಾರ್ಯ(M. P. Renukacharya) ಅವರು ನಿನ್ನೆ(.20) ಐದನೇ ಬಾರಿ ಚುನಾವಣಾ ಕಣಕ್ಕಿಳಿದಿದ್ದು, ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಿನ್ನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಹಿರೇಕಲ್ಮಠದ ಚನ್ನಪ್ಪಸ್ವಾಮೀ ಮಠದಲ್ಲಿ ಪೂಜೆ ಸಲ್ಲಿಸಿ ಸಾವಿರಾರು ಜನರ ಜೊತೆ ಮೆರವಣಿಗೆಯಲ್ಲಿ ತೆರಳಿದ ರೇಣುಕಾಚಾರ್ಯ ಅವರು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ವೇಳೆ ಮಾತನಾಡಿ, ಈ ಸಲ ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಅದು ಸೂರ್ಯ ಚಂದ್ರರಷ್ಟೆ ಸತ್ಯ. ನಿನ್ನೆ ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಮುಖಂಡರು ಮಾಜಿ ಸಿಎಂ ಯಡಿಯೂರಪ್ಪ ನೇತ್ರತ್ವದಲ್ಲಿ ಸಭೆ ಮಾಡಿ ವೀರಶೈವ ಲಿಂಗಾಯತರಿಗೆ ಸಿಎಂ ಪಟ್ಟ ನೀಡುವಂತೆ ಸಂದೇಶ ನೀಡಲಾಗಿದೆ ಎಂದರು. ಇನ್ನು ರೇಣುಕಾಚಾರ್ಯ ಅವರ ಹೆಸರಿನಲ್ಲಿ ಚರಾಸ್ತಿ ಎಷ್ಟಿದೆ? ಸ್ಥಿರಾಸ್ತಿ ಎಷ್ಟಿದೆ? ಇವರ ಕುಟುಂಬದ ಸದಸ್ಯರ ಹೆಸರಿನಲ್ಲಿ ಏನೇನಿದೆ? ಎಷ್ಟೆಷ್ಟಿದೆ? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಇದನ್ನೂ ಓದಿ:ಡಿಕೆ ಶಿವಕುಮಾರ್ ಕಾಂಗ್ರೆಸ್ ಟಿಕೆಟ್​ ಮಾರಾಟ ಮಾಡಿಕೊಂಡಿದ್ದಾರೆ; ಮೊಯ್ದೀನ್ ಬಾವಾ ಗಂಭೀರ ಆರೋಪ

ಎಂಪಿ‌ ರೇಣುಕಾಚಾರ್ಯ ಆಸ್ತಿ ವಿವರ ಹೀಗಿದೆ

ಹೊನ್ನಾಳಿ ಬಿಜೆಪಿ ಶಾಸಕ ಎಂಪಿ‌ ರೇಣುಕಾಚಾರ್ಯ ಅವರು 2.84 ಕೋಟಿ ಮೌಲ್ಯದ ಚರಾಸ್ತಿ, 6.44 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಜೊತೆಗೆ ಪತ್ನಿ ಸುಮಾ ಹೆಸರಿನಲ್ಲಿ 1 ಕೋಟಿ 75 ಲಕ್ಷ ರೂಪಾಯಿ‌ ಮೌಲ್ಯದ ಆಸ್ತಿ ಹಾಗೂ ಇಬ್ಬರು ಮಕ್ಕಳಾದ ಚಂದನ ಮತ್ತು ಚೇತನಾ ಹೆಸರಿನಲ್ಲಿ 20.16 ಲಕ್ಷ ರೂಪಾಯಿ ಆಸ್ತಿ ಇರುವುದಾಗಿ ಘೋಷಣೆ ಮಾಡುವ ಮೂಲಕ ಒಟ್ಟು 11.40ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನ ಹೊಂದಿದ್ದಾರೆ. ಮತ್ತು ಐದು ಕೋಟಿ ನಾಲ್ಕು ಲಕ್ಷ ರೂಪಾಯಿ ಸಾಲ ರೇಣುಕಾಚಾರ್ಯ ಅವರ ಮೇಲಿದೆ. ಇದರ ಜೊತೆಗೆ ಇವರ ವಿರುದ್ಧ ಐದು ಅಪರಾಧ ಪ್ರಕರಣಗಳು ಕೋರ್ಟ್​ನಲ್ಲಿ ತನಿಖಾ ಹಂತದಲ್ಲಿದೆ ಎಂದು ನಾಮಪತ್ರ ಸಲ್ಲಿಸುವಾಗ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ